ಎಚ್ ಡಿ ರೇವಣ್ಣ 
ರಾಜಕೀಯ

ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆಗೆ ಬನ್ನಿ: ಜೆಪಿ ನಡ್ಡಾ, ಸಿಟಿ ರವಿಗೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಆಹ್ವಾನ

ರಾಜ್ಯ ಬಿಜೆಪಿ ನಾಯಕರು ಕೇಂದ್ರದಿಂದ ಹಿರಿಯ ನಾಯಕರನ್ನು ಕರೆತಂದು ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದು, ರಾಜ್ಯ ನಾಯಕರು ಜನರನ್ನು ಎದುರಿಸಲು ಹೆದರುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ.

ಹಾಸನ: ಇತ್ತೀಚೆಗೆ ಬೇಲೂರು ಮತ್ತು ಹಾಸನದಲ್ಲಿ ನಡೆದ ಸಾರ್ವಜನಿಕ ಪ್ರಚಾರದ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸುಳ್ಳು ಹೇಳಿಕೆ ನೀಡಿರುವುದನ್ನು ತರಾಟೆಗೆ ತೆಗೆದುಕೊಂಡ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಗುರುವಾರ ಹಾಸನ ಜಿಲ್ಲೆಗೆ ಅವರ ಕೊಡುಗೆ ಅತ್ಯಲ್ಪವಾಗಿದ್ದು, ಮತ ಕೇಳಲು ಬಿಜೆಪಿ ನಾಯಕರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸುಳ್ಳು ಹೇಳಿಕೆ ನೀಡುವಂತಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ರಾಜ್ಯ ನಾಯಕರು ಬರೆದ ಭಾಷಣವನ್ನು ಓದಿದರು ಎಂದು ವರದಿಯಾಗಿದೆ ಎಂದರು.

ರಾಜ್ಯ ಬಿಜೆಪಿ ನಾಯಕರು ಕೇಂದ್ರದಿಂದ ಹಿರಿಯ ನಾಯಕರನ್ನು ಕರೆತಂದು ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದು, ರಾಜ್ಯ ನಾಯಕರು ಜನರನ್ನು ಎದುರಿಸಲು ಹೆದರುತ್ತಿದ್ದಾರೆ. ದುರದೃಷ್ಟವಶಾತ್ ಬಿಜೆಪಿ ನಾಯಕರು ಸಾರ್ವಜನಿಕ ಪ್ರಚಾರದಲ್ಲಿ ಮಾತನಾಡುವಾಗ ಜೆಡಿಎಸ್ ನಾಯಕರ ಅಭಿವೃದ್ಧಿ ಕಾರ್ಯಗಳನ್ನು ತಮ್ಮದು ಎಂದು ಹೇಳಿಕೊಂಡಿದ್ದಾರೆ ಎಂದು ಆರೋಪಿಸಿದರು.

ಯಾವ ಸರ್ಕಾರ ಯೋಜನೆಗಳನ್ನು ಮಂಜೂರು ಮಾಡಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ ಎಂಬುದು ಹಾಸನ ಜನತೆಗೆ ಗೊತ್ತಿದೆ. ನಡ್ಡಾ, ಸಿಟಿ ರವಿ, ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆಗೆ ಸಿದ್ಧ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶೇ 90 ಕ್ಕೂ ಹೆಚ್ಚು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT