ರಾಜಕೀಯ

ಯಡಿಯೂರಪ್ಪರನ್ನೇ ಪಂಕ್ಚರ್ ಮಾಡಿರುವ ಬಿಜೆಪಿ ಹೈಕಮಾಂಡ್: ಸಿದ್ದರಾಮಯ್ಯ ತಿರುಗೇಟು

Nagaraja AB

ಕಲಬುರಗಿ: ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಬಸ್ ಪಂಕ್ಚರ್ ಆಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ,  ಮುಖ್ಯಮಂತ್ರಿ ಹುದ್ದೆಯಿಂದ ತೆಗೆದು ಈಗಾಗಲೇ ಯಡಿಯೂರಪ್ಪರನ್ನು ಬಿಜೆಪಿ ಹೈ ಕಮಾಂಡ್ ಈಗಾಗಲೇ ಪಂಕ್ಚರ್ ಮಾಡಿದೆ ಎಂದರು. 

ಬಿಎಸ್ ವೈ ಬಗ್ಗೆ ಅಪಾರವಾದ ಗೌರವ ಮತ್ತು ಅನುಕಂಪವಿದೆ. ಅವರು ಆರೋಗ್ಯವಾಗಿದ್ದು, ಬಿಜೆಪಿಯನ್ನು ಅಧಿಕಾರಕ್ಕೆ ತರಲು ಹೋರಾಡುತ್ತಿದ್ದಾರೆ. ಕಳೆದ ಬಾರಿ ಯಡಿಯೂರಪ್ಪ ಇದ್ದಾಗಲೇ 104 ಸೀಟು ಬಂದಿತ್ತು ಈಗ ಅವರು ಮೈಸಸ್ ಆಗಿದ್ದಾರೆ. ಈಗೆಷ್ಟು ಬರ್ತಾವೆ ನೋಡಿ ಎಂದು ಲೇವಡಿ ಮಾಡಿದರು.

ಜನ ಇವರನ್ನು ನಂಬಿ ಮತ್ತೆ ಮತ ಹಾಕುತ್ತಾರಾ? ರಾಜ್ಯದ ಜನತೆ ಬಿಜೆಪಿ ಆಡಳಿತದಿಂದ ಬೇಸತ್ತಿದ್ದು, ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

SCROLL FOR NEXT