ಖರ್ಗೆ, ವಿರೇಂದ್ರ ಪಾಟೀಲ್ ಮತ್ತು ಎಸ್ ನಿಜಲಿಂಗಪ್ಪ 
ರಾಜಕೀಯ

ರಾಜ್ಯದ ನಾಯಕರನ್ನು ಅವಮಾನಿಸುವುದು ಕಾಂಗ್ರೆಸ್ ಸಂಸ್ಕೃತಿ; ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಇದಕ್ಕೆ ಸಾಕ್ಷಿ; ಬಿರು  ಬಿಸಿಲಲ್ಲಿ ಖರ್ಗೆಗೆ ಕೊಡೆ ಹಿಡಿಯುವವರಿರಲಿಲ್ಲ!

ಕರ್ನಾಟಕ ನಾಯಕರನ್ನು ಅವಮಾನಿಸುವುದು ಕಾಂಗ್ರೆಸ್‌ನ ಹಳೆಯ ಸಂಸ್ಕೃತಿಯ ಭಾಗವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಬೆಳಗಾವಿ: ಕರ್ನಾಟಕ ನಾಯಕರನ್ನು ಅವಮಾನಿಸುವುದು ಕಾಂಗ್ರೆಸ್‌ನ ಹಳೆಯ ಸಂಸ್ಕೃತಿಯ ಭಾಗವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಬೆಳಗಾವಿ ನಗರದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ನ ಹಿರಿಯ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆ ರೀತಿ ನಡೆಸಿಕೊಳ್ಳಬಾರದಿತ್ತು..ನಿಮಗೆ ಈಗ ತಿಳಿಯಿತೇ, ಕಾಂಗ್ರೆಸ್ ಪಕ್ಷದ ರಿಮೋಟ್ ಯಾರ ಕೈಯಲ್ಲಿ ಇದೆ ಎಂದು ಲೇವಡಿ ಮಾಡಿದ್ದಾರೆ.

ನರೇಂದ್ರ ಮೋದಿ ಜೀವಂತ ಇರೋವರೆಗೂ ಕಾಂಗ್ರೆಸ್ ಮೇಲೆ ಏಳಲ್ಲ. ಎಸ್‌.ನಿಜಲಿಂಗಪ್ಪ, ವೀರೇಂದ್ರ ಪಾಟೀಲ್‌ರಿಗೆ ಅಪಮಾನ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಈಗ ಮತ್ತೊಬ್ಬ ನಾಯಕನಿಗೆ ಅವಮಾನ ಮಾಡಿದೆ. ಬಿಸಿಲಿನಲ್ಲಿ ಕುಳಿತರೂ ಛತ್ರಿಯ ಸೌಭಾಗ್ಯ ಮಲ್ಲಿಕಾರ್ಜುನ ಖರ್ಗೆಗೆ ಸಿಗಲಿಲ್ಲ ಎಂದರು.

ನಾನು ಮಲ್ಲಿಕಾರ್ಜುನ ಖರ್ಗೆ ಜೀ ಅವರಿಗೆ ತುಂಬಾ ಗೌರವ ನೀಡುತ್ತೇನೆ.ಕಾಂಗ್ರೆಸ್ ಅಧಿವೇಶನ ನಡೆಯುತ್ತಿತ್ತು. ಅವರೇ ಹಿರಿಯ ನಾಯಕ. ಅಲ್ಲಿ ಬಿಸಿಲಿತ್ತು, ಆದರೆ ಖರ್ಗೆ ಜೀ ಅವರಿಗೆ ಬಿಸಿಲಲ್ಲಿ ಕೊಡೆ ಭಾಗ್ಯ ಸಿಗಲಿಲ್ಲ… ಯಾರೋ ಬೇರೆಯವರಿಗೆ (ಸೋನಿಯಾ ಗಾಂಧಿ) ಕೊಡೆ ಹಿಡಿಯಲಾಗಿತ್ತು. ಇದನ್ನು ನೋಡಿದರೆ ರಿಮೋಟ್ ಕಂಟ್ರೋಲ್ ಯಾರ ಕೈಯಲ್ಲಿದೆ ಎಂಬುದು ಸಾರ್ವಜನಿಕರಿಗೆ ಅರ್ಥವಾಗುತ್ತಿದೆ.ಕಾಂಗ್ರೆಸ್ ಪಕ್ಷ ಎಸ್. ನಿಜಲಿಂಗಪ್ಪ ಮತ್ತು ವೀರೇಂದ್ರ ಪಾಟೀಲ್ ಅವರಿಗೆ ಅವಮಾನ ಮಾಡಿತ್ತು” ಎಂದು ಕಿಡಿಕಾರಿದರು.

ಮಲ್ಲಿಕಾರ್ಜುನ ಖರ್ಗೆ ಅವರು 50 ವರ್ಷಗಳ ಕಾಲ ರಾಜಕೀಯ ಮಾಡಿದ್ದಾರೆ. ನಾನು ಖರ್ಗೆ ಅವರನ್ನು ಗೌರವಿಸುತ್ತೇನೆ. ಕಾಂಗ್ರೆಸ್ ಅವಧಿಯಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಎಸ್‌.ನಿಜಲಿಂಗಪ್ಪ, ವೀರೇಂದ್ರ ಪಾಟೀಲ್‌ ಅವರಂತೆ ಈಗ ಕರ್ನಾಟಕದ ಮತ್ತೊಬ್ಬ ನಾಯಕನನ್ನು ಅವಮಾನಿಸಿದೆ. ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ಸಮಾವೇಶದಲ್ಲಿ ಖರ್ಗೆ ಅವರಿಗೆ ಅವಮಾನ ಮಾಡಿದೆ ಎಂದಿದ್ದಾರೆ.

ಕಾಂಗ್ರೆಸ್ ಕುಟುಂಬಕ್ಕೆ ಯಾರನ್ನು ಇಷ್ಟವಿಲ್ಲವೋ ಅಂಥವರಿಗೆ ವ್ಯವಸ್ಥಿತವಾಗಿ ಅವಮಾನ ಮಾಡುವ ಕಾರ್ಯ ನಡೆಸುತ್ತದೆ. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಅವರಂತಹ ನಾಯಕರನ್ನು ಕಾಂಗ್ರೆಸ್ ಕುಟುಂಬ ಹೇಗೆ ಅವಮಾನಿಸಲಾಯಿತು ಎಂಬುದಕ್ಕೆ ಇತಿಹಾಸವೇ ಸಾಕ್ಷಿ, ಕರ್ನಾಟಕದ ಪ್ರತಿಯೊಬ್ಬ ವ್ಯಕ್ತಿಗೂ ಗೊತ್ತು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT