ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬಸ್ 
ರಾಜಕೀಯ

ಮಾರ್ಚ್ 1 ರಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ: 150 ರೋಡ್ ಶೋ, 8,000 ಕಿ.ಮೀ ದೂರ ಕ್ರಮಿಸುವ ನಿರೀಕ್ಷೆ

224 ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕೋಟಿ ಜನರನ್ನು ತಲುಪುವ ಗುರಿಯೊಂದಿಗೆ ಬಿಜೆಪಿ ಮಾರ್ಚ್ 1 ರಿಂದ ರಾಜ್ಯಾದ್ಯಂತ ನಾಲ್ಕು ವಿವಿಧ ದಿಕ್ಕುಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಪ್ರಾರಂಭಿಸಲು ಸಜ್ಜಾಗಿದೆ. 

ಬೆಂಗಳೂರು: 224 ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕೋಟಿ ಜನರನ್ನು ತಲುಪುವ ಗುರಿಯೊಂದಿಗೆ ಬಿಜೆಪಿ ಮಾರ್ಚ್ 1 ರಿಂದ ರಾಜ್ಯಾದ್ಯಂತ ನಾಲ್ಕು ವಿವಿಧ ದಿಕ್ಕುಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಪ್ರಾರಂಭಿಸಲು ಸಜ್ಜಾಗಿದೆ. 

ಈ ಯಾತ್ರೆಯಲ್ಲಿ ರಾಜ್ಯ ಮತ್ತು ಕೇಂದ್ರದ ಹಿರಿಯ ನಾಯಕರ ನೇತೃತ್ವದಲ್ಲಿ ತಲಾ ನಾಲ್ಕು ತಂಡಗಳು 150 ಕ್ಕೂ ಹೆಚ್ಚು ರೋಡ್ ಶೋ 8,000 ಕಿ.ಮೀ. ದೂರ ಕ್ರಮಿಸುವ ನಿರೀಕ್ಷೆಯಿದೆ.  ಮಾರ್ಚ್ 20 ರಂದು ಯಾತ್ರೆ ಮುಕ್ತಾಯವಾಗಲಿದ್ದು, ಮಾರ್ಚ್ 25 ರಂದು ದಾವಣಗೆರೆಯಲ್ಲಿ ನಡೆಯಲಿರುವ ಮೆಗಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ  10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನೀರಾವರಿ ಸಚಿವ ಗೋವಿಂದ ಕಾರಜೋಳ ಮತ್ತು ಕಂದಾಯ ಸಚಿವ ಆರ್.ಅಶೋಕ ಚಾಮರಾಜನಗರ, ಬೆಳಗಾವಿ, ಬೀದರ್ ಮತ್ತು ಬೆಂಗಳೂರಿನಿಂದ ಪ್ರತಿ ತಂಡವನ್ನು ಮುನ್ನಡೆಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

30 ಅಡಿ ಎತ್ತರ ಮತ್ತು ಎಂಟು ಅಡಿ ಅಗಲದ ನಾಲ್ಕು ಬಸ್‌ಗಳನ್ನು ಯಾತ್ರೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಎಸಿ ಬಸ್‌ಗಳ ಮೇಲ್ಭಾಗದಲ್ಲಿ ನಾಯಕರು ನಿಂತು ಭಾಷಣ ಮಾಡುವ ಸ್ಥಳವೂ ಇರುತ್ತದೆ. ಮೊಬೈಲ್ ಚಾರ್ಜ್ ಮಾಡಲು ಸ್ಥಳ, ಹೋಮ್ ಥಿಯೇಟರ್, ಆಡಿಯೊ ಸಿಸ್ಟಮ್ಸ್, ಕ್ಯಾಮೆರಾಗಳು, ಎಲ್ಇಡಿ ಡಿಸ್ಪ್ಲೇ ಮತ್ತು ವೈಫೈ ಸೌಲಭ್ಯ ಮತ್ತು ಪವರ್ ಬ್ಯಾಕ್ ಆಪ್ ಆಗಿ ಜನರೇಟರ್ ಇರುತ್ತದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್,  ಯಾತ್ರೆ  20 ದಿನಗಳಲ್ಲಿ 31 ಜಿಲ್ಲೆಗಳಲ್ಲಿ ಸಂಚರಿಸಲಿದೆ.  150 ಸ್ಥಾನಗಳಲ್ಲಿ ಗೆಲುವು ನಮ್ಮ ಗುರಿಯಾಗಿದ್ದು, ಅದನ್ನು ಸಾಧಿಸುತ್ತೇವೆ ಎಂದು ಹೇಳಿದರು. ಯಾತ್ರೆ ವೇಳೆ ಪ್ರತಿ ತಂಡವು ತಮ್ಮ ಪ್ರದೇಶದ ಮಠಗಳು, ದೇವಾಲಯಗಳು ಮತ್ತು ಇತರ ಪ್ರಮುಖ ಸ್ಥಳಗಳಿಗೆ ಭೇಟಿ ನೀಡಲಿದೆ. ಈ ಸಂದರ್ಭದಲ್ಲಿ ಬೇರೆ ಪಕ್ಷಗಳ ನಾಯಕರು ಕೂಡ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT