ಎನ್ ರವಿ ಕುಮಾರ್ 
ರಾಜಕೀಯ

ಅಧಿವೇಶನದ ಮೊದಲ ದಿನವೇ ಸಿದ್ದರಾಮಯ್ಯ ಗೈರು; ತರಾಟೆಗೆ ತೆಗೆದುಕೊಂಡ ಬಿಜೆಪಿಯ ಎನ್ ರವಿಕುಮಾರ್

ಬಜೆಟ್‌ ಅಧಿವೇಶನದ ಮೊದಲ ದಿನಕ್ಕೆ ಗೈರಾಗಿರುವ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ವಿಧಾನಸಭೆ ಕಲಾಪವನ್ನು ಪ್ರತಿಪಕ್ಷದ ನಾಯಕರು ಹೇಗೆ ಗೌರವಿಸುತ್ತಾರೆ ಎಂಬುದು ಇದರಿಂದ ತಿಳಿಯುತ್ತದೆ ಎಂದಿದ್ದಾರೆ.

ಕಲಬುರಗಿ: ಬಜೆಟ್‌ ಅಧಿವೇಶನದ ಮೊದಲ ದಿನಕ್ಕೆ ಗೈರಾಗಿರುವ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ವಿಧಾನಸಭೆ ಕಲಾಪವನ್ನು ಪ್ರತಿಪಕ್ಷದ ನಾಯಕರು ಹೇಗೆ ಗೌರವಿಸುತ್ತಾರೆ ಎಂಬುದು ಇದರಿಂದ ತಿಳಿಯುತ್ತದೆ ಎಂದಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ನಿರತರಾಗಿದ್ದಾರೆ. ಆದರೆ, ಅರ್ಧದಷ್ಟು ಸ್ಥಳಗಳು ಭರ್ತಿಯಾಗದ ಕಾರಣ ಅವರ ರ್ಯಾಲಿಗಳು ವಿಫಲವಾಗಿವೆ ಎಂದ ಅವರು, ಪ್ರಚಾರದ ವೇಳೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನಾಯಕರದ್ದು ಬಹಳ ಸದ್ದು ಮಾಡುವ ಖಾಲಿ ಪಾತ್ರೆ ಎಂಬುದು ಎಲ್ಲರಿಗೂ ಗೊತ್ತು ಎಂದರು.

ಪ್ರತಿ ಸಭೆಯಲ್ಲೂ ಸಿದ್ದರಾಮಯ್ಯ ಅನ್ನ ಭಾಗ್ಯ ಯೋಜನೆ ತಂದಿರುವುದಾಗಿ ಹೇಳುತ್ತಾರೆ. ಆದರೆ, ಯೋಜನೆಗೆ ಅಕ್ಕಿಯನ್ನು ಕೇಂದ್ರ ಸರ್ಕಾರ ಪೂರೈಸುತ್ತದೆ ಎಂದು ಅವರು ಹೇಳುವುದಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT