ಬಿಕೆ ಹರಿಪ್ರಸಾದ್, ಯತ್ನಾಳ್ 
ರಾಜಕೀಯ

ಬಿಕೆ ಹರಿಪ್ರಸಾದ್, ಯತ್ನಾಳ್ ಸೇರಿ ಒಂದು ಪಕ್ಷ ಪ್ರಾರಂಭಿಸುವುದು ಒಳ್ಳೆಯದು: ಬಿಸಿ ಪಾಟೀಲ್

ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮಯ ಸಿಕ್ಕಗಲೆಲ್ಲಾ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮಯ ಸಿಕ್ಕಗಲೆಲ್ಲಾ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.

ಮತ್ತೊಂದೆಡೆ ಬಿಜೆಪಿಯಲ್ಲಿಯೂ ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ಸ್ಥಾನ ಯಾವುದು ದೂರೆಯದೆ ಕಂಗಲಾಗಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಕೂಡಾ ವಿಜಯೇಂದ್ರ ಹಾಗೂ ಅಶೋಕ್ ವಿರುದ್ಧ ಹೇಳಿಕೆ ನೀಡುತ್ತಾ ಪಕ್ಷವನ್ನು ಮುಜುಗರಕ್ಕೆ ಸಿಲುಕಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮಾಜಿ ಸಚಿವ ಬಿ. ಸಿ ಪಾಟೀಲ್  ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಬಿಕೆ ಹರಿಪ್ರಸಾದ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು ಎಂದಿದ್ದಾರೆ.

ಬಿ ಸಿ ಪಾಟೀಲ್ ಅವರ ಈ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಯತ್ನಾಳ್ ತಮ್ಮ ಸ್ವಂತ ಕ್ಷೇತ್ರದ ಬಗ್ಗೆ ಯೋಚನೆ ಮಾಡಿ, ಪಕ್ಷದ ಬಗ್ಗೆ ಅಮೇಲೆ ಯೋಚಿಸಬಹುದು ಎಂದು ತಿರುಗೇಟು ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT