ಪ್ರಹ್ಲಾದ್ ಜೋಶಿ 
ರಾಜಕೀಯ

ಹುಬ್ಬಳ್ಳಿ: ಕುಮಾರಸ್ವಾಮಿ ಮೊದಲು ಕುಟುಂಬ ನಿಭಾಯಿಸಲಿ, ಆಮೇಲೆ ರಾಜ್ಯ ಆಳಲು ಬರಲಿ- ಜೋಶಿ ವ್ಯಂಗ್ಯ

ಹಾಸನ ಜೆಡಿಎಸ್ ಟಿಕೆಟ್  ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿ: ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ ಎಂದರು. 

ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದರು.

ತೃತೀಯ ರಂಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಒಂಬತ್ತು ವರ್ಷಗಳಿಂದ ತೃತೀಯ ಶಕ್ತಿ ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟು ಮತ್ತು ಸ್ಪಷ್ಟ ಉದ್ದೇಶವಿಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಈ  ಸರ್ಕಸ್ಸಿನಲ್ಲಿ ಭಾಗಿಯಾಗಿರುವ ಎಲ್ಲಾ ವಿಪಕ್ಷಗಳ ನಾಯಕರಿಗೆ 'ನಾನು ಏನಾದರೂ ಮಾಡಿ ಪ್ರಧಾನ ಮಂತ್ರಿ ಆಗಬೇಕು' ಎಂದ ಸ್ವಾರ್ಥವಿದೆ. ಅದೇ ಉದ್ದೇಶಕ್ಕಾಗಿ ಇವರ ನಡುವೆ ಬಡಿದಾಟ ನಡೆದಿದೆ. ಅದಕ್ಕೆ ತೃತೀಯ ಶಕ್ತಿ ಆಗೊದಿಲ್ಲ. ಹಾಗಾಗಿಯೇ, ತೃತೀಯ ಅಂದರೆ ಥರ್ಡ್‌ಕ್ಲಾಸ್ ಫ್ರಂಟ್ ಆಗಲಿದೆ'' ಎಂದು ಜೋಶಿ ವ್ಯಂಗ್ಯವಾಡಿದರು‌.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT