ಗಾಲಿ ಜನಾರ್ಧನ ರೆಡ್ಡಿ 
ರಾಜಕೀಯ

ಪ್ರತಿ ವರ್ಷ ಕೃಷಿಕನ ಬ್ಯಾಂಕ್ ಖಾತೆಗೆ 15 ಸಾವಿರ ರೂ. ಜಮೆ: ಗಾಲಿ ಜನಾರ್ಧನ್ ರೆಡ್ಡಿ ಪಕ್ಷದ ಪ್ರಣಾಳಿಕೆ ಬಿಡುಗಡೆ

ರಾಜ್ಯ ವಿಧಾನಸಭಾ ಚುನಾವಣೆ ಇನ್ನೂ ಅಧಿಕೃತವಾಗಿ ಘೋಷಣೆಯಾಗದಿದ್ದರೂ ರಾಜಕೀಯ ಪಕ್ಷಗಳು ಈಗಾಗಲೇ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿವೆ.

ರಾಯಚೂರು: ರಾಜ್ಯ ವಿಧಾನಸಭಾ ಚುನಾವಣೆ ಇನ್ನೂ ಅಧಿಕೃತವಾಗಿ ಘೋಷಣೆಯಾಗದಿದ್ದರೂ ರಾಜಕೀಯ ಪಕ್ಷಗಳು ಈಗಾಗಲೇ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿವೆ.

ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ,ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ರಾಜ್ಯಾದ್ಯಂತ ಸಂಚರಿಸುವ ಮೂಲಕ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರೆ, ಗಾಲಿ ಜನಾರ್ಧನ ರೆಡ್ಡಿ ಸ್ಥಾಪಿಸಿರುವ ಹೊಸ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮಂಗಳವಾರ ಒಂದು ಹೆಜ್ಜೆ ಮುಂದೆ ಹೋಗಿದ್ದು, ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಸಿಂಧನೂರು ತಾಲೂಕಿನ ಅಂಬಾಮಠದಲ್ಲಿ ಪಾದಯಾತ್ರೆ ನಡೆಸಿದ ಗಾಲಿ ಜನಾರ್ಧನರೆಡ್ಡಿ ಅಲ್ಲಿಯೇ, ಪ್ರಣಾಳಿಕೆ ಬಿಡುಗಡೆ ಮಾಡಿದರು. ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಪ್ರತಿ ವರ್ಷ ರೈತನ ಅಕೌಂಟ್‌ಗೆ ರೂ.15,000 ಜಮಾ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ರೈತರ ಮನೆ ಬಾಗಿಲಿಗೆ ಅಧಿಕಾರಿಗಳು ಆಗಮಿಸಿ ಸಮಸ್ಯೆ ಆಲಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದಾರೆ.

ಎಲ್ಲ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು,‌ ನೀರಾವರಿ ಯೋಜನೆ ಸದೃಢಗೊಳಿಸಲಾಗುವುದು, ಸಕಾಲಕ್ಕೆ ರಸ ಗೊಬ್ಬರಗಳನ್ನು ರೈತರಿಗೆ ನೀಡಲು ಕ್ರಮ ತೆಗೆದುಕೊಳ್ಳುವುದಾಗಿ ಅವರು ಘೋಷಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಪಾದಯಾತ್ರೆಗೆ ಬಂದ ಗ್ರಾಮಸ್ಥರು ಹಾಗೂ ಸುಮಾರು 20 ಸಾವಿರ ಕಾರ್ಯಕರ್ತರಿಗೆ ಅಂಬಾಮಠದ ಬಳಿ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT