ಸಿ ಎಂ ಇಬ್ರಾಹಿಂ 
ರಾಜಕೀಯ

ಬಾದಾಮಿಯಲ್ಲಿ ಓಡಾಡಿ ಸಿದ್ದರಾಮಯ್ಯನ ಗೆಲ್ಲಿಸಿದ್ದು ನಾನು, ಬಿಎಸ್​ವೈಗೆ ಮೋಸ ಮಾಡುತ್ತಾರೆಂದು 4 ವರ್ಷದ ಹಿಂದೆ ಹೇಳಿದ್ದೆ: ಸಿಎಂ ಇಬ್ರಾಹಿಂ

ಬಸವ ಕೃಪದವರಿಗೆ ಕೇಶವ ಕೃಪದಲ್ಲಿ ಜಾಗವಿಲ್ಲ ಯಡಿಯೂರಪ್ಪ, ನಿಮಗೆ ಮೋಸ ಮಾಡುತ್ತಾರೆ ಎಂದು ನಾನು 4 ವರ್ಷಗಳ ಹಿಂದೆಯೇ ಹೇಳಿದ್ದೆ. ಯಡಿಯೂರಪ್ಪನವರು ಇವತ್ತು ಅದನ್ನು ಅನುಭವಿಸುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಲೇವಡಿ ಮಾಡಿದ್ದಾರೆ.

ಬೀದರ್: ಬಸವ ಕೃಪದವರಿಗೆ ಕೇಶವ ಕೃಪದಲ್ಲಿ ಜಾಗವಿಲ್ಲ ಯಡಿಯೂರಪ್ಪ, ನಿಮಗೆ ಮೋಸ ಮಾಡುತ್ತಾರೆ ಎಂದು ನಾನು 4 ವರ್ಷಗಳ ಹಿಂದೆಯೇ ಹೇಳಿದ್ದೆ. ಯಡಿಯೂರಪ್ಪನವರು ಇವತ್ತು ಅದನ್ನು ಅನುಭವಿಸುತ್ತಿದ್ದಾರೆ. ಹೊರಗೆ ಬರುವ ಹಾಗಿಲ್ಲ, ಒಳಗೆ ಇರುವ ಹಾಗಿಲ್ಲ ಎಂಬಂತೆ ಆಗಿದೆ ಅವರ ಪರಿಸ್ಥಿತಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಲೇವಡಿ ಮಾಡಿದ್ದಾರೆ.

ಬೀದರ್ ನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ನಳಿನ್ ಕುಮಾರ್ ಕಟೀಲ್ ಅವರ ಟಿಪ್ಪು ವರ್ಸಸ್ ಸಾವರ್ಕರ್ ಹೇಳಿಕೆಗೆ ಟೀಕೆ ಮಾಡಿದ್ದಾರೆ. ಟಿಪ್ಪು ಹುಟ್ಟಿದ್ದು ಯಾವಾಗ, ಸಾವರ್ಕರ್ ಹುಟ್ಟಿದ್ದು ಯಾವಾಗ, ಕಟೀಲು ಅವರಿಗೆ ಸಿಡಿ ವರ್ಸಸ್ ಚುನಾವಣೆ ಮಾಡಲು ಹೇಳಿ. ಸ್ಯಾಂಟ್ರೊ ರವಿ ಯಾರು ಕಟೀಲು ಅವರ ನೆಂಟರಾ, 12 ಮಂದಿನ್ನು ಮುಂಬೈಗೆ ಕರೆದುಕೊಂಡು ಹೋಗಿದ್ದರಲ್ಲ, ಅದರ ಸಿಡಿ ಹೊರಗೆ ಬರಲಿ, ಅದರ ಮೇಲೆ ಇವತ್ತಿನ ಚುನಾವಣೆ ನಡೆಯುತ್ತದೆ, ಇವರು ಹೆಣ್ಣು ಮಕ್ಕಳಿಗೆ ಗೌರವ ಕೊಡುತ್ತಾರೆಯೇ, ಬಿಜೆಪಿ ನಾಯಕರ ಮನೆಯಲ್ಲಿ ಹೆಣ್ಣು ಮಕ್ಕಳಿಲ್ಲವೇ ಎಂದು ಪ್ರಶ್ನಿಸಿದರು. 

ಸಿದ್ದರಾಮಯ್ಯನವರನ್ನು ಬಾದಾಮಿಯಲ್ಲಿ ಗೆಲ್ಲಿಸಿದ್ದು ನಾನು: ಸಿದ್ದರಾಮಯ್ಯನವರನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಗೆ ಕರೆತಂದು ನಿಲ್ಲಿಸಿ ಗೆಲ್ಲಿಸಿದವನು ನಾನು. ಸಿದ್ದರಾಮಯ್ಯ ವಲಸಿಗನಲ್ಲವೇ, ಜಮೀರ್ ಅಹ್ಮದ್ ಚಾಮರಾಜಪೇಟೆಯಲ್ಲಿ ವಲಸಿಗ ಅಲ್ಲವಾ, ಸಿದ್ದರಾಮಯ್ಯನವರನ್ನು ಚೀಫ್ ಮಿನಿಸ್ಟರ್ ಮಾಡಿದವನು ನಾನು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ವಿದ್ಯುತ್ ಉಚಿತ ಕೊಡುತ್ತೇವೆ ಎನ್ನುತ್ತಾರೆ ಸಾಹುಕಾರರ ಮನೆಯಲ್ಲಿ ಮಲಗುವ ನಾಯಿಗೆ ಇವರು ಕೊಡುವ ವಿದ್ಯುತ್ ಸಾಕಾಗಲ್ಲ ಎಂದು ಟೀಕಿಸಿದರು.

ಸಿದ್ದರಾಮಯ್ಯನವರು ಹುಮ್ನಾಬಾದ್ ನಲ್ಲಿ ಬಂದು ನನ್ನ ಮಗನ ವಿರುದ್ಧ ಮಾತನಾಡಿದ್ದು ನನಗೆ ನೋವಾಯಿತು. ಇವರಿಗೆ ಎರಡು ಬಾರಿ ರಾಜಕೀಯ ಜೀವನ ಕೊಟ್ಟವನು ನಾನು, ಬೇಕೆಂದಾಗ ಮುಖ್ಯಮಂತ್ರಿ ಮಾಡಿದವನು ನಾನು, ಹೀಗಿರುವಾಗ ಇವತ್ತು ನಮ್ಮ ವಿರುದ್ಧ ರಾಜಕೀಯ ಮಾಡುತ್ತಾರೆ ಎಂದು ಆರೋಪಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT