ಲಕ್ಷ್ನಿ ಹೆಬ್ಬಾಳ್ಕರ್ 
ರಾಜಕೀಯ

ಆ ಸೀತೆಗೂ ಅಗ್ನಿ ಪರೀಕ್ಷೆ ತಪ್ಪಲಿಲ್ಲ, ಇನ್ನು ಲಕ್ಷ್ಮಿ ಹೆಬ್ಬಾಳ್ಕರ್‌ ಯಾವ ಲೆಕ್ಕ; 3 ತಿಂಗಳು ಕೆಟ್ಟದನ್ನ ನೋಡಲ್ಲ, ಕೆಟ್ಟದನ್ನ ಕೇಳಲ್ಲ: ಗ್ರಾಮೀಣ ಶಾಸಕಿ ಶಪಥ!

ರಾಜಕಾರಣದಲ್ಲಿ ಮಹಿಳೆಯರಿಗೆ ಬಹಳ ಕಷ್ಟವಿದೆ. ಹಂತ ಹಂತದಲ್ಲೂ ನಾವು ಅಗ್ನಿ ಪರೀಕ್ಷೆಯನ್ನು ಎದುರಿಸಬೇಕು. ಆ ಸೀತಾ ಮಾತೆ ಕೂಡ ಅಗ್ನಿ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ಇನ್ನು ಈ ಲಕ್ಷ್ಮಿ ಹೆಬ್ಬಾಳ್ಕರ್ ಯಾವ ಲೆಕ್ಕ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ತಮ್ಮ ಬಗ್ಗೆ ಹೇಳಿಕೊಂಡರು

ಚಿಕ್ಕಮಗಳೂರು: ಸಿಡಿ ಪ್ರಕರಣ ಸಂಬಂಧ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಲ್ಲೇ ಇದ್ದಾರೆ. ಇನ್ನು ಈ ವಿಚಾರವಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿ ಪ್ರತಿಕ್ರಿಯಿಸಿದ್ದು, 3 ತಿಂಗಳು ಕೆಟ್ಟದನ್ನ ನೋಡಲ್ಲ, ಕೆಟ್ಟದನ್ನ ಕೇಳಲ್ಲ, ಕೆಟ್ಟದನ್ನ ಮಾಡಲ್ಲ . ಈ ಬಾರಿ ತಾಳ್ಮೆಯಿಂದ ಚುನಾವಣೆ ಮಾಡಬೇಕೆಂದು ಅಂದುಕೊಂಡಿದ್ದೇನೆ. ಸಿಡಿ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಲ್ಲವೆಂದು ಎಂದು ಸ್ಪಷ್ಟಪಡಿಸಿದರು.

ರಾಜಕಾರಣದಲ್ಲಿ ಮಹಿಳೆಯರಿಗೆ ಬಹಳ ಕಷ್ಟವಿದೆ. ಹಂತ ಹಂತದಲ್ಲೂ ನಾವು ಅಗ್ನಿ ಪರೀಕ್ಷೆಯನ್ನು ಎದುರಿಸಬೇಕು. ಆ ಸೀತಾ ಮಾತೆ ಕೂಡ ಅಗ್ನಿ ಪರೀಕ್ಷೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ. ಇನ್ನು ಈ ಲಕ್ಷ್ಮಿ ಹೆಬ್ಬಾಳ್ಕರ್ ಯಾವ ಲೆಕ್ಕ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ತಮ್ಮ ಬಗ್ಗೆ ಹೇಳಿಕೊಂಡರು. ಅಲ್ಲದೆ, ಚುನಾವಣೆ ಹಿನ್ನೆಲೆಯಲ್ಲಿ ಇನ್ನು ಮೂರು ತಿಂಗಳೂ ತಾವು ಹೆಚ್ಚು ಮಾತನಾಡುವುದಿಲ್ಲ ಎಂದೂ ಹೇಳಿಕೊಂಡಿದ್ದಾರೆ.

ಮಹಿಳೆ ಎಂದರೇ ಒಂದು ಸಂಘರ್ಷ, ಅದು ಮಹಿಳೆ ಜತೆಯೇ ಬರುತ್ತದೆ. ಹುಟ್ಟಿನಿಂದ ಸಾಯುವವರೆಗೂ ಪರೀಕ್ಷೆಗಳನ್ನು ಹೊತ್ತುಕೊಂಡೇ ಇರಬೇಕು, ಎದುರಿಸಬೇಕು, ಪಾಸಾಗಬೇಕು ಎಂದು ನೋವು ತೋಡಿಕೊಂಡರು.‌ ನಾನು ಮಾಡಿದ ಅಭಿವೃದ್ಧಿ ಕೆಲಸದಿಂದ ಚುನಾವಣೆಯಲ್ಲಿ ಗೆಲ್ಲಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಾಗಿದೆ. ಮಹಿಳೆಯರ ಪರವಾದ ಸರ್ಕಾರವನ್ನು ಅಧಿಕಾರಕ್ಕೆ ತರಬೇಕಾಗಿದೆ. ಹಾಗಾಗಿ 3 ತಿಂಗಳು ಬಹಳ ತಾಳ್ಮೆಯಿಂದ ಇರಲು ಬಯಸುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT