ಡಿ.ಕೆ ಶಿವಕುಮಾರ್ 
ರಾಜಕೀಯ

ರೈತನ ಮಗನಾಗಿ ಭಾರೀ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ: ಅಕ್ರಮ ಎಸಗುವಾಗ ಜೀವಮಾನ ಪೂರ್ತಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂಬ ಭ್ರಮೆಯೇ?

ರೈತನ ಮಗನಾಗಿದ್ದುಕೊಂಡು ಕೊತ್ವಾಲ್‌ ಶಿಷ್ಯನಾದ ಡಿ.ಕೆ ಶಿವಕುಮಾರ್, ಭಾರಿ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ ಎಂಬುದು ಕನಕಪುರದ ಪ್ರತಿ ಬಂಡೆ ಬಂಡೆಗೂ ತಿಳಿದಿದೆ.

ಬೆಂಗಳೂರು: ರೈತನ ಮಗನಾಗಿದ್ದುಕೊಂಡು ಕೊತ್ವಾಲ್‌ ಶಿಷ್ಯನಾದ ಡಿ.ಕೆ ಶಿವಕುಮಾರ್, ಭಾರಿ ಪ್ರಮಾಣದ ಆಸ್ತಿ ಸಂಪಾದಿಸಿದ್ದು ಹೇಗೆ ಎಂಬುದು ಕನಕಪುರದ ಪ್ರತಿ ಬಂಡೆ ಬಂಡೆಗೂ ತಿಳಿದಿದೆ. ಆದರೆ ಆ ಬಗ್ಗೆ ಜಾರಿ ನಿರ್ದೇಶನಾಲಯ ತಿಳಿಯಲು ಹೊರಟಾಗ ಮಾತ್ರ ಅವರಿಗೆ ಆತಂಕ ಉಂಟಾಗುತ್ತದೆ ಎಂದು ಬಿಜೆಪಿ ಹೇಳಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ,  ತಾವು ಪ್ರಜಾದ್ರೋಹ ಯಾತ್ರೆ ಮಾಡಬೇಕೋ ಅಥವಾ ವಿಚಾರಣೆ ಎದುರಿಸಬೇಕೋ ಎಂಬುದನ್ನು ಡಿ.ಕೆ ಶಿವಕುಮಾರ್ ಅವರೇ ನಿರ್ಧರಿಸಬೇಕು. ಯಾತ್ರೆ ಹೆಸರಲ್ಲಿ ಹಿಂದೆ ಮಾಡಿದ ಪ್ರಜಾದ್ರೋಹದ ವಿಚಾರಣೆಯಿಂದ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನವನ್ನು ಅವರು ಮಾಡಬಾರದು ಎಂದು ಲೇವಡಿ ಮಾಡಿದೆ.

ಈಗ ವಿಚಾರಣೆ ಬಗ್ಗೆ ನೀವು ಕಿಡಿಕಾರುತ್ತಿದ್ದೀರಿ. ಆದರೆ, ಅಕ್ರಮ ಎಸೆಗುವಾಗ ಜೀವಮಾನ ಪೂರ್ತಿ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂಬ ಭ್ರಮೆಯೇ ನಿಮ್ಮ ಈಗಿನ ಪರಿಸ್ಥಿತಿಗೆ ಕಾರಣ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ನಮ್ಮ ವಿರುದ್ಧ ಟೀಕೆ‌ ನಿಲ್ಲಿಸಿ ಎಂದು ಬಿಜೆಪಿ ಸಲಹೆ ನೀಡಿದೆ.

ಸೋನಿಯಾ ಗಾಂಧಿ ಅವರ ಅತ್ಯಾಪ್ತರಾಗಿದ್ದ ಅಹ್ಮದ್‌ ಪಟೇಲ್‌ ಅವರನ್ನು ರಾಜ್ಯ ಸಭೆಗೆ ಕಳುಹಿಸಲು ಕೋಟಿ ಕೋಟಿಗಳನ್ನು ಯಾರು ಯಾರಿಗೆ ಸಂದಾಯ ಮಾಡಿದರು ಎಂಬ ವಿವರ ನೀವೇ ನೀಡಬೇಕಷ್ಟೆ ಅವರೇ. ಅದಕ್ಕುತ್ತರಿಸದೆ ಎಷ್ಟೇ ರೂಪಾಯಿ ಮೌಲ್ಯದ ಮಾವು ಬೆಳೆದರೂ ಅದರ ಘಮ ನಿಮ್ಮ  ಅಕ್ರಮ ಮರೆಮಾಚುವುದಿಲ್ಲ ಎಂದು ಲೇವಡಿ ಮಾಡಿದೆ.

ಗೋವಿಂದ ರಾಜು ಅವರ ಡೈರಿಯಲ್ಲಿ ಸಿಕ್ಕ ಹೆಸರುಗಳು ಮತ್ತು ಆ ಹೆಸರುಗಳ ಮುಂದಿದ್ದ ಭಾರಿ ಪ್ರಮಾಣದ ಹಣ ಯಾರಿಗೆ ಯಾಕಾಗಿ ಸಂದಾಯವಾಗಿತ್ತು ಎಂಬುದಕ್ಕೆ ಉತ್ತರ ನೀಡಬೇಕಿರುವುದು ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು. ಅದನ್ನು ನಿರಂತರವಾಗಿ ತಪ್ಪಿಸಿಕೊಂಡು ಚುನಾವಣೆ ಹತ್ತಿರ ಬಂದಾಗ ಹಲುಬಿದರೆ ಕಪ್ಪು ಬಿಳಿಯಾಗುವುದಿಲ್ಲ ಎಂದಿದೆ.

ಅಪಾರ ಪ್ರಮಾಣದಲ್ಲಿ ಅಕ್ರಮ ಆಸ್ತಿ ಗಳಿಸಿ ಆ ಬಗ್ಗೆ ಜಾರಿ ನಿರ್ದೇಶನಾಲಯ ವಿಚಾರಣೆ ಮಾತ್ರ ಮಾಡಬಾರದು ಎಂದರೆ ಹೇಗೆ?  ಡಿ.ಕೆ ಶಿವಕುಮಾರ್ ಅವರು ಬಯಸಿದಂತೆ ವಿಚಾರಣೆ ಮಾಡಲು ಅದೇನು ಕೆಪಿಸಿಸಿ ಘಟಕವಲ್ಲ, ಸ್ವಾಯತ್ತ ಸಂಸ್ಥೆ ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT