ಮಹೇಶ್ ಕುಮಟಳ್ಳಿ ಮತ್ತು ಲಕ್ಷ್ಮಣ ಸವದಿ 
ರಾಜಕೀಯ

ಬೆಳಗಾವಿ: ವಿಧಾನಸಭೆ ಚುನಾವಣೆ ಟಿಕೆಟ್ ಗಾಗಿ ಪೈಪೋಟಿ ತೀವ್ರ; ಅಥಣಿ  ಕ್ಷೇತ್ರಕ್ಕಾಗಿ ಕಾಂಗ್ರೆಸ್-ಬಿಜೆಪಿ ನಾಯಕರ ಜಟಾಪಟಿ

ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ನಿರ್ಣಾಯಕ ಎಂಟು ವಿಧಾನಸಭಾ ಸ್ಥಾನಗಳಿಗೆ ಪೈಪೋಟಿ ಎದುರಾಗಿದೆ.

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ನಿರ್ಣಾಯಕ ಎಂಟು ವಿಧಾನಸಭಾ ಸ್ಥಾನಗಳಿಗೆ ಪೈಪೋಟಿ ಎದುರಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಇಲ್ಲಿನ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್‌ಗಾಗಿ ಹೆಚ್ಚಿನ ಸಂಖ್ಯೆಯ ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ.

2004 ರಿಂದ ಬಿಜೆಪಿಯ ಭದ್ರಕೋಟೆಯಾಗಿದ್ದರೂ, ಕಳೆದ ಎರಡು ದಶಕಗಳಲ್ಲಿ ನಡೆದ ಬಹುತೇಕ ಚುನಾವಣೆಗಳಲ್ಲಿ ಅಥಣಿ ಕ್ಷೇತ್ರವು ತೀವ್ರ ಪೈಪೋಟಿಗೆ ಸಾಕ್ಷಿಯಾಗಿದೆ. ಮುಂಬರುವ ಚುನಾವಣೆಯಲ್ಲಿ ಅಥಣಿಯಲ್ಲಿ ಬಿಜೆಪಿ ಪಾಳಯಕ್ಕೆ ಬಹಳ ಪೈಪೋಟಿ ಎದುರಾಗುವ ಸಾಧ್ಯತೆಯಿದೆ.

ಮುಖ್ಯವಾಗಿ ಎಂಎಲ್‌ಸಿ ಲಕ್ಷ್ಮಣ ಸವದಿ ಮತ್ತು ಹಾಲಿ ಶಾಸಕ ಮಹೇಶ ಕುಮಟಳ್ಳಿ ಜೊತೆಯಾಗಿ ಕೆಲಸ ಮಾಡಿ ಪ್ರತಿಸ್ಪರ್ಧಿಗಳನ್ನು ಮಣಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಆದರೆ, ಚುನಾವಣೆಗೂ ಮುನ್ನ ಬಿಜೆಪಿಯಲ್ಲಿ ನಿರೀಕ್ಷಿತ ಗುಂಪುಗಾರಿಕೆ ನಡೆಯುತ್ತಿದೆ, ಇದರ ಸದುಪಯೋಗ ಪಡಿಸಿಕೊಳ್ಳುತ್ತಿರುವ ಕಾಂಗ್ರೆಸ್ ತನ್ನ ಪಕ್ಷವನ್ನು ಬಲಪಡಿಸುತ್ತಿದೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಹೋಲಿಸಿದರೆ, ಕಾಂಗ್ರೆಸ್ ಪಕ್ಷದ ಅತಿ ಹೆಚ್ಚು 13 ಮುಖಂಡರು ಪಕ್ಷದ ಟಿಕೆಟ್‌ಗಾಗಿ ಒತ್ತಾಯಿಸಿ ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಪಕ್ಷಕ್ಕೆ ಕಷ್ಟವಾಗಿದ್ದರೂ, ಅಥಣಿ ಬಿಜೆಪಿ ಪಾಳಯದಲ್ಲಿ ಬಿರುಕು ಮೂಡುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹಲವು ಮುಖಂಡರು ಒತ್ತಡ ಹೇರುತ್ತಿದ್ದಾರೆ.

ಅಥಣಿಯಿಂದ ಪಕ್ಷದ ಟಿಕೆಟ್ ಬಯಸಿದ 13 ಮಂದಿಯಲ್ಲಿ ಎಸ್ ಕೆ ಭೂತಾಳೆ, ಧರೆಪ್ಪ ಟಕ್ಕಣ್ಣವರ, ಗಜಾನನ ಮಂಗಸೂಳಿ ಮತ್ತು ಬಸವರಾಜ ಭೂತಾಳೆ ಅವರ ನಾಲ್ವರು ಕೆಪಿಸಿಸಿ ಸ್ಕ್ರೀನಿಂಗ್ ಕಮಿಟಿಯಿಂದ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಸವದಿ ಅಥವಾ ಕುಮಟಳ್ಳಿಗೆ  ಟಿಕೆಟ್ ನಿರಾಕರಿಸಿದರೆ ಬಿಜೆಪಿ ಪಾಳಯದಿಂದ ಬೆಂಬಲ ಪಡೆಯುವ ಅವಕಾಶವನ್ನು ಕಾಂಗ್ರೆಸ್ ಪಕ್ಷದ ಒಂದು ವರ್ಗ ಬಳಸಿಕೊಳ್ಳುವ ನಿರೀಕ್ಷೆಯಲ್ಲಿದೆ’ ಎಂದು ಮೂಲಗಳು ತಿಳಿಸಿವೆ.

ಆದರೆ ಸವದಿ ಮತ್ತು ಕುಮಟಳ್ಳಿ ಇಬ್ಬರೂ ಮುಂಬರುವ ಚುನಾವಣೆಯಲ್ಲಿ ಕಣಕ್ಕಿಳಿಯಲಿ ಅಥವಾ ಇಲ್ಲದಿರಲಿ, ಪಕ್ಷಕ್ಕಾಗಿ ಒಗ್ಗಟ್ಟಾಗಿ ಶ್ರಮಿಸುತ್ತಿದ್ದೇವೆ ಎಂದು ಈಗಾಗಲೇ ಹೇಳಿಕೆ ನೀಡಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲ ಪಡೆದಿರುವ ಎಸ್ ಕೆ ಭೂತಳೆ ಅವರಿಗೆ ಪಕ್ಷದ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ. ಪಂಚಮಸಾಲಿ ಲಿಂಗಾಯತ ಮುಖಂಡರ ಬೆಂಬಲ ಹೊಂದಿದ್ದಕ್ಕಾಗಿ ತಕ್ಕಣ್ಣನವರ್ ಕೂಡ ಪಕ್ಷದ ಟಿಕೆಟ್‌ಗಾಗಿ ಮುಂಚೂಣಿಯಲ್ಲಿದ್ದಾರೆ.

ಪಕ್ಷವು ಅಥಣಿಗೆ ತನ್ನ ಅಧಿಕೃತ ಅಭ್ಯರ್ಥಿಯನ್ನು ಅಂತಿಮ ಹಂತದಲ್ಲಿ ಘೋಷಿಸಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಅಥಣಿಯ ಬಿಜೆಪಿ ಪಾಳಯದಲ್ಲಿ ಲವಲವಿಕೆ ಮತ್ತು ಸ್ಥಾನ ಉಳಿಸಿಕೊಳ್ಳುವ ವಿಶ್ವಾಸವಿದ್ದರೂ, ಇಬ್ಬರು ನಾಯಕರಲ್ಲಿ ಒಬ್ಬರು ಪಕ್ಷದ ಟಿಕೆಟ್ ವಂಚಿತರಾಗುವ ಸಾಧ್ಯತೆಯಿರುವ ಕಾರಣ ಸವದಿ ಮತ್ತು ಕುಮಟಳ್ಳಿಯ ಎರಡೂ ಪಾಳಯಗಳ ಪಕ್ಷದ ಕಾರ್ಯಕರ್ತರು ಕೈಜೋಡಿಸುವ ಸಾಧ್ಯತೆ ಕಡಿಮೆಯಿದೆ.

ಆದಾಗ್ಯೂ, ಅಥಣಿಯಲ್ಲಿ ಪಕ್ಷವು ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸುವಂತೆ ನೋಡಿಕೊಳ್ಳಲು ಪಕ್ಷದ ಉನ್ನತ ನಾಯಕತ್ವವು ಬೆಳಗಾವಿಯ ಎಲ್ಲಾ ಪ್ರಮುಖ ನಾಯಕರಿಗೆ ಸಲಹೆ ನೀಡಿದೆ. ಜೆಡಿಎಸ್ ಕೂಡ ಅಥಣಿಯಿಂದ ಮಾಜಿ ಶಾಸಕ ಶಹಜಾನ್ ಡೊಂಗರಗಾಂವ್ ಅಥವಾ ಗಿರೀಶ್ ಭೂತಾಳೆ ಅವರನ್ನು ಕಣಕ್ಕಿಳಿಸಲು ಉತ್ಸುಕವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT