ಸಂಗ್ರಹ ಚಿತ್ರ 
ರಾಜಕೀಯ

ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಸಮಿತಿ ರಚಿಸಿದ ಕಾಂಗ್ರೆಸ್

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಕಾಂಗ್ರೆಸ್ ವೇಗ ನೀಡಿದೆ. ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಎಐಸಿಸಿ ಮಟ್ಟದಲ್ಲಿ ಸ್ಕ್ರೀನಿಂಗ್ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಕಾಂಗ್ರೆಸ್ ವೇಗ ನೀಡಿದೆ. ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಎಐಸಿಸಿ ಮಟ್ಟದಲ್ಲಿ ಸ್ಕ್ರೀನಿಂಗ್ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಪ್ತರಾಗಿರುವ, ರಾಜಸ್ಥಾನ ಮೂಲದ 73 ವರ್ಷದ ಹಿರಿಯ ರಾಜಕಾರಣಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮೋಹನ್ ಪ್ರಕಾಶ್ ಅಧ್ಯಕ್ಷತೆಯಲ್ಲಿ ಸ್ಕ್ರೀನಿಂಗ್ ಸಮಿತಿಯನ್ನು ರಚನೆ ಮಾಡಲಾಗಿದೆ.

ಉಳದಂತೆ ಒಡಿಶಾ ಮೂಲದ ಸಂಸದ ಸಪ್ತಗಿರಿ ಉಳಕ, ರಾಜಸ್ಥಾನದ ರಾಜ್ಯಸಭಾ ಸದಸ್ಯ ನೀರಜ್ ಡಾಂಗಿ, ಬಿಹಾರದ ಸಂಸದ ಮೊಹಮ್ಮದ್ ಜಾವೇದ್ ಅವರನ್ನು ಸಮಿತಿ ಸದಸ್ಯರನ್ನಾಗಿ ಮಾಡಲಾಗಿದೆ.

ಅಧಿಕೃತ ಸದಸ್ಯರನ್ನಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪರಿಷತ್ ಪ್ರತಿಪಕ್ಷ ನಾಯಕ ಬಿಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ರಾಜ್ಯ ಉಸ್ತುವಾರಿಯಲ್ಲಿರುವ ಎಐಸಿಸಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ. ಚುನಾವಣಾ ಸಮಿತಿಯ ಶಿಫಾರಸುಗಳನ್ನು ಈ ಕಮಿಟಿ ಸ್ಕ್ರೀನಿಂಗ್ ಮಾಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್