ಸಿಟಿ ರವಿ ಬಾಡೂಟ ಸವಿದರು ಎನ್ನಲಾದ ಫೋಟೋ 
ರಾಜಕೀಯ

ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ‌ ಪಾಪ ಎಂದೆನಿಸುತ್ತಷ್ಟೆ: ಸಿಟಿ ರವಿಗೆ ಜೆಡಿಎಸ್ ಟಾಂಗ್

 ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದ್ದು, ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ? ಎಂದು ಜೆಡಿಎಸ್ ಒತ್ತಾಯಿಸಿದೆ.

ಬೆಂಗಳೂರು:  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬಾಡೂಟ ಸೇವಿಸಿ ಭಟ್ಕಳದ ನಾಗಬನ ಹಾಗೂ ಕರಿಬಂಟ ಹನುಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂಬ ಸುದ್ದಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಾಡೂಟ ಸೇವಿಸುವಾಗ ತೆಗೆದ ಪಟವು ಪ್ರಕಟವಾಗಿದ್ದು, ಸಿ.ಟಿ.ರವಿಯವರೆ, ಸತ್ಯ ಬಹಿರಂಗಪಡಿಸುವಿರೆ? ಎಂದು ಜೆಡಿಎಸ್ ಒತ್ತಾಯಿಸಿದೆ.

ಈ ಸಂಬಂಧ ಜೆಡಿಎಸ್ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಲಾಗಿದ್ದು,  ನೀವು ತಿಂದ ಮಾಂಸ ಯಾವುದು ಎಂದು ಹೇಳುತ್ತೀರಾ, ರವಿಯವರೆ? ಆಹಾರ ಸೇವನೆ ವೈಯಕ್ತಿಕ ವಿಷಯ. ನಂಬಿಕೆಗಳು ಅಷ್ಟೆ. ಆದರೆ, ಎಲ್ಲದರ ಕಲಸುಮೇಲೋಗರ ಮಾಡಿ, ಜನರನ್ನು ದಿಕ್ಕು ತಪ್ಪಿಸುವ ಹೇಸಿಗೆ ರಾಜಕಾರಣ ಮಾಡುವವರಿಗೆ ಅನಿವಾರ್ಯವಾಗಿ ಈ ಪ್ರಶ್ನೆ ಕೇಳಬೇಕಿದೆ ಎಂದು ಟ್ವೀಟ್ ಮಾಡಲಾಗಿದೆ. 

ಆಹಾರ ಸಂಸ್ಕ್ರತಿ, ದೈವ ನಂಬಿಕೆಗಳನ್ನು ರಾಜಕಾರಣಕ್ಕೆ ಬಳಸುವ, ಆ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆಯುವ ಕೊಳಕು ರಾಜಕಾರಣ ಬಿಜೆಪಿಯವರ ಕಾರ್ಯವೈಖರಿ. ತಾವೇ ತೋಡಿದ ಹಳ್ಳದಲ್ಲಿ ಇಂಥವರು ಬಿದ್ದಾಗ, ಅಯ್ಯೋ‌ ಪಾಪ ಎಂದೆನಿಸುತ್ತಷ್ಟೆ! ಎಂದು ಟಾಂಗ್ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT