ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ಗುತ್ತಿಗೆ ಪಡೆದಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುತ್ತಿಗೆ ಪಡೆದಿದ್ದಾರೆಂದು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಸೋಮವಾರ ಆರೋಪಿಸಿದ್ದಾರೆ.

ಬೆಳಗಾವಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುತ್ತಿಗೆ ಪಡೆದಿದ್ದಾರೆಂದು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಸೋಮವಾರ ಆರೋಪಿಸಿದ್ದಾರೆ.

ಬೈಲಹೊಂಗಲ ತಾಲೂಕಿನ ತಡಸೂರು ಗ್ರಾಮದಲ್ಲಿ ‘ಪಂಚರತ್ನ ರಥಯಾತ್ರೆ’ಗೆ ಆಗಮಿಸುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘2008ರಲ್ಲಿ ‘ಆಪರೇಷನ್ ಕಮಲ’ದ ಗುತ್ತಿಗೆಯನ್ನು ಸಿದ್ದರಾಮಯ್ಯ ಪಡೆದಿದ್ದು, ಒಪ್ಪಂದದ ಮೊತ್ತವೆಷ್ಟು ಎಂದು ನಾನು ಹಲವು ಬಾರಿ ಅವರನ್ನು ಕೇಳಿದ್ದೇನೆ. ಆದರೆ, ಅವರು ಇಲ್ಲಿಯವರೆಗೆ ಉತ್ತರ ನೀಡಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಾನೇ ಕಾರಣ ಎಂದು ಹೇಳುತ್ತಿದ್ದಾರೆ. ಆದರೆ, ವಾಸ್ತವಿಕವಾಗಿ ಸಿದ್ದರಾಮಯ್ಯನವರೇ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಗುತ್ತಿಗೆ ಪಡೆದುಕೊಂಡಿದ್ದಾರೆಂದು ಹೇಳಿದರು.

ಇದೇ ವೇಳೆ ಈ ಬಾರಿ ಕಾಂಗ್ರೆಸ್‌ ಪತನವಾಗುವುದು ಖಚಿತ ಎಂದ ಅವರು. ಸಿದ್ದರಾಮಯ್ಯ ಮನೆಗೆ ಹೋಗುವ ಸಮಯ ಬಂದಿದೆ. ಜೆಡಿಎಸ್ ಬಗ್ಗೆ ಹೆಚ್ಚು ಮಾತನಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಬಿಎಸ್ ಯಡಿಯೂರಪ್ಪ ಅತಿಯಾದ ಆತ್ಮವಿಶ್ವಾಸದಲ್ಲಿದ್ದಾರೆಂದು ತಿಳಿಸಿದರು.

ಜನರ ವಿಶ್ವಾಸ ಗಳಿಸಿ ಯಾವುದೇ ಸಮುದಾಯದ ವ್ಯಕ್ತಿ ಮುಖ್ಯಮಂತ್ರಿಯಾಗಬಹುದು ಎಂಬ ಹಕ್ಕು ನಮ್ಮ ಸಂವಿಧಾನದಲ್ಲಿದೆ. ಚನ್ನರಾಯಪಟ್ಟಣ ಕ್ಷೇತ್ರದಿಂದ ನನ್ನ ವಿರುದ್ಧ ಯಾರು ಬೇಕಾದರೂ ಸ್ಪರ್ಧಿಸಬಹುದು ಆದರೆ ಯಾರನ್ನು ಆಯ್ಕೆ ಮಾಡಬೇಕೆಂದು ಜನರೇ ನಿರ್ಧರಿಸುತ್ತಾರೆ, ನನಗೆ ನಂಬಿಕೆ ಇದೆ. ಜನರು ನನ್ನನ್ನು ಆಯ್ಕೆ ಮಾಡುತ್ತಾರೆಂದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಶೀಘ್ರವೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು. ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. 1994 ರ ಚುನಾವಣೆಯಂತೆ ಜನರು ನಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸ ನಮಗಿದೆ. ನಮ್ಮ ಸಾಲ ಮನ್ನಾ ಕಾರ್ಯಕ್ರಮದಿಂದ ಬೆಳಗಾವಿಯ ಹೆಚ್ಚಿನ ಸಂಖ್ಯೆಯ ರೈತರು ಪ್ರಯೋಜನ ಪಡೆದಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು; ಪ್ರತಿಭಟಿಸುವುದಾದರೇ ಸದನದ ಬಾವಿಗೆ ಬನ್ನಿ: ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!