ಡಿಕೆ.ಶಿವಕುಮಾರ್. 
ರಾಜಕೀಯ

ಸಚಿವ ಸ್ಥಾನ ಸಿಗದಿರುವುದಕ್ಕೆ ಹತಾಶರಾಗಿ ರಮೇಶ್ ಜಾರಕಿಹೊಳಿ ಮಾತನಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದು, ಸಚಿವ ಸ್ಥಾನ ಸಿಗದ್ದಕ್ಕೆ ಹತಾಶರಾಗಿ ಮಾತನಾಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದು, ಸಚಿವ ಸ್ಥಾನ ಸಿಗದ್ದಕ್ಕೆ ಹತಾಶರಾಗಿ ಮಾತನಾಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಜಾರಕಿಹೊಳಿ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿದ ಅವರು, ರಮೇಶ್ ಜಾರಕಿಹೊಳಿ ಮಾತುಗಳನ್ನು ಕೇಳಿದರೆ ಅಯ್ಯೋ ಎನಿಸುತ್ತದೆ. ರಮೇಶ್ ಜಾರಕಿಹೊಳಿಯವರನ್ನು ಬಿಜೆಪಿ ಆಸ್ಪತ್ರೆಗೆ ಸೇರಿಸಬೇಕು. ಸಿಡಿ ಪ್ರಕರಣ ತನಿಖೆ ಮಾಡಿಸಲು ಜಾರಕಿಹೊಳಿಯವರನ್ನು ಯಾರು ತಡೆದಿದ್ದಾರೆ. ಈ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ. ಅವರು ಯಾವ ತನಿಖೆಯನ್ನು ಬೇಕಾದರೂ ಮಾಡಲಿ ಎಂದು ಹೇಳಿದರು.

ಇನ್ನು ವಿದೇಶದಲ್ಲಿ ಡಿ.ಕೆ.ಶಿವಕುಮಾರ್​ ಫ್ಲ್ಯಾಟ್​​ ಇದೆ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ, ಶೇ.10 ಆದರೂ ಬರುವ ಹಾಗೆ ಮಾಡಿ. ನಾನೇ ಹೋಗಿಬರುತ್ತೇನೆ. ಐ ವಿಷ್ ಹಿಮ್ ಆಲ್ ದ ಬೆಸ್ಟ್, ಶುಭವಾಗಲಿ ಯಶಸ್ಸಾಗಲಿ ಎಂದು ಜಾರಕಿಹೊಳಿಗೆ ಟಾಂಗ್ ನೀಡಿದರು.

ಚುನಾವಣೆಯಲ್ಲಿ ಭೇಟಿ ಮಾಡೋಣ ಎಂದಿದ್ದಾರೆ, ಭೇಟಿಯಾಗೋಣ. ಯಾವ ಆಸ್ತಿ, ಯಾವ ಆಡಿಯೋ ಬೇಕಾದರೂ ಮಾಡಿಕೊಳ್ಳಲಿ. ಅವರಲ್ಲಿ ಏನೇನು ಪಟ್ಟುಗಳು, ಆಸನಗಳು ಇದ್ದಾವೆ ತೋರಿಸಲಿ ನೋಡಿಕೋಳ್ತಿವಿ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT