ಪ್ರಹ್ಲಾದ್ ಜೋಷಿ(ಸಂಗ್ರಹ ಚಿತ್ರ) 
ರಾಜಕೀಯ

ಪ್ರಹ್ಲಾದ್ ಜೋಷಿ ಸಂಸ್ಕೃತಿ ಇರುವ ಬ್ರಾಹ್ಮಣರಲ್ಲ, ಸಮಾಜವನ್ನು ಒಡೆಯುವ ಬ್ರಾಹ್ಮಣರ ಗುಂಪಿಗೆ ಸೇರಿದವರು: ಹೆಚ್ ಡಿ ಕುಮಾರಸ್ವಾಮಿ

ಜೆಡಿಎಸ್ ನ ಪಂಚರತ್ನ ರಥಯಾತ್ರೆಗೆ ನವಗ್ರಹ ರಥಯಾತ್ರೆ ಎಂದು ಹೆಸರಿಡಬೇಕೆಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಷಿ ನೀಡಿರುವ ಹೇಳಿಕೆಗೆ ಆಕ್ರೋಶಭರಿತರಾಗಿ ಹೆಚ್ ಡಿ ಕುಮಾರಸ್ವಾಮಿ, ಜೋಷಿಯವರ ಜಾತಿಯನ್ನು ತೆಗೆದುಕೊಂಡು ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ಬೆಂಗಳೂರು: ಜೆಡಿಎಸ್ ನ ಪಂಚರತ್ನ ರಥಯಾತ್ರೆಗೆ ನವಗ್ರಹ ರಥಯಾತ್ರೆ ಎಂದು ಹೆಸರಿಡಬೇಕೆಂದು ಬಿಜೆಪಿ ನಾಯಕ ಪ್ರಹ್ಲಾದ್ ಜೋಷಿ ನೀಡಿರುವ ಹೇಳಿಕೆಗೆ ಆಕ್ರೋಶಭರಿತರಾಗಿ ಹೆಚ್ ಡಿ ಕುಮಾರಸ್ವಾಮಿ, ಜೋಷಿಯವರ ಜಾತಿಯನ್ನು ತೆಗೆದುಕೊಂಡು ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ಪಂಚರತ್ನ ರಥಯಾತ್ರೆಗೆ ಜನರು ನೀಡುತ್ತಿರುವ ಸ್ಪಂದನೆ ಬಿಜೆಪಿ ನಾಯಕರಲ್ಲಿ ಭಯ ಹುಟ್ಟಿಸಿದೆ. ನಮ್ಮ ಕುಟುಂಬದ ಬಗ್ಗೆ ಅವರು ಟೀಕೆ ಮಾಡಿದ್ದಾರೆ. ಮುಂದಿನ ಚುನಾವಣೆ ನಂತರ ಪ್ರಹ್ಲಾದ್ ಜೋಷಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂಬ ಹುನ್ನಾರ ಆರ್ ಎಸ್ ಎಸ್ ನಲ್ಲಿ ಪ್ರಾರಂಭವಾಗಿದೆ ಎಂದರು.

ಪ್ರಹ್ಲಾದ್ ಜೋಷಿಯವರು ದಕ್ಷಿಣ ಕರ್ನಾಟಕದ ಬ್ರಾಹ್ಮಣರ ಸಂಸ್ಕೃತಿಯವರಲ್ಲ, ಬ್ರಾಹ್ಮಣರ ವೃತ್ತಿ-ಸಂಸ್ಕಾರದಲ್ಲಿ ಎರಡು ಮೂರು ರೀತಿಗಳಿವೆ. ಇವರು ಶೃಂಗೇರಿ ಮಠದ ಪೇಷಾವರ ಗುಂಪಿನ ಬ್ರಾಹ್ಮಣರು. ಈ ಗುಂಪಿನ ಬ್ರಾಹ್ಮಣರು ಶೃಂಗೇರಿ ಮಠದ ದೇವರ ವಿಗ್ರಹವನ್ನು ಒಡೆದು ಹಾಕಿದ್ದರು. ಮಹಾತ್ಮಾ ಗಾಂಧಿಯವರನ್ನು ಕೊಂದ ವಂಶಕ್ಕೆ ಸೇರಿದವರು, ಇವರು ಹಳೆ ಕರ್ನಾಟಕ ಭಾಗದವರು ಅಲ್ಲ, ದೇಶಸ್ತ ಬ್ರಾಹ್ಮಣರ ವರ್ಗಕ್ಕೆ ಸೇರಿದವರು ಎಂದು ಪ್ರಹ್ಲಾದ್ ಜೋಷಿಯವರ ಬಗ್ಗೆ ಕುಮಾರಸ್ವಾಮಿ ಟೀಕಿಸಿದ್ದು ರಾಜ್ಯ ರಾಜಕೀಯದಲ್ಲಿ ಚುನಾವಣೆ ಹೊಸ್ತಿಲಿನಲ್ಲಿ ಬಿರುಗಾಳಿ ಎಬ್ಬಿಸಿದೆ. 

ನಮ್ಮ ಕಡೆ ಬ್ರಾಹ್ಮಣರು ಸರ್ವೇಜನ ಸುಖಿನೋ ಭವಂತು ಎನ್ನುತ್ತಾರೆ, ಹಳೆ ಕರ್ನಾಟಕ ಭಾಗದ ಬ್ರಾಹ್ಮಣರ ಕಾಲಿಗೆ ಬೀಳುತ್ತೇವೆ ನಾವು. ಆದ್ರೆ ಇವ್ರು ಹಾಗೆ ಹೇಳೋದಿಲ್ಲ. ಮಹಾರಾಷ್ಟ್ರ ಭಾಗದ ಪೇಶ್ವೆಗಳ ವಂಶಸ್ಥರಿಗೆ ಸೇರಿದವರು ಇವರು. ಅವರಿಗೆ ಸಂಸ್ಕೃತಿ ಇಲ್ಲ, ಸಂಸ್ಕೃತಿ ಬೇಕಿಲ್ಲ, ದೇಶ ಒಡೆಯೋದು, ಕುತಂತ್ರ ರಾಜಕೀಯ ಮಾಡುವುದು, ದೇಶಕ್ಕೆ ಕೊಡುಗೆ ಕೊಟ್ಟವರನ್ನು ಮಾರಣಹೋಮ ಮಾಡುವಂತದ್ದು ಅವರ ಸಂಸ್ಕೃತಿ. ಬಿಜೆಪಿಯ, ಆರ್ ಎಸ್ ಎಸ್ ನ ಹುನ್ನಾರಕ್ಕೆ ಈ ರಾಜ್ಯದ ಜನರು ಬಲಿಯಾಗಬೇಡಿ, ಎಚ್ಚರಿಕೆಯಿಂದಿರಿ, ಬ್ರಾಹ್ಮಣರನ್ನು ಮುಖ್ಯಮಂತ್ರಿ ಮಾಡಿ ಒಡೆದು ಆಳುವ ನೀತಿಯನ್ನು ಬಿಜೆಪಿ ಹೊಂದಿದೆ ಎಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಟೀಕಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT