ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಅಣ್ಣ ನಿನ್ನದು ಕೈಯಲ್ಲ, ಗೋಲ್ಡನ್ ಹ್ಯಾಂಡ್ ಅಂತ ಹೇಳಿದ್ಯಲ್ಲಾ: ಜೆಡಿಎಸ್ ವಿಕಲಚೇತನ ಪಕ್ಷ ಎಂದ ಸಿ.ಟಿ ರವಿಗೆ ಎಚ್.ಡಿ ಕುಮಾರಸ್ವಾಮಿ ಡಿಚ್ಚಿ!

ನನ್ನ ಬಳಿ ಆವಾಗ ಬಂದಿದ್ದೀರಲ್ಲ, ಸಾಲ ತೀರಿಸಲು ಅಗಲ್ಲ ಅಂತ ಬಂದಿದ್ರಲ್ಲ, ಸಹಾಯ ಮಾಡಿದ ನಂತರ ನೀವು ಬಂದಿದ್ರಲ್ಲ. ಅಣ್ಣ ನಿನ್ನದು ಕೈಯಲ್ಲ-ಗೋಲ್ಡನ್ ಹ್ಯಾಂಡ್ ಅಂತ ಹೇಳಿದ್ದೀರಲ್ಲ.

ಬೆಂಗಳೂರು: ನಾವು ಅವಕಾಶವಾದಿ ರಾಜಕಾರಣಿಗಳು ಅಂತ ಹೇಳಿದ್ದಾರೆ. ರಾಜಕಾರಣದಲ್ಲಿ ವಿಕಲಾಂಗ ವ್ಯವಸ್ಥೆ ಇರಬಾರದು ಅಂದಿದ್ದೀರಿ. ನೀವು ಯಾವ ಸಿದ್ಧಾಂತದ ಮೇಲೆ ಬಂದವರು. ಈ ರಾಜ್ಯದಲ್ಲಿ ವಿಕಲಚೇತರಿಗೆ ಶಕ್ತಿ ತುಂಬಿದವರು ನಾವು ಎಂದು ಎಚ್‌.ಡಿ.ಕುಮಾರಸ್ವಾಮಿ ಬಿಜೆಪಿ ಶಾಸಕ ಸಿ.ಟಿ.ರವಿ ಅವರಿಗೆ ಟಾಂಗ್ ಕೊಟ್ಟರು.

ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುವ ವೇಳೆ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ವಿಕಲಚೇತನ ಪಕ್ಷ ಅನ್ನೋ ರೀತಿ ಸಿ.ಟಿ.ರವಿ ಕೊಟ್ಟಿದ್ದ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವು ಅವಕಾಶವಾದಿ ರಾಜಕಾರಣಿಗಳೂ ಅಂತ ಹೇಳಿದ್ದಾರೆ. ರಾಜಕಾರಣದಲ್ಲಿ ವಿಕಲಾಂಗ ವ್ಯವಸ್ಥೆ ಇರಬಾರದು ಅಂದಿದ್ದೀರಿ. ಏನ್ ನೀವು ಸಿದ್ಧಾಂತದ ಮೇಲೆ ಬಂದವರು. ಈ ರಾಜ್ಯದಲ್ಲಿ ವಿಕಲಚೇತರಿಗೆ ಶಕ್ತಿ ತುಂಬಿದವರು ಈ ಕುಮಾರಸ್ವಾಮಿ. ನಮ್ಮ ಸರ್ಕಾರದ ಅವಧಿಯಲ್ಲಿ ವಿಕಲಚೇತನರಿಗೆ ಇಂಧನ ಇಲಾಖೆಯಲ್ಲಿ ನೌಕರಿ ಕೊಟ್ಟಿದ್ದೆ. ವಿಕಲಚೇತನರಿಗೆ ಶಕ್ತಿ ತುಂಬಿದರೆ ಅವರು ಸಹ ಬದುಕಬಹುದು ಎಂಬುದನ್ನು ತೋರಿಸಿ ಕೊಟ್ಟಿದ್ದೇನೆ ಎಂದು ಹೇಳಿದರು.

ನಾವು ರಾಜಕಾರಣದಲ್ಲಿ ವಿಕಲಚೇತನರೇ. ಈ ವಿಕಲಚೇತನರ ಪಕ್ಷದ ಬಗ್ಗೆ ಮಾತಾಡ್ತೀರಾ?. ನನ್ನ ಬಳಿ ಆವಾಗ ಬಂದಿದ್ದೀರಲ್ಲ, ಸಾಲ ತೀರಿಸಲು ಅಗಲ್ಲ ಅಂತ ಬಂದಿದ್ರಲ್ಲ, ಸಹಾಯ ಮಾಡಿದ ನಂತರ ನೀವು ಬಂದಿದ್ರಲ್ಲ. ಅಣ್ಣ ನಿನ್ನದು ಕೈಯಲ್ಲ-ಗೋಲ್ಡನ್ ಹ್ಯಾಂಡ್ ಅಂತ ಹೇಳಿದ್ದೀರಲ್ಲ, ಈಗ ವಿಕಲಚೇತನರ ಬಗ್ಗೆ ಬಹಳ ಮಾತನಾಡುತ್ತೀರಾ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT