ಎಚ್ ಡಿ ರೇವಣ್ಣ 
ರಾಜಕೀಯ

ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆಗೆ ಬನ್ನಿ: ಜೆಪಿ ನಡ್ಡಾ, ಸಿಟಿ ರವಿಗೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಆಹ್ವಾನ

ರಾಜ್ಯ ಬಿಜೆಪಿ ನಾಯಕರು ಕೇಂದ್ರದಿಂದ ಹಿರಿಯ ನಾಯಕರನ್ನು ಕರೆತಂದು ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದು, ರಾಜ್ಯ ನಾಯಕರು ಜನರನ್ನು ಎದುರಿಸಲು ಹೆದರುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ.

ಹಾಸನ: ಇತ್ತೀಚೆಗೆ ಬೇಲೂರು ಮತ್ತು ಹಾಸನದಲ್ಲಿ ನಡೆದ ಸಾರ್ವಜನಿಕ ಪ್ರಚಾರದ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸುಳ್ಳು ಹೇಳಿಕೆ ನೀಡಿರುವುದನ್ನು ತರಾಟೆಗೆ ತೆಗೆದುಕೊಂಡ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಗುರುವಾರ ಹಾಸನ ಜಿಲ್ಲೆಗೆ ಅವರ ಕೊಡುಗೆ ಅತ್ಯಲ್ಪವಾಗಿದ್ದು, ಮತ ಕೇಳಲು ಬಿಜೆಪಿ ನಾಯಕರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸುಳ್ಳು ಹೇಳಿಕೆ ನೀಡುವಂತಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ರಾಜ್ಯ ನಾಯಕರು ಬರೆದ ಭಾಷಣವನ್ನು ಓದಿದರು ಎಂದು ವರದಿಯಾಗಿದೆ ಎಂದರು.

ರಾಜ್ಯ ಬಿಜೆಪಿ ನಾಯಕರು ಕೇಂದ್ರದಿಂದ ಹಿರಿಯ ನಾಯಕರನ್ನು ಕರೆತಂದು ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದು, ರಾಜ್ಯ ನಾಯಕರು ಜನರನ್ನು ಎದುರಿಸಲು ಹೆದರುತ್ತಿದ್ದಾರೆ. ದುರದೃಷ್ಟವಶಾತ್ ಬಿಜೆಪಿ ನಾಯಕರು ಸಾರ್ವಜನಿಕ ಪ್ರಚಾರದಲ್ಲಿ ಮಾತನಾಡುವಾಗ ಜೆಡಿಎಸ್ ನಾಯಕರ ಅಭಿವೃದ್ಧಿ ಕಾರ್ಯಗಳನ್ನು ತಮ್ಮದು ಎಂದು ಹೇಳಿಕೊಂಡಿದ್ದಾರೆ ಎಂದು ಆರೋಪಿಸಿದರು.

ಯಾವ ಸರ್ಕಾರ ಯೋಜನೆಗಳನ್ನು ಮಂಜೂರು ಮಾಡಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂಬುದು ಹಾಸನ ಜನತೆಗೆ ಗೊತ್ತಿದೆ. ನಡ್ಡಾ, ಸಿಟಿ ರವಿ, ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆಗೆ ಸಿದ್ಧ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶೇ 90 ಕ್ಕೂ ಹೆಚ್ಚು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT