ಸಿದ್ದರಾಮಯ್ಯ 
ರಾಜಕೀಯ

ಷರತ್ತುಬದ್ಧ ಸಾಲ ಮನ್ನಾ, ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ. ಬಡ್ಡಿರಹಿತ ಸಾಲ: ಸಿದ್ದರಾಮಯ್ಯ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಷರತ್ತುಬದ್ಧ ಸಾಲಮನ್ನಾ ಮಾಡಲಾಗುವುದು ಮತ್ತು ಮಹಿಳೆಯರಿಗೆ ನೀಡಲಾಗುತ್ತಿರುವ 50 ಸಾವಿರ ರೂಪಾಯಿ ಬಡ್ಡಿರಹಿತ ಸಾಲವನ್ನು ಒಂದು ಲಕ್ಷ ರೂಪಾಯಿಗೆ ಏರಿಸುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಭರವಸೆ ನೀಡಿದ್ದಾರೆ. 

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಷರತ್ತುಬದ್ಧ ಸಾಲಮನ್ನಾ ಮಾಡಲಾಗುವುದು ಮತ್ತು ಮಹಿಳೆಯರಿಗೆ ನೀಡಲಾಗುತ್ತಿರುವ 50 ಸಾವಿರ ರೂಪಾಯಿ ಬಡ್ಡಿರಹಿತ ಸಾಲವನ್ನು ಒಂದು ಲಕ್ಷ ರೂಪಾಯಿಗೆ ಏರಿಸುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಭರವಸೆ ನೀಡಿದ್ದಾರೆ. 

ಇಂದು ಕೋಲಾರದಲ್ಲಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಸರಿಯಾಗಿ ಸಾಲದ ಕಂತು ಕಟ್ಟುತ್ತಿರುವ ರೈತರ ಸಾಲವನ್ನು ಮನ್ನಾ ಮಾಡಲಾಗುವುದು. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುವವರೆಗೂ ಸಾಲದ ಕಂತು ಕಟ್ಟಿ ಎಂದು ಹೇಳಿದರು.

ಮಹಿಳೆಯರಿಗೆ ನೀಡಲಾಗುತ್ತಿರುವ 50 ಸಾವಿರ ರೂ. ಬಡ್ಡಿರಹಿತ ಸಾಲವನ್ನು ಒಂದು ಲಕ್ಷ ರೂಪಾಯಿಗೆ ಏರಿಸಲಾಗುವುದು. ಅಷ್ಟೇ ಅಲ್ಲ ರೈತರಿಗೆ ನೀಡಲಾಗುತ್ತಿರುವ ಬಡ್ಡಿರಹಿತ ಸಾಲವನ್ನು 5 ಲಕ್ಷಕ್ಕೆ ಏರಿಸುತ್ತೇವೆ. ಶೇ. 3ರ ಬಡ್ಡಿಯಲ್ಲಿ ರೈತರಿಗೆ ನೀಡುವ ಸಾಲವನ್ನು 10 ಲಕ್ಷದಿಂದ 20 ಲಕ್ಷ ರೂಪಾಯಿಗೆ ಏರಿಸುತ್ತೇವೆ ಎಂದು ಸಿದ್ದರಾಮಯ್ಯ ಘೋಷಿಸಿದರು.

ಬಡ್ಡಿರಹಿತ ಸಾಲದ ಪ್ರಮಾಣ ಏರಿಸುವ ಬಗ್ಗೆ ಮತ್ತು ಸಾಲ ಮನ್ನಾ ಬಗ್ಗೆ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೋಲಾರದಲ್ಲಿ ಎಪಿಎಂಸಿ ಮಾರುಕಟ್ಟೆಗೆ 100 ಎಕರೆ ಜಮೀನು ಮಂಜೂರು ಮಾಡುತ್ತೇವೆ, ಟೊಮ್ಯಾಟೊ ಮತ್ತು ಮಾವು ಸಂಸ್ಕರಣಾ ಘಟಕ ಮಾಡಿಕೊಡುತ್ತೇವೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯುತ್ತೇವೆ, ಹಾಲಿಗೆ ಪ್ರೋತ್ಸಾಹ ಧನವನ್ನು 6 ರೂಪಾಯಿಗೆ ಹೆಚ್ಚಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT