ರಮೇಶ್ ಜಾರಕಿಹೊಳಿ 
ರಾಜಕೀಯ

ದೆಹಲಿಗೆ ರಮೇಶ್ ಜಾರಕಿಹೊಳಿ ಪ್ರಯಾಣ: ಅಮಿತ್ ಶಾ ಭೇಟಿ ಸಾಧ್ಯತೆ, ಸಿ ಡಿ ಪ್ರಕರಣ ಸಿಬಿಐಗೆ ವಹಿಸಲು ಒತ್ತಾಯ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸಿ.ಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಮನವಿ ಮಾಡಲು ಅಮಿತ್ ಶಾ ಅವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ.

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸಿ.ಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಮನವಿ ಮಾಡಲು ಅಮಿತ್ ಶಾ ಅವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ.

ಪ್ರಕರಣವನ್ನ ಸಿಬಿಐಗೆ ನೀಡುವಂತೆ ರಮೇಶ್ ಜಾರಕಿಹೊಳಿ ಒತ್ತಾಯಿಸುತ್ತಿದ್ದಾರೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಆರಗ ಜ್ಞಾನೇಂದ್ರ ಅವರಿಗೆ ದಾಖಲೆ ಸಮೇತ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಭರವಸೆ ಕೊಟ್ಟಿದ್ದಾರಂತೆ. ಇದರ ನಡುವೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗುತ್ತಿದ್ದಾರೆ. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ  ಭೇಟಿಗೆ ಸಮಯ ಕೇಳಿದ್ದಾರಂತೆ.

ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ, ಸಿಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬಳಿ ರಾಜಕಾರಣಿಗಳು, ಹಿರಿಯ ಅಧಿಕಾರಿಗಳ 100ಕ್ಕೂ ಹೆಚ್ಚು ಸಿಡಿಗಳಿದ್ದು, ಸಿಬಿಐ ತನಿಖೆಯಲ್ಲಿ ಹೊರ ಬೀಳಲಿದೆ ಎಂದು ಅಮಿತ್‌ ಶಾ ಬಳಿ ಮನವಿ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ದಿನಗಳಿಂದ ಬೆಂಗಳೂರಿನಲ್ಲಿಯೇ ಇದ್ದ ರಮೇಶ ಜಾರಕಿಹೊಳಿ ಗುರುವಾರ ಮಧ್ಯಾಹ್ನ ದಿಢೀರ್‌ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಅಮಿತ್‌ ಶಾ ಭೇಟಿಗೂ ಮುನ್ನ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನೂ ರಮೇಶ ಜಾರಕಿಹೊಳಿ ಭೇಟಿ ಮಾಡಿದ್ದಾರೆ. ಜತೆಗೆ ಕೆಲವು ಹಿರಿಯ ವರಿಷ್ಠರೊಂದಿಗೂ ಮಾತುಕತೆ ನಡೆಸಿದ್ದಾರೆ. ರಮೇಶ ಹಾಗೂ ಶಾ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT