ಅಮಿತ್ ಶಾ, ಎಚ್ ಡಿಕೆ, ಡಿಕೆ ಶಿವಕುಮಾರ್ 
ರಾಜಕೀಯ

ಅಮುಲ್, ನಂದಿನಿ ವಿಲೀನ: ಶಾ ವಿರುದ್ಧ ಎಚ್ ಡಿಕೆ, ಡಿಕೆಶಿ ವಾಗ್ದಾಳಿ

ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರು: ನೆಲ, ಜಲ, ನುಡಿಯ ಬಗ್ಗೆ ಕನ್ನಡ ಮತ್ತು ಕರ್ನಾಟಕದ ಮೇಲೆ ಸದಾ ಪ್ರಹಾರ ನಡೆಸುತ್ತಿರುವ ಬಿಜೆಪಿ ಕನ್ನಡಿಗರ ವಿರುದ್ಧ ತನ್ನ ರಕ್ಕಸ ನೀತಿಗಳನ್ನು ಮುಂದುವರಿಸಿದೆ. ಈಗ ಕರ್ನಾಟಕದ ಹಾಲಿನಲ್ಲೂ ಗುಜರಾತಿನ ಹುಳಿ ಹಿಂಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

 ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಬ್ಯಾಂಕಿಂಗ್ ಕ್ಷೇತ್ರದಲ್ಲಿ ದೇಶಕ್ಕೇ ಮಾದರಿಯಾಗಿದ್ದ ಕರ್ನಾಟಕವನ್ನು ಉತ್ತರ ಭಾರತದ ಬ್ಯಾಂಕ್ ಗಳಿಗೆ ಅಡಿಯಾಳನ್ನಾಗಿಸಿ, ಹಿಂದಿ ಭಾಷಿಗರ ಉದ್ಧಾರಕ್ಕಾಗಿ ಕನ್ನಡಿಗರ ಅನ್ನ ಕಸಿದುಕೊಂಡ ಬಿಜೆಪಿ ಈಗ, ನಂದಿನಿಯನ್ನು ಹೊಡೆದುಕೊಂಡು ಹೋಗಲು ಹಿಡನ್ ಅಜೆಂಡಾ ರೂಪಿಸಿದಂತಿದೆ. ಕರ್ನಾಟಕ ಎಂದಿಗೂ ಗುಜರಾತಿನ ವಸಾಹತು ಆಗುವುದಿಲ್ಲ ಎಂದಿದ್ದಾರೆ. 

ಅಮುಲ್ ಜತೆ ನಂದಿನಿ ವಿಲೀನ ಸಾಧ್ಯವಿಲ್ಲ. ನಮ್ಮ ರೈತರ ಅನ್ನ ಕಸಿಯುವ ಕೆಲಸವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೆಎಂಎಫ್ ಕನ್ನಡಿಗರ ಜೀವನಾಡಿ ಮಾತ್ರವಲ್ಲ, ಸಮಸ್ತ ಕನ್ನಡಿಗರ ಆಸ್ತಿ ಮತ್ತು ಅಸ್ಮಿತೆ. ಅಮಿತ್ ಶಾ ಅವರು ಇದೆಲ್ಲವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ ಇದೇ ವಿಚಾರವಾಗಿ ಪ್ರತಿಕ್ರಿಯಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಂದಿನಿ ನಮ್ಮ ರಾಜ್ಯಕ್ಕೆ ಸೇರಿದ್ದು, ಹಾಲು ನೀರು, ನೆಲ ಇದು ನಮ್ಮ ಹಕ್ಕು. ಕೆಎಂಎಫ್ ಲಾಭದಾಯಕವಾಗಿ ನಡೆಯುತ್ತಿದೆ.ಇದನ್ನು ರಾಜ್ಯದ ಹಾಲು ಮಂಡಳಿ ಜೊತೆಗೆ ವಿಲೀನ ಮಾಡುವ ಅವಶ್ಯಕತೆ ಇಲ್ಲ ಎಂದರು. ರೈತರನ್ನು ಶಕ್ತಿಶಾಲಿಯನ್ನಾಗಿ ಮಾಡಬೇಕು. ಅದು ಬಿಟ್ಟು ವಿಲೀನದ ಬಗ್ಗೆ ಮಾತನಾಡುವುದು ಸರಿಯಲ್ಲ, ಇದಕ್ಕೆ ನಾವು ಅವಕಾಶ ಕೊಡಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT