ಪ್ರಜ್ವಲ್ ರೇವಣ್ಣ, ಪ್ರೀತಂ ಗೌಡ 
ರಾಜಕೀಯ

ಪ್ರಜ್ವಲ್ ರೇವಣ್ಣ ಎನ್ ಡಿಎ ಅಧಿಕೃತ ಅಭ್ಯರ್ಥಿಯಲ್ಲ: ಪ್ರೀತಂ ಗೌಡ

ಇತ್ತೀಚಿಗೆ ಪ್ರಜ್ವಲ್ ರೇವಣ್ಣ 2024ರ ಲೋಕಸಭಾ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಘೋಷಿಸಿರುವುದಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಸನ: ಇತ್ತೀಚಿಗೆ ಪ್ರಜ್ವಲ್ ರೇವಣ್ಣ 2024ರ ಲೋಕಸಭಾ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಘೋಷಿಸಿರುವುದಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನ ಸೇರಿದಂತೆ ಯಾವುದೇ ಲೋಕಸಭಾ ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಅಧಿಕೃತ  ಎನ್ ಡಿಎ ಅಭ್ಯರ್ಥಿ ಎಂದು ಮೈತ್ರಿಕೂಟ  ಘೋಷಿಸಿಲ್ಲ ಎಂದು ಅವರು ಶನಿವಾರ ಹೇಳಿದರು. 

ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜೆಡಿಎಸ್ ವರಿಷ್ಠ ಹೆಚ್. ಡಿ.ದೇವೇಗೌಡರು ತಮ್ಮ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಎನ್‌ಡಿಎ ನಾಯಕರು ಸೂಕ್ತ ಸಮಯದಲ್ಲಿ ಎಲ್ಲಾ 28 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ ಎಂದರು.

ಬಿಜೆಪಿಯು ಹಲವಾರು ಗೆಲ್ಲುವ ಅಭ್ಯರ್ಥಿಗಳನ್ನು ಹೊಂದಿದ್ದು, ಆಯಾ ಕ್ಷೇತ್ರಗಳಲ್ಲಿ ಇಬ್ಬರು ಬಿಜೆಪಿ ಶಾಸಕರು ಪ್ರಬಲ ವಾಗಿರುವುದರಿಂದ ಪ್ರಸ್ತುತ ಪರಿಸ್ಥಿತಿ ಬಹುಶಃ ಬಿಜೆಪಿ ಅಭ್ಯರ್ಥಿಗೆ ನೆರವಾಗುತ್ತದೆ. ಎನ್‌ಡಿಎ ನಾಯಕರು ಘೋಷಿಸುವ ಯಾವುದೇ ಅಭ್ಯರ್ಥಿಯನ್ನು ಮೈತ್ರಿ ಪಕ್ಷಗಳ ನಾಯಕರು ಬೆಂಬಲಿಸಬೇಕು ಎಂದು ಪ್ರೀತಂ ಹೇಳಿದರು. 

ಮೈತ್ರಿ ಬಗ್ಗೆ ಮೂಲ ಕಾರ್ಯಕರ್ತರಲ್ಲಿ ಸಮನ್ವಯದ ಕೊರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಾಜಿ ಶಾಸಕರು, 2024 ರ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಯಿಂದ ಸ್ಪರ್ಧಿಸಲು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ನಡುವೆ ಹೊಂದಾಣಿಕೆಯ ಅಗತ್ಯವಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT