ಸಂಗ್ರಹ ಚಿತ್ರ 
ರಾಜಕೀಯ

ಅಧಿಕಾರಕ್ಕೆ ಬಂದರೆ ಹೊಸ ಗದಗ-ಬೆಟಗೇರಿ ನಿರ್ಮಾಣ: ಜೆಡಿಎಸ್ ಘೋಷಣೆ

ನಿಂತ ನೀರಾಗಿದ್ದ ಗದಗ ಜಿಲ್ಲೆಯಲ್ಲಿ ಜೆಡಿಎಸ್'ಗೆ ಮರು ಜೀವ ದೊರೆತಿದ್ದು, ನಗರದಲ್ಲಿ ಭಾನುವಾರ ಜೆಡಿಎಸ್ ಪಾದಯಾತ್ರೆ ಪ್ರಾರಂಭವಾಗುವ ಮೂಲಕ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿತು.

ಗದಗ: ನಿಂತ ನೀರಾಗಿದ್ದ ಗದಗ ಜಿಲ್ಲೆಯಲ್ಲಿ ಜೆಡಿಎಸ್'ಗೆ ಮರು ಜೀವ ದೊರೆತಿದ್ದು, ನಗರದಲ್ಲಿ ಭಾನುವಾರ ಜೆಡಿಎಸ್ ಪಾದಯಾತ್ರೆ ಪ್ರಾರಂಭವಾಗುವ ಮೂಲಕ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿತು.

ನಗರದ ವೆಂಕಟೇಶ ಟಾಕೀಸ್ ಹತ್ತಿರದ ಲಕ್ಷ್ಮೀ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.

ಪಾದಯಾತ್ರೆಯಲ್ಲಿ ಜೆಡಿಎಸ್ ನಾಯಕರು, ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೇ ಆದರೆ, ಕುಡಿಯುವ ನೀರು, ಹೊಸ ಗದಗ-ಬೆಟಗೇರಿ ನಿರ್ಮಾಣ, ಐಷಾರಾಮಿ ರಸ್ತೆಗಳು, ಧೂಳು ಮುಕ್ತ ಮತ್ತು ಗುಂಡಿ ಮುಕ್ತ ರಸ್ತೆಗಳು, ಕೈಗಾರಿಕಾ ಟೌನ್‌ಶಿಪ್ ಅಭಿವೃದ್ಧಿ ಮತ್ತು ರೈತರಿಗೆ ಹೈಟೆಕ್ ಮಾರುಕಟ್ಟೆ ಒದಗಿಸುವ ಭರವಸೆಗಳನ್ನು ನೀಡಿದರು.

ಜೆಡಿಎಸ್ ಮುಖಂಡ ವೆಂಕನಗೌಡ ಗೋವಿಂದಗೌಡರ ಮಾತನಾಡಿ, “ನಾವು 24X7 ಭರವಸೆ ನೀಡುವುದಿಲ್ಲ. ಆದರೆ, 1X1 ಅಂದರೆ ಪ್ರತಿನಿತ್ಯ ಒಂದು ಗಂಟೆ ನೀರು ಸರಬರಾಜು ಮಾಡುತ್ತೇವೆ. ಹೊಸ ಗದಗ-ಬೆಟಗೇರಿಯನ್ನು ನಿರ್ಮಾಣ ಮಾಡುತ್ತೇವೆ. ಪ್ರತಿ ಮನೆಗೂ ಭೇಟಿ ನೀಡಲಾಗುತ್ತಿದ್ದು, ಗದಗದಲ್ಲಿ ಹೊಸ ಬದಲಾವಣೆ ತರಲು ಮತದಾರರಿಂದ ಬೆಂಬಲವನ್ನು ಬಯಸುತ್ತಿದ್ದೇವೆ. ನಮ್ಮ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕರ್ನಾಟಕದ ಬಗ್ಗೆ ಹೊಸ ದೃಷ್ಟಿಕೋನ ಹೊಂದಿದ್ದಾರೆ ಎಂದು ಹೇಳಿದರು.

ಈ ವೇಳೆ ಗದಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಂದಾನಯ್ಯ ಕುರ್ತಕೋಟಿಮಠ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ