ಸಿ.ಟಿ ರವಿ 
ರಾಜಕೀಯ

ಮಂಡ್ಯ ಜನ ವಂಶವಾಹಿ ರಾಜಕಾರಣ ವಿರೋಧಿಸಿ; ಸಾರ್ವಜನಿಕವಾಗಿ ಕಣ್ಣೀರು ಹಾಕುವ ನಾಯಕರ ನಂಬುವುದನ್ನು ಬಿಡಿ: ಸಿ.ಟಿ ರವಿ

ಡಿ.ಕೆ ಶಿವಕುಮಾರ್ ಅವರು ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ?, ಒಂದು ಸಮುದಾಯದ ಬೆಂಬಲದಿಂದ ಗೆಲ್ಲಲು ಸಾಧ್ಯವಿಲ್ಲಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.

ಮೈಸೂರು: ಕರ್ನಾಟಕದಲ್ಲಿ ಕೇಸರಿ ಪಕ್ಷದ ಪರವಾಗಿ ಪ್ರಬಲ ಅಲೆ ಇದೆ, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬಿಜೆಪಿ ಸೇರುತ್ತಿದ್ದು, ರಾಜ್ಯಾದ್ಯಂತ ಬಿಜೆಪಿ ಪರ ಧ್ರುವೀಕರಣ ಮುಂದುವರಿಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ರವಿ, ಮಂಡ್ಯ ಜಿಲ್ಲೆಯ ಜನರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಲ್ಲುತ್ತಾರೆ ಮತ್ತು ಜೆಡಿಎಸ್ ಭದ್ರಕೋಟೆ ಎಂದು ಪರಿಗಣಿಸಲಾದ ಜಿಲ್ಲೆಯಿಂದ ಅತಿ ಹೆಚ್ಚು ಬಿಜೆಪಿ ಶಾಸಕರನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಒಂದು ಸಮುದಾಯವನ್ನು ಅವಲಂಬಿಸಿ ಯಾರಾದರೂ ರಾಜಕೀಯ ಮಾಡಲು ಹೇಗೆ ಸಾಧ್ಯ? ಡಿ.ಕೆ ಶಿವಕುಮಾರ್ ಅವರು ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ?, ಒಂದು ಸಮುದಾಯದ ಬೆಂಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ಸಮುದಾಯಗಳ ಬೆಂಬಲ ಬೇಕು ಎಂದು ಸಿಟಿ ರವಿ ಹೇಳಿದ್ದಾರೆ.

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಸಿ.ಟಿ ರವಿ, ಮಂಡ್ಯದ ಜನತೆ ವಂಶಾಡಳಿತ ರಾಜಕಾರಣವನ್ನು ವಿರೋಧಿಸಬೇಕು. ಸಾರ್ವಜನಿಕ ಸಮಾರಂಭಗಳಲ್ಲಿ ಕಣ್ಣೀರು ಹಾಕುವ ನಾಯಕರನ್ನು ನಂಬುವುದನ್ನು ಬಿಡಬೇಕು ಎಂದು ಒತ್ತಾಯಿಸಿದರು.

ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮಾಂಸಾಹಾರಿ ಸೇವಿಸುವ ಸಮುದಾಯದಲ್ಲಿ ಜನಿಸಿದವನು, ಆದರೆ ಮಾಂಸಾಹಾರ ಸೇವಿಸಿದ ನಂತರ ಯಾವುದೇ ದೇವಸ್ಥಾನಕ್ಕೆ ಭೇಟಿ ನೀಡಿಲ್ಲ ನಾನು ಧಾರ್ಮಿಕ ವ್ಯಕ್ತಿ ಎಂದು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT