ಸಿ.ಟಿ ರವಿ 
ರಾಜಕೀಯ

ರಾಜ್ಯ ಗೆಲ್ಲಲು ಗುಜರಾತ್‌ ಮಾದರಿ ಪ್ರಯೋಗ; ಕಾಂಗ್ರೆಸ್‌ಗೆ 160 ಸ್ಥಾನ ಪಾಕಿಸ್ತಾನದ ವರದಿಯಿರಬೇಕು: ಸಿ.ಟಿ.ರವಿ ವ್ಯಂಗ್ಯ

ಕಾಂಗ್ರೆಸ್‌ ಪಕ್ಷದ ಸಮೀಕ್ಷೆಯ ಪ್ರಕಾರ ಚುನಾವಣೆಯಲ್ಲಿ 160 ಸ್ಥಾನ ಸಿಗುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿಕೊಂಡಿದ್ದಾರೆ. ಬಹುಶಃ ಅವರು ಪಾಕಿಸ್ತಾನದಿಂದ ವರದಿ ಪಡೆದಿರಬೇಕು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಸಮೀಕ್ಷೆಯ ಪ್ರಕಾರ ಚುನಾವಣೆಯಲ್ಲಿ 160 ಸ್ಥಾನ ಸಿಗುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿಕೊಂಡಿದ್ದಾರೆ. ಬಹುಶಃ ಅವರು ಪಾಕಿಸ್ತಾನದಿಂದ ವರದಿ ಪಡೆದಿರಬೇಕು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಪ್ರಮುಖ ನಾಯಕರ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಾಕಿಸ್ತಾನದ ಈಗಿನ ಸರ್ಕಾರ ಪತನ ಆಗುತ್ತದೆ ಎಂಬ ಮಾಹಿತಿ ಇದೆ. ಬಹುಶಃ ಅಲ್ಲಿಂದ ವರದಿ ತರಿಸಿಕೊಂಡಿರಬೇಕು ಎಂದರು. ಕರ್ನಾಟಕದಲ್ಲೂ ಉತ್ತರ ಪ್ರದೇಶ, ಗೋವಾ ಮತ್ತು ಗುಜರಾತ್‌ ಮಾದರಿಯ ಫಲಿತಾಂಶವೇ ಬರುತ್ತದೆ. ಕಾಂಗ್ರೆಸ್‌ನವರು 160 ರ ಹಗಲುಗನಸು ಕಾಣುತ್ತಿರಲಿ ಎಂದರು.

ಚುನಾವಣೆಯಲ್ಲಿ ಗೆಲ್ಲಲೇಬೇಕಾದರೆ ಮೊದಲಿಗೆ ಫಲಾನುಭವಿಗಳ ಮನಸ್ಸು ಗೆಲ್ಲಬೇಕಾಗಿದೆ. ಆದ್ದರಿಂದ ಫಲಾನುಭವಿಗಳ ಜತೆ ನಿಕಟ ಸಂಪರ್ಕ ಹೊಂದಲು ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ನಡೆಸಬೇಕು ಎಂದು ಶುಕ್ರವಾರ ರಾತ್ರಿ ನಡೆದ ಪ್ರಮುಖ ನಾಯಕರ ಸಭೆಯಲ್ಲಿ ನಿರ್ಧರಿಸಲಾಯಿತು ರವಿ ತಿಳಿಸಿದ್ದಾರೆ.

ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳ ಚುನಾವಣೆಗಳ ಸಂದರ್ಭದಲ್ಲೂ ಫಲಾನುಭವಿಗಳ ಸಮಾವೇಶಗಳನ್ನು ವ್ಯಾಪಕವಾಗಿ ನಡೆಸಲಾಗಿತ್ತು. ಅದರಿಂದಾಗಿ ಆ ರಾಜ್ಯಗಳ ಚುನಾವಣೆಗಳಲ್ಲಿ ಭರ್ಜರಿ ಗೆಲುವು ಪಡೆಯಲು ಸಾಧ್ಯವಾಯಿತು. ಅದೇ ಪ್ರಯೋಗವನ್ನು ಇಲ್ಲೂ ನಡೆಸಲಾಗುವುದು ಎಂದು ಹೇಳಿದರು.

ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಒಂದಲ್ಲ ಒಂದು ಕಾರ್ಯಕ್ರಮಗಳ ಫಲಾನುಭವಿಗಳು ಶೇ 70‌ ರಷ್ಟು ಇದ್ದಾರೆ. ಅವರನ್ನು ಬಿಜೆಪಿ ಮತದಾರರನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತೇವೆ ಎಂದು ರವಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT