ರಂದೀಪ್ ಸುರ್ಜೇವಾಲಾ 
ರಾಜಕೀಯ

'ಎಲ್ಲಾದರೂ ಇರು ಹೇಗಾದರೂ ಇರು ಚುನಾವಣೆ ಬಂದಾಗ ಮಾತ್ರ ಕರ್ನಾಟಕದಲ್ಲೇ ಇರು' ಎಂಬ ನೀತಿ ಪಾಲಿಸುತ್ತಿರುವ ಮೋದಿಯವರೇ ನನ್ನ 6 ಪ್ರಶ್ನೆಗಳಿಗೆ ಉತ್ತರಿಸಿ: ಸುರ್ಜೇವಾಲಾ

ಎಲ್ಲಾದರೂ ಇರು ಹೇಗಾದರೂ ಇರು ಚುನಾವಣೆ ಬಂದಾಗ ಮಾತ್ರ ಕರ್ನಾಟಕದಲ್ಲೇ ಇರು ಎಂಬ ನೀತಿ ಪಾಲಿಸುತ್ತಿರುವ ಪ್ರಧಾನಿ ಮೋದಿಯವರೇ ನನ್ನ 6 ಪ್ರಶ್ನೆಗಳಿಗೆ ಉತ್ತರಿಸಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಹೇಳಿದ್ದಾರೆ.

ಬೆಂಗಳೂರು: ಎಲ್ಲಾದರೂ ಇರು ಹೇಗಾದರೂ ಇರು ಚುನಾವಣೆ ಬಂದಾಗ ಮಾತ್ರ ಕರ್ನಾಟಕದಲ್ಲೇ ಇರು ಎಂಬ ನೀತಿ ಪಾಲಿಸುತ್ತಿರುವ ಪ್ರಧಾನಿ ಮೋದಿಯವರೇ ನನ್ನ 6 ಪ್ರಶ್ನೆಗಳಿಗೆ ಉತ್ತರಿಸಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಎಲ್ಲಾದರೂ ಇರು ಹೇಗಾದರೂ ಇರು ಚುನಾವಣೆ ಬಂದಾಗ ಮಾತ್ರ ಕರ್ನಾಟಕದಲ್ಲೇ ಇರು" ಎಂಬ ನೀತಿ ಪಾಲಿಸುತ್ತಿರುವ ಮೋದಿಯವರಿಗೆ ಅವರಿಗೆ 6 ಪ್ರಶ್ನೆಗಳನ್ನು ಮುಂದಿಡುತ್ತಿದ್ದೇನೆ. ಸಂಸತ್ತಿನಲ್ಲಿ ಮತ್ತು ಮಾದ್ಯಮಗಳೆದುರು ಉತ್ತರದಾಯಿತ್ವದಿಂದ ಜಾರಿಕೊಳ್ಳುವ ಜಾಣ್ಮೆ ತೋರಿಸುವ ಮೋದಿಯವರು ಈಗಲಾದರೂ ನಾವು ಮುಂದಿಡುತ್ತಿರುವ ಜನರ ಪ್ರಶ್ನೆಗೆ ಉತ್ತರಿಸಲಿ ಎಂದು ಹೇಳಿದ್ದಾರೆ.

ಸುರ್ಜೇವಾಲಾ ಅವರು ಕೇಳಿರುವ ಪ್ರಶ್ನೆಗಳು ಇಂತಿವೆ...

  • ಭಾರತೀಯ ಜನತಾ ಪಕ್ಷ ಕರ್ನಾಟಕದ ಉದ್ದಗಲಕ್ಕೂ "ಬಿಜೆಪಿಯೇ ಭರವಸೆ" ಅನ್ನೋ ಅಭಿಯಾನ ನಡೆಸುತ್ತಿದ್ದು, ಶೇ.40 ಸರ್ಕಾರ ತನ್ನ ಅಕ್ರಮ ಗಳಿಕೆಯ ಹಣದಲ್ಲಿ ಎಲ್ಲಾ ರಸ್ತೆಗಳ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸುವ ಮೂಲಕ ಚುನಾವಣೆಗೆ ಮುಂದಾಗಿದೆ. ಆದರೆ ಕಳೆದ ಬಾರಿ ನಿಮ್ಮ ನೇತೃತ್ವದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟ 600 ಭರವಸೆಗಳ ಪೈಕಿ ಶೇ.10 ಭರವಸೆಗಳನ್ನೂ ನಿಮ್ಮ ಪಕ್ಷದ ಸರಕಾರದಿಂದ ಪೂರೈಸಲಾಗಿಲ್ಲ ಯಾಕೆ? ಈ ಬಗ್ಗೆ ಸರ್ಕಾರದ ಹಣದಲ್ಲಿ ನೀವು ನಡೆಸುತ್ತಿರುವ ಪ್ರಚಾರ ಸಭೆಯಲ್ಲಿಯಾದರೂ ಜನರಿಗೆ ಉತ್ತರದಾಯಿ ಆಗಬಲ್ಲಿರಾ?
  • ನಿಮ್ಮ"ರೋಡ್ ಷೋ(ಕಿ)" ಗಾಗಿ ಇಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆಯನ್ನು ಬೆಳಗಾವಿಯಲ್ಲಿ ರದ್ದು ಮಾಡಲಾಗಿದೆ. ಈ ಬಗ್ಗೆ ನೀವು ಉತ್ತರಿಸುವಿರಾ? ಅಲ್ಲದೇ ಕರ್ನಾಟಕದ 13,000 ಅನುದಾನ ರಹಿತ ಶಾಲೆಗಳ ಒಕ್ಕೂಟವಾದ 'ರುಪ್ಸಾ', ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಶೇ.40 ಲಂಚ ನೀಡದೆ ಯಾವುದೇ ಸೇವೆ ಪಡೆಯಲು ಸಾಧ್ಯವಿಲ್ಲ ಎಂದು ತಮಗೆ ಪತ್ರ ಬರೆದು ಆರೋಪ ಮಾಡಿದ್ದರು. ಇದಕ್ಕೆ ತಾವು ಉತ್ತರವೇ ಕೊಟ್ಟಿಲ್ಲ ಯಾಕೆ? "ಪರೀಕ್ಷೆ ಪೇ ಚರ್ಚೆ" ನಡೆಸುವ ತಾವು "ಶಿಕ್ಷಣದ ಬಗ್ಗೆ ಚರ್ಚೆಗೆ" ಯಾವಾಗ ಬರ್ತೀರಾ?
  • ಇಡೀ ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಕರ್ನಾಟಕದಲ್ಲಿ ಸುಮಾರು ಎರಡುವರೆ ಲಕ್ಷ ಸರ್ಕಾರಿ ಉದ್ಯೋಗ ಮತ್ತು ಸುಮಾರು ಏಳುವರೆ ಲಕ್ಷ ಖಾಸಗಿ ಉದ್ಯೋಗಕ್ಕೆ ಅವಕಾಶವಿದ್ದು, ರಾಜ್ಯದ ಬಿಜೆಪಿ ಸರ್ಕಾರ ಯುವಜನರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ನೇಮಕಾತಿ ನಡೆಸುತ್ತಿರುವ ಹುದ್ದೆಗಳ ಹಂಚಿಕೆಯಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ.
  • ನಿಮ್ಮ ಬಿಜೆಪಿ ಶಾಸಕರು & ಮಂತ್ರಿಗಳು ಸರ್ಕಾರದ ಹುದ್ದೆಗಳನ್ನು ಕೋಟಿಗಟ್ಟಲೆ ಹಣಕ್ಕೆ ಮಾರಾಟಕ್ಕೆ ಇಟ್ಟುಬಿಟ್ಟಿದ್ದಾರೆ! ನಿಮ್ಮದೇ ಪಕ್ಷದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಶಾಸಕರೊಬ್ಬರು ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳ ಪುತ್ರ PSI ನೇಮಕಾತಿ ಹಗರಣದ ನೇರ ರೂವಾರಿ ಎಂದು ಆರೋಪಿಸಿದ್ದರು. ಅದರ ಬಗ್ಗೆನೂ ನಿಮ್ಮ ಭಾಷಣಕಾರರಿಗೆ ಹೇಳಿ ಒಂದು ಉತ್ತರ ಬರೆಸಿ, ಅದನ್ನು ಓದಿ ಹೇಳಿ ನೋಡೋಣ?
  • ಶಿವಮೊಗ್ಗದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಹಾಗೂ ಉಕ್ಕು ಕಾರ್ಖಾನೆ ಲಕ್ಷಾಂತರ ಜನರ ಪಾಲಿಗೆ ಉದ್ಯೋಗ ಒದಗಿಸಿದ್ದ ದೇಶದ ಮಹತ್ತರ ಕಾರ್ಖಾನೆಯಾಗಿತ್ತು. ಈ ಕಾರ್ಖಾನೆಗೆ UPA ಸರಕಾರ 2013ರಲ್ಲಿಯೇ ಬಳ್ಳಾರಿಯಲ್ಲಿ 380 ಎಕರೆ ಗಣಿ ಪ್ರದೇಶವನ್ನು ಒದಗಿಸಿತ್ತು. ಆದರೆ ನಿಮ್ಮ ಸರ್ಕಾರ ಆ ಗಣಿ ಪ್ರದೇಶದ ಉಪಯೋಗವನ್ನೇ ಮಾಡದೇ, ಈಗ ಈ ಕಾರ್ಖಾನೆಗೆ ಶಾಶ್ವತವಾಗಿ ಬೀಗ ಹಾಕಿದ್ದು ಯಾಕೆ ಅಂತ ಶಿವಮೊಗ್ಗದ ಜನರಿಗೆ ಉತ್ತರಿಸಿಲ್ಲ ಏಕೆ?
  • ಕಳೆದ ಚುನಾವಣೆಯ ವೇಳೆ ದೇಶದ ಗೃಹ ಮಂತ್ರಿ "ಅಮಿತ್ ಶಾ" ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶಿವಮೊಗ್ಗ ಜಿಲ್ಲೆಯಲ್ಲಿ 500 ಕೋಟಿ ವೆಚ್ಚದ ಅಡಿಕೆ ಸಂಶೋಧನಾ ಕೇಂದ್ರ ರಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೂ ಅದಕ್ಕೆ 5 ಪೈಸೆ ಸಹ ನೀಡಿಲ್ಲ ಏಕೆ? ಆತ್ಮನಿರ್ಭರ್ ಭಾರತದ ಹೆಸರಲ್ಲಿ ಪ್ರಚಾರ ಪಡೆಯುವ ತಾವು ನಮ್ಮ ದೇಶದಲ್ಲಿ ಬೆಳೆಸುವ ಉತ್ಕೃಷ್ಟ ದರ್ಜೆಯ ಅಡಿಕೆಗೆ ಪ್ರೋತ್ಸಾಹ ನೀಡದೇ, ಹೊರ ದೇಶದಿಂದ ಅಮದಾಗುವ ಅಡಿಕೆ ಮೇಲಿದ್ದ ಆಮದು ಸುಂಕವನ್ನು 110% ನಿಂದ ಕೇವಲ 10% ಇಳಿಸಿ ದೇಶೀ ಅಡಿಕೆಯ ಮಾರುಕಟ್ಟೆಯನ್ನು ಭಸ್ಮ ಮಾಡಿದ್ದು ಏಕೆ? ಇಡೀ ಮಲೆನಾಡು ಪ್ರದೇಶದಲ್ಲಿ ಎಲೆ ಚುಕ್ಕೆ ರೋಗದಿಂದ ಮುಂದಿನ ಮಳೆಗಾಲದ ಒಳಗೆ ಇಡೀ ಅಡಿಕೆ ಬೆಲೆ ಸರ್ವನಾಶಗುವ ಲಕ್ಷಣಗಳು ಸ್ಪಷ್ಟವಾಗಿ ಕಾಣುತ್ತಿದೆ. ಆದರೂ ಈ ಎಲೆ ಚುಕ್ಕೆ ರೋಗಕ್ಕೆ ನಿಮ್ಮ ಡಬಲ್ ಇಂಜಿನ್ ಸರ್ಕಾರ ಔಷದ ಕಂಡು ಹಿಡಿಯಲು ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ ಏಕೆ?
  • ಕರ್ನಾಟಕ - ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಪದೇ ಪದೇ ರಾಜ್ಯಗಳ ಮಧ್ಯೆ ಮಹಾರಾಷ್ಟ್ರದ ಬಿಜೆಪಿ ಮಂತ್ರಿಗಳು ಹಾಗೂ ಶಾಸಕರು ಕಂದಕ ಸೃಷ್ಟಿಸುತ್ತಿದ್ದಾರೆ. ಕರ್ನಾಟಕದ ಅಸ್ಮಿತೆಗೆ ಧಕ್ಕೆ ತಂದು ನಮ್ಮ ನಾಡಿನಲ್ಲಿ ಶಾಂತಿ ಭಂಗಪಡಿಸಲು ಯತ್ನಿಸುತ್ತಿರುವವವರಿಗೆ, "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ - ಇಲ್ಲಿ ಯಾರೂ ಅನಾವಶ್ಯಕವಾಗಿ ಹಾಗೂ ಉದ್ದೇಶಪೂರ್ವಕವಾಗಿ ಗಡಿ ವಿಚಾರದಲ್ಲಿ ರಾಜಕೀಯ ಮಾಡಬಾರದು" ಎಂದು ನೀವು ಇಂದು ಘೋಷಿಸಿ, ಮಹಾರಾಷ್ಟ್ರದ ಬಿಜೆಪಿ ಶಾಸಕರಿಗೆ ಪಾಠ ಹೇಳಬಲ್ಲಿರಾ?.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT