ಮಂಗಳೂರಿಗೆ ಕಳೆದ ರಾತ್ರಿ ಬಂದಿಳಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು 
ರಾಜಕೀಯ

ಎರಡು ದಿನಗಳ ಭೇಟಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ರಾಜ್ಯಕ್ಕೆ ಆಗಮನ: ಉಡುಪಿ, ಚಿಕ್ಕಮಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಎರಡೇ ತಿಂಗಳು ಬಾಕಿ. ಆಡಳಿತಾರೂಢ ಬಿಜೆಪಿಯಿಂದ ಕೇಂದ್ರದ ನಾಯಕರು ಪದೇ ಪದೇ ರಾಜ್ಯಕ್ಕೆ ಆಗಮಿಸಿ ಹಲವು ತಂತ್ರಗಳನ್ನು ಹೆಣೆಯುತ್ತಿದ್ದಾರೆ. 

ಉಡುಪಿ/ಚಿಕ್ಕಮಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಎರಡೇ ತಿಂಗಳು ಬಾಕಿ. ಆಡಳಿತಾರೂಢ ಬಿಜೆಪಿಯಿಂದ ಕೇಂದ್ರದ ನಾಯಕರು ಪದೇ ಪದೇ ರಾಜ್ಯಕ್ಕೆ ಆಗಮಿಸಿ ಹಲವು ತಂತ್ರಗಳನ್ನು ಹೆಣೆಯುತ್ತಿದ್ದಾರೆ. 

ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಉಡುಪಿ, ಚಿಕ್ಕಮಗಳೂರು, ಬೇಲೂರು ಪ್ರವಾಸ ಹಮ್ಮಿಕೊಂಡಿದ್ದಾರೆ. ನಿನ್ನೆ ಭಾನುವಾರ ರಾತ್ರಿ ರಾಜ್ಯಕ್ಕೆ ಆಗಮಿಸಿದ್ದು, ಎರಡು ದಿನಗಳ ಕಾಲ ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಪಕ್ಷದ ಪರ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಉಡುಪಿ ಹಾಗೂ ಬೈಂದೂರಿನ ಮುಳ್ಳಿಕಟ್ಟೆ ಗ್ರಾಮದಲ್ಲಿ ಬೂತ್‌ ಪ್ರಮುಖರ ಸಭೆ, ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ನಡ್ಡಾ, ಬಳಿಕ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಳಿಕ, ಶೃಂಗೇರಿಗೆ ತೆರಳಿ, ಜಗದ್ಗುರುಗಳ ದರ್ಶನ ಪಡೆದು, ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ನಾಳೆ ಚಿಕ್ಕಮಗಳೂರಿನಲ್ಲಿ ಪ್ರಬುದ್ಧರ ಸಭೆಯಲ್ಲಿ ಪಾಲ್ಗೊಂಡ ಬಳಿಕ, ಹಾಸನ ಜಿಲ್ಲೆಯ ಬೇಲೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಉಡುಪಿ ಕೃಷ್ಣಮಠಕ್ಕೆ ಭೇಟಿ: ನಿನ್ನೆ ರಾತ್ರಿ ಜೆಪಿ ನಡ್ಡಾ ಮಂಗಳೂರಿಗೆ ಆಗಮಿಸಿದ್ದರು. ಇಂದು ಬೆಳಗ್ಗೆ 9.30ಕ್ಕೆ ಉಡುಪಿಗೆ ಆಗಮಿಸಿ, ಉಡುಪಿ ಕೃಷ್ಣಮಠಕ್ಕೆ ತೆರಳಲಿದ್ದಾರೆ. ಅಲ್ಲಿ ಕೃಷ್ಣನ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಿಂದ ಆಶೀರ್ವಾದ ಪಡೆಯಲಿದ್ದಾರೆ. ನಂತರ, 10 ಗಂಟೆಗೆ ಎಂಜಿಎಂ ಕಾಲೇಜು ಮೈದಾನದಲ್ಲಿ ಉಡುಪಿ ಜಿಲ್ಲೆಯ ಬಿಜೆಪಿಯ 1,111 ಬೂತ್‌ಗಳ 13,200 ಅಪೇಕ್ಷಿತ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮುಂದಿನ ಚುನಾವಣೆಯನ್ನು ಎದುರಿಸುವ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ.

ಅಪರಾಹ್ನ ಬೈಂದೂರಿಗೆ ತೆರಳಿ, ಮುಳ್ಳಿಕಟ್ಟೆ ಗ್ರಾಮದ ನಗುಸಿಟಿ ಮೈದಾನದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಈ ಸಮಾವೇಶದಲ್ಲಿ 25,000 ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಅಲ್ಲಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪಕ್ಕೆ ತೆರಳಿ, ನಗರದ ಲಾಲ್‌ ಬಹದ್ದೂರ್‌ ಶಾಸ್ತ್ರೀ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿರುವ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ, ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿರುವ ಚುನಾಯಿತ ಪ್ರತಿನಿಧಿಗಳ ಜೊತೆ ಮುಂಬರುವ ವಿಧಾನಸಭಾ ಚುನಾವಣೆ ಕುರಿತ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಜೆ ಶೃಂಗೇರಿ ಮಠಕ್ಕೆ ತೆರಳಿ ಗುರುಗಳ ದರ್ಶನ ಪಡೆದು, ರಾತ್ರಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ನಾಳೆ ಬೆಳಗ್ಗೆ 5.30ಕ್ಕೆ ಶಾರದಾಂಬಾ ದೇಗುಲದಲ್ಲಿ ನಡೆಯಲಿರುವ ಮೊದಲ ಪೂಜೆಯಲ್ಲಿ ಪಾಲ್ಗೊಂಡು, ಅಲ್ಲಿಂದ ಚಿಕ್ಕಮಗಳೂರಿಗೆ ತೆರಳಲಿದ್ದಾರೆ. ನಗರದ ಬಸವನಹಳ್ಳಿಯಲ್ಲಿರುವ ಶಾಸಕ ಸಿ.ಟಿ.ರವಿ ಅವರ ಮನೆಯಿಂದ ಮೆರವಣಿಗೆಯಲ್ಲಿ ಆಗಮಿಸಿ, ನಗರದ ಕುವೆಂಪು ಕಲಾಮಂದಿರದಲ್ಲಿ ಏರ್ಪಡಿಸಲಾಗಿರುವ ಪ್ರಬುದ್ಧರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ, ಹಾಸನ ಜಿಲ್ಲೆಯ ಬೇಲೂರಿಗೆ ತೆರಳಿ, ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಡ್ಡಾಗೆ ಅದ್ದೂರಿ ಸ್ವಾಗತ ಕೋರಲು ರಾಜ್ಯ ಬಿಜೆಪಿ ಕಾರ್ಯಕರ್ತರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಎಲ್ಲೆಡೆ ನಡ್ಡಾ ಅವರನ್ನು ಸ್ವಾಗತಿಸುವ ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್ಸ್‌ಗಳು ರಾರಾಜಿಸುತ್ತಿವೆ. ನಡ್ಡಾ ಭೇಟಿ ಹಿನ್ನೆಲಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌, ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವರು ಅವರಿಗೆ ಸಾಥ್‌ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!