ರಾಜಕೀಯ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲುವ ವಿಶ್ವಾಸವಿದೆ: ಧರ್ಮೇಂದ್ರ ಪ್ರಧಾನ್

Nagaraja AB

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಬಿಜೆಪಿಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.  

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಹಲವು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದು, ರಾಜ್ಯದ ಜನರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಇದ್ದಾರೆ. ಮೋದಿ ಅವರ ಉತ್ತಮ ಆಡಳಿತ, ಹಾಗೂ ಬಿಎಸ್ ಯಡಿಯೂರಪ್ಪ , ಸಿಎಂ ಬಸವರಾಜ ಬೊಮ್ಮಾಯಿ ಮಾಡಿರುವ ಜನಪರ ಕಾರ್ಯಗಳಿಂದಾಗಿ ಪಕ್ಷ ಬಹುಮತ ಪಡೆಯಲಿದೆ ಎಂಬ ವಿಶ್ವಾಸವಿದೆ ಎಂದರು. 

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಬೆಂಗಳೂರಿಗೆ ಆಗಮಿಸಿದ್ದು, ಚುನಾವಣೆಗೆ ಸಿದ್ಧತೆ ಕುರಿತು ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಗುರುವಾರ ಸಂಜೆ ಪ್ರಧಾನ್ ಅವರು ಮಾಜಿ ಯಡಿಯೂರಪ್ಪ ಅವರೊಂದಿಗೆ ಸಭೆ ನಡೆಸಿದರು.

ರಾಜ್ಯದ ಉಸ್ತುವಾರಿ  ಅರುಣ್ ಸಿಂಗ್ ಅವರಿಗೆ ಸಹಾಯ ಮಾಡಲು ಅವರು ರಾಜ್ಯದಲ್ಲಿರುವುದಾಗಿ ಪ್ರಧಾನ್ ಹೇಳಿದರು. ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಆಗಾಗ್ಗೆ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಮತ್ತು ಜನರ ಆಶೀರ್ವಾದ ಪಡೆಯಲು ಮೋದಿ ಕೂಡ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಅವರು ಹೇಳಿದರು. 

SCROLL FOR NEXT