ಸಿಟಿ ರವಿ 
ರಾಜಕೀಯ

ಅಪ್ಪನ ಮಾತು ಕೇಳಿ ಜೆಡಿಎಸ್‌ ಸೇರಿದ್ದರೆ ಎಂಎಲ್‌ಎ, ಮಂತ್ರಿ ಆಗುತ್ತಿರಲಿಲ್ಲ: ಸಿಟಿ ರವಿ

ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರ ಅಭಿಮಾನಿಯಾಗಿದ್ದ ತಂದೆಯ ಸಲಹೆಯನ್ನು ಪಾಲಿಸಿದ್ದರೆ ಜೆಡಿಎಸ್ ವರಿಷ್ಠರು ಹಾಗೂ ಅವರ ಪುತ್ರರ ಕೊಂಡಾಡುವುದರಲ್ಲೇ ಜೀವನ ಮುಗಿಯುತ್ತಿತ್ತೇ ಹೊರತು ಎಂದಿಗೂ ಶಾಸಕ ಅಥವಾ ಸಚಿವನಾಗುತ್ತಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡ ಅವರ ಅಭಿಮಾನಿಯಾಗಿದ್ದ ತಂದೆಯ ಸಲಹೆಯನ್ನು ಪಾಲಿಸಿದ್ದರೆ ಜೆಡಿಎಸ್ ವರಿಷ್ಠರು ಹಾಗೂ ಅವರ ಪುತ್ರರ ಕೊಂಡಾಡುವುದರಲ್ಲೇ ಜೀವನ ಮುಗಿಯುತ್ತಿತ್ತೇ ಹೊರತು ಎಂದಿಗೂ ಶಾಸಕ ಅಥವಾ ಸಚಿವನಾಗುತ್ತಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಸೋಮವಾರ ಹೇಳಿದ್ದಾರೆ.

ಸೋಮವಾರ ಸದನದಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮಂಡಿಸಿ ಮಾತನಾಡಿದ ಅವರು, ಬಿಜೆಪಿ ನನಗೆ ಭಾರತ್ ಮಾತಾ ಕಿ ಜೈ ಹೇಳುವುದನ್ನು ಕಲಿಸಿತು. ಸಾಮಾನ್ಯ ಕಾರ್ಯಕರ್ತನೊಬ್ಬ ಇಂದು ಏನಾದರೂ ಕೀರ್ತಿ ಗಳಿದ್ದಾನೆ ಎಂದರೆ ಅದಕ್ಕೆ ಜೆರಿ ನಡ್ಡಾ ನೇತೃತ್ವದ ಪಕ್ಷ ಕಾರಣ. ನನ್ನ ತಂದೆ ದೇವೇಗೌಡರ ಕಟ್ಟಾ ಅಭಿಮಾನಿಯಾಗಿದ್ದರು. ಅಪ್ಪನ ಮಾತನ್ನು ಪಾಲಿಸಿದ್ದರೆ ‘ದೊಡ್ಡಗೌಡರಿಗೆ, ಜೂನಿಯರ್ ಗೌಡ, ಮರೀಗೌಡರಿಗೆ ಜೈ ಎನ್ನುವುದನ್ನು ಕಲಿಯುತ್ತಿದ್ದೆ. ಆದರೆ, ಎಂದಿಗೂ ಶಾಸಕನಾಗಲೀ ಅಥವಾ ಸಚಿವನಾಗಲೀ ಆಗುತ್ತಿರಲಿಲ್ಲ ಎಂದು ಹೇಳಿದರು.

ನಾನು ನನ್ನ ತಂದೆಯ ಮಾತನ್ನು ಕೇಳದ ಕಾರಣ ಇಲ್ಲಿ (ಬಿಜೆಪಿಯಲ್ಲಿ) ನನಗೆ ಭಾರತ್ ಮಾತಾ ಕಿ ಜೈ ಎಂದು ಕಲಿಸಲಾಯಿತು ಮತ್ತು ಸಾಮಾನ್ಯ ಮಧ್ಯಮ ವರ್ಗದ ರೈತನ ಮಗನಾಗಿ ಇಂದು ನಾನು ಇಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ನಾಲ್ಕು ಬಾರಿ ಶಾಸಕರಾಗಿದ್ದೇನೆಂದು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT