ರಾಜಕೀಯ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಕುಮಾರಸ್ವಾಮಿ: ಮೈತ್ರಿ ಕುರಿತು ಮಾತುಕತೆ

Nagaraja AB

ನವದೆಹಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ದೀರ್ಘ ಸಮಾಲೋಚಿಸಲಾಯಿತು ಎಂದು ತಿಳಿಸಿದ್ದಾರೆ. 

ಜೆಡಿಎಸ್ - ಬಿಜೆಪಿ ಮೈತ್ರಿ ಕುರಿತು ಚರ್ಚಿಸಲಾಯಿತು. ಕರ್ನಾಟಕದ ಒಳಿತಿಗಾಗಿ ಕೇಂದ್ರ ಸರ್ಕಾರದ ಬೆಂಬಲ ಸದಾ ಇರುತ್ತದೆ ಎಂಬುದಾಗಿ ರಾಜನಾಥ್ ಸಿಂಗ್ ಭರವಸೆ ನೀಡಿದರು ಎಂದು ಕುಮಾರಸ್ವಾಮಿ  ಹೇಳಿದ್ದಾರೆ. 

SCROLL FOR NEXT