ಡಿ ಕೆ ಶಿವಕುಮಾರ್ 
ರಾಜಕೀಯ

ಸಂಕ್ರಾಂತಿ ನಂತರ ನಿಗಮ-ಮಂಡಳಿ ನೇಮಕಾತಿ; ಶಾಸಕರಷ್ಟೆ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆ ಶಿವಕುಮಾರ್

ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರು: ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲಾ ನಾಯಕರು ಕುಳಿತು ಚರ್ಚೆ ಮಾಡುತ್ತೇವೆ. ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ಕೊಟ್ಟಿರುತ್ತಾರೆ. ಅದಕ್ಕಾಗಿ ಎಲ್ಲರ ಜತೆ ಚರ್ಚೆ ಮಾಡಬೇಕು. ಸಂಕ್ರಾಂತಿ ಹಬ್ಬದ ವೇಳೆಗೆ ನೇಮಕ ಆಗಬಹುದು ಎನ್ನುವ ನಿರೀಕ್ಷೆ ಇದೆ ಎಂದರು

ಜನರ ಬಳಿಗೆ ಸರ್ಕಾರ ಕೊಂಡೊಯ್ಯಲು ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದಿನ ತಿಂಗಳು ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಮಧ್ಯೆ ದೆಹಲಿ ಹಾಗೂ ಬೇರೆ ಕಡೆ ಪ್ರವಾಸ ಮಾಡುವ ವೇಳೆ ಈ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗಿದೆ ಎಂದು ಹೇಳಿದರು.

ಲೋಕಸಭೆ ಚುನಾವಣೆ ಅಭ್ಯರ್ಥಿಗಳ ವಿಚಾರವಾಗಿ ಕೆಲವು ಸಚಿವರು ವರದಿ ನೀಡಿದ್ದಾರೆ. ಅವರ ಬಗ್ಗೆ ಸಮೀಕ್ಷೆ ನಡೆಸಬೇಕಿದೆ. ಈ ವಿಚಾರವಾಗಿ ಚರ್ಚಿಸಲು ಜ.4 ರಂದು ದೆಹಲಿಗೆ ದೆಹಲಿಗೆ ಹೋಗುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಜತೆಗೆ ಲೋಕಸಭೆ ಚುನಾವಣೆ ಸಿದ್ಧತೆ ವಿಚಾರವಾಗಿ ಜ. 10 ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜತೆ ಸಭೆ ಮಾಡುತ್ತೇವೆ ಎಂದು ಹೇಳಿದರು.

ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಅದಕ್ಕಾಗಿ ಎಲ್ಲ ನಾಯಕರೂ ಕುಳಿತು ಚರ್ಚೆ ಮಾಡುತ್ತೇವೆ. ಕೇಂದ್ರ ನಾಯಕರೂ ಕೆಲವರಿಗೆ ಅಧಿಕಾರ ನೀಡುವ ಮಾತು ಕೊಟ್ಟಿರುತ್ತಾರೆ. ಎಲ್ಲ ಮುಗಿದು ಸಂಕ್ರಾಂತಿ ವೇಳೆಗೆ ನೇಮಕ ಆಗಬಹುದು ಎಂಬ ನಿರೀಕ್ಷೆಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT