ಅಪ್ಪು ಫೋಟೋ ಇಲ್ಲದ ಬ್ಯಾನರ್ 
ರಾಜಕೀಯ

ಪುನೀತ್ ವರ್ಚಸ್ಸು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ: ಸಿಎಂಗೆ ನಾಚಿಕೆ ಆಗಬೇಕು ಎಂದ ಎಎಪಿ

ನಾಡಿನ ಚೇತನ ಪುನೀತ್ ರಾಜ್ ಕುಮಾರ್ ಹೆಸರು, ವರ್ಚಸ್ಸನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಎಎಪಿ ರಾಜ್ಯ ಘಟಕ ಆರೋಪಿಸಿದೆ.

ಬೆಂಗಳೂರು: ನಾಡಿನ ಚೇತನ ಪುನೀತ್ ರಾಜ್ ಕುಮಾರ್ ಹೆಸರು, ವರ್ಚಸ್ಸನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಎಎಪಿ ರಾಜ್ಯ ಘಟಕ ಆರೋಪಿಸಿದೆ.

ಪುನೀತ್ ರಸ್ತೆ ನಾಮಕರಣ ಕಾರ್ಯಕ್ರಮ ಫ್ಲೆಕ್ಸ್ ನಲ್ಲಿ ಅಪ್ಪು ಫೋಟೋನೇ ಇಲ್ಲದೇ ರಾಜಕೀಯ ನಾಯಕರ ಫೋಟೋಗಳು ರಾರಾಜಿಸಿದ ವರದಿಯೊಂದನ್ನು ಎಎಪಿ ರಾಜ್ಯ ಅಧಿಕೃತ ಟ್ವೀಟರ್ ಖಾತೆಯಲ್ಲಿ  ಹಂಚಿಕೊಂಡಿದ್ದು, ಬಿಜೆಪಿ ರಾಜಕೀಯ ಹಪಾಹಪಿಗೆ ಅಂತ್ಯವೇ ಇಲ್ಲವೇ ಎಂದು ಕಿಡಿಕಾರಿದೆ.

ಪುನೀತ್ ಹೆಸರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ರಾಜ್ಯ ಬಿಜೆಪಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಬೆಳಗಾವಿಯಲ್ಲಿ ನಾಡಿನ ಜನತೆಗೆ ಮೋಸ ಮಾಡಿದಿರಿ, ಬೆಂಗಳೂರಿನಲ್ಲಿ ಪುನೀತ್ ಅವರ ಹೆಸರಿಗೆ ಮೋಸ ಮಾಡುತ್ತಿದ್ದೀರಿ ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಘಟಕ ಟೀಕಾ ಪ್ರಹಾರ ನಡೆಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?