ಬಿಕೆ ಹರಿಪ್ರಸಾದ್, ಯತ್ನಾಳ್ 
ರಾಜಕೀಯ

ಬಿಕೆ ಹರಿಪ್ರಸಾದ್, ಯತ್ನಾಳ್ ಸೇರಿ ಒಂದು ಪಕ್ಷ ಪ್ರಾರಂಭಿಸುವುದು ಒಳ್ಳೆಯದು: ಬಿಸಿ ಪಾಟೀಲ್

ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮಯ ಸಿಕ್ಕಗಲೆಲ್ಲಾ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮಯ ಸಿಕ್ಕಗಲೆಲ್ಲಾ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.

ಮತ್ತೊಂದೆಡೆ ಬಿಜೆಪಿಯಲ್ಲಿಯೂ ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ಸ್ಥಾನ ಯಾವುದು ದೂರೆಯದೆ ಕಂಗಲಾಗಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಕೂಡಾ ವಿಜಯೇಂದ್ರ ಹಾಗೂ ಅಶೋಕ್ ವಿರುದ್ಧ ಹೇಳಿಕೆ ನೀಡುತ್ತಾ ಪಕ್ಷವನ್ನು ಮುಜುಗರಕ್ಕೆ ಸಿಲುಕಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮಾಜಿ ಸಚಿವ ಬಿ. ಸಿ ಪಾಟೀಲ್  ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಬಿಕೆ ಹರಿಪ್ರಸಾದ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು ಎಂದಿದ್ದಾರೆ.

ಬಿ ಸಿ ಪಾಟೀಲ್ ಅವರ ಈ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಯತ್ನಾಳ್ ತಮ್ಮ ಸ್ವಂತ ಕ್ಷೇತ್ರದ ಬಗ್ಗೆ ಯೋಚನೆ ಮಾಡಿ, ಪಕ್ಷದ ಬಗ್ಗೆ ಅಮೇಲೆ ಯೋಚಿಸಬಹುದು ಎಂದು ತಿರುಗೇಟು ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT