ಸಿದ್ದರಾಮಯ್ಯ 
ರಾಜಕೀಯ

ಸಾವಿನ ಭಯ ನನಗಿಲ್ಲ; ಕೊಲೆಗಡುಕ ಮನಸ್ಥಿತಿಯ ಬಿಜೆಪಿ ಬಗ್ಗೆ ಜನ ಎಚ್ಚರಗೊಳ್ಳಬೇಕು: ಸಿದ್ದರಾಮಯ್ಯ

ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರು: ಹತ್ಯೆ ಮಾಡಲು ಕರೆ ನೀಡುವ ಸಚಿವರಿಗೆ ಸಂಪುಟದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ರಾಜ್ಯಪಾಲರು ತಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರನ್ನು ಸಂಪುಟದಿಂದ ಕಿತ್ತು ಹಾಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾವಿನ ಭಯ ನನಗಿಲ್ಲ, ಇಂತಹ ಕೊಲೆಗಡುಕ ಮನಸ್ಥಿತಿಯವರು ಅಧಿಕಾರದಲ್ಲಿದ್ದರೆ ರಾಜ್ಯದ ಯಾವುದೇ ವ್ಯಕ್ತಿ ಸುರಕ್ಷಿತನಲ್ಲ. ಸೋಲಿನ ಭಯದಿಂದ ತತ್ತರಿಸಿಹೋಗಿರುವ ಈ ಕೊಲೆಗಡುಕ ಮನಸ್ಸುಗಳು ಗೆಲುವಿಗಾಗಿ ಯಾರ ಹತ್ಯೆಯನ್ನೂ ಮಾಡಬಹುದು. ಈ ಬಗ್ಗೆ ಜನ ಎಚ್ಚರಗೊಳ್ಳಬೇಕು ಎಂದಿದ್ದಾರೆ.

ಸೈದ್ಧಾಂತಿಕವಾಗಿ ಎದುರಿಸಲಾಗದ ಕಾರಣಕ್ಕಾಗಿಯೇ ಮಹಾತ್ಮ ಗಾಂಧೀಜಿಯವರನ್ನು ಗೋಡ್ಸೆ ಕೊಂದ. ಅದೇ ಗೋಡ್ಸೆ ಸಂತಾನವೇ ವಿದ್ವಾಂಸರಾಗಿದ್ದ ಎಂ.ಎಂ.ಕಲಬರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿರುವುದು, ಬಿಜೆಪಿಯ ಹೊಡಿ, ಬಡಿ ಸಂಸ್ಕೃತಿ ಅವರ ಬೌದ್ಧಿಕ ದಿವಾಳಿತನದ ಪ್ರತೀಕ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೈದ್ಧಾಂತಿಕವಾಗಿ ನನ್ನನ್ನು ಎದುರಿಸುವ, ಇಲ್ಲವೇ ಸಾಧನೆಯ ಆಧಾರದಲ್ಲಿ ಮತ ಕೇಳುವ ಧಮ್-ತಾಕತ್ ಅವರಿಗೆ ಇಲ್ಲ.   ಅವರದು ಶೂನ್ಯ ಸಾಧನೆ ಮತ್ತು ಪೊಳ್ಳು ಸಿದ್ಧಾಂತ ಎಂದು ಅವರು ಟೀಕಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT