ಸಿಎಂ ಸಿದ್ದರಾಮಯ್ಯ 
ರಾಜಕೀಯ

ಕೋವಿಡ್ ಹೆಸರಲ್ಲಿ ಬಿಜೆಪಿ ಅಕ್ರಮ: ತನಿಖಾ ಆಯೋಗಕ್ಕೆ ಯತ್ನಾಳ್ ದಾಖಲೆ ನೀಡಲಿ ಎಂದ ಸಿಎಂ ಸಿದ್ದರಾಮಯ್ಯ

ಕೋವಿಡ್ ಹೆಸರಿನಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೂ.40 ಸಾವಿರ ಕೋಟಿ ಅಕ್ರಮ ನಡೆಸಿದೆ ಎಂದು ಆರೋಪ ಮಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತನಿಖಾ ಆಯೋಗಕ್ಕೆ ಈ ಕುರಿತು ದಾಖಲೆ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಕೊಪ್ಪಳ: ಕೋವಿಡ್ ಹೆಸರಿನಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೂ.40 ಸಾವಿರ ಕೋಟಿ ಅಕ್ರಮ ನಡೆಸಿದೆ ಎಂದು ಆರೋಪ ಮಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತನಿಖಾ ಆಯೋಗಕ್ಕೆ ಈ ಕುರಿತು ದಾಖಲೆ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋವಿಡ್ ಸಮಯದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಯತ್ನಾಳ್ ನೇರ ಆರೋಪ ಮಾಡಿದ್ದಾರೆ. ಬಿಜೆಪಿ ಸರ್ಕಾರದ‌ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಹಗರಣ ಕುರಿತು ತನಿಖೆಗಾಗಿ ಆಯೋಗ ರಚಿಸಿದ್ದೇವೆ. ಆರೋಪ ಮಾಡಿದವರು ಆಯೋಗಕ್ಕೆ ದಾಖಲೆಗಳನ್ನು ಒದಗಿಸಬೇಕು ಎಂದು ಹೇಳಿದರು.

ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಅವರನ್ನು ಸಿಎಂ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಿದ್ದಕ್ಕೆ ಎಚ್.ಡಿ.ಕುಮಾರಸ್ವಾಮಿ 'ರಾಯರಡ್ಡಿ ಆರ್ಥಿಕ ತಜ್ಞರೇ' ಎಂದು ಪ್ರಶ್ನಿಸಿದ್ದರ ಕುರಿತು ಪ್ರತಿಕ್ರಿಯೆ ನೀಡಿದ ಅವರು, 'ರಾಯರಡ್ಡಿ ಆರ್ಥಿಕವಾಗಿ ಸಾಕಷ್ಟು ವಿಷಯ ತಿಳಿದುಕೊಂಡಿದ್ದಾರೆ. ಹಾಗಾಗಿ ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಯಡಿಯೂರಪ್ಪ ಸಿಎಂ ಇದ್ದಾಗಲೂ ಆರ್ಥಿಕ ಸಲಹೆಗಾರರನ್ನು ನೇಮಿಸಿಕೊಂಡಿದ್ದರು. ಆವಾಗ ಯಾರೂ ಕೇಳಲಿಲ್ಲ' ಎಂದು ಪ್ರಶ್ನಿಸಿದರು. ಬಳಿಕ ಕುಮಾರಸ್ವಾಮಿ ಆರೋಪಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೊದಲ ಏಕದಿನ ಪಂದ್ಯ: ದಕ್ಷಿಣ ಆಫ್ರಿಕಾ ಅಬ್ಬರದ ಬ್ಯಾಟಿಂಗ್: ಕೊನೆಯ ಓವರ್ ನಲ್ಲಿ ಭಾರತಕ್ಕೆ ವಿರೋಚಿತ ಜಯ!

'ಭಾರತಕ್ಕೆ ಸೇವೆ ನೀಡಲು ಸ್ಟಾರ್‌ಲಿಂಕ್ ಸಿದ್ಧ, ಗ್ರಾಮೀಣ ಸಂಪರ್ಕಕ್ಕೆ ಸಹಾಯ ಮಾಡುತ್ತದೆ': Elon Musk

ತಮಿಳುನಾಡು: ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ; ಕನಿಷ್ಠ 11 ಮಂದಿ ಸಾವು, 20 ಜನರಿಗೆ ಗಾಯ!

Cricket: ಕೇವಲ 11 ರನ್ ಗೆ 3 ವಿಕೆಟ್; ಗೆಲುವಿನ ಸನಿಹ ಬಂದಿದ್ದ ದಕ್ಷಿಣ ಆಫ್ರಿಕಾ ಸೋಲಿನಲ್ಲೂ ದಾಖಲೆಗಳ ಸುರಿಮಳೆ!

'ಆ ಹಸಿವು ಇನ್ನೂ ಇದೆ.. ನಾನು ಉತ್ತಮ ಸ್ಥಿತಿಯಲ್ಲಿದ್ದೇನೆ': Virat kohli ಖಡಕ್ ಸಂದೇಶ! ಟೆಸ್ಟ್ ಕ್ರಿಕೆಟ್ ಗೆ ಕೊಹ್ಲಿ ವಾಪಸ್?

SCROLL FOR NEXT