ಸಾಂದರ್ಭಿಕ ಚಿತ್ರ 
ರಾಜಕೀಯ

ಧಾವಂತದಲ್ಲಿ ನಂದಿನಿ-ಅಮುಲ್‌ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳು ಹೇಳಿ, ಉಳಿದಿರುವ ಅಲ್ಪ ಸ್ವಲ್ಪ ಮರ್ಯಾದೆ ತೆಗೆದುಕೊಳ್ಳಬೇಡಿ!

ಧಾವಂತದಲ್ಲಿ ನಂದಿನಿ - ಅಮುಲ್‌ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳಾಡಿ, ಉಳಿದಿರುವ ನಿಮ್ಮ ಅಲ್ಪ ಸ್ವಲ್ಪ ಮರ್ಯಾದೆಯನ್ನೂ ತೆಗೆದುಕೊಳ್ಳಬೇಡಿ. ಸುಳ್ಳು ನಾಳೆಯೂ ಆಡಬಹುದು, ಮರ್ಯಾದೆ ಮತ್ತೆ ಬರುವುದಿಲ್ಲ.

ಬೆಂಗಳೂರು: ಧಾವಂತದಲ್ಲಿ ನಂದಿನಿ - ಅಮುಲ್‌ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳಾಡಿ, ಉಳಿದಿರುವ ನಿಮ್ಮ ಅಲ್ಪ ಸ್ವಲ್ಪ ಮರ್ಯಾದೆಯನ್ನೂ ತೆಗೆದುಕೊಳ್ಳಬೇಡಿ. ಸುಳ್ಳು ನಾಳೆಯೂ ಆಡಬಹುದು, ಮರ್ಯಾದೆ ಮತ್ತೆ ಬರುವುದಿಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ.

ಟೂಲ್‌ಕಿಟ್‌ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಬಿಜೆಪಿ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಲು ಧಾರಾಳವಾಗಿ ಪ್ರಯತ್ನಿಸಬಹುದು’ ಎಂದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದೆ.

‘ಈಗಾಗಲೇ ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯ 24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವನ್ನು ಭದ್ರಪಡಿಸಿಕೊಳ್ಳುತ್ತಿರುವ ಬಿಜೆಪಿಯನ್ನು ತಡೆಯಬೇಕಾದ್ದು ವಿರೋಧ ಪಕ್ಷಗಳು ಅಗತ್ಯವಾಗಿ ಮಾಡಬೇಕಾದ ಕೆಲಸವಾಗಿದೆ. ಆದರೆ, ಇದು ಅವರ ವಿಫಲಯತ್ನವಾಗುವುದಂತೂ ಕಟ್ಟಿಟ್ಟ ಬುತ್ತಿ’ ಎಂದು ಬಿಜೆಪಿ ಕಿಚಾಯಿಸಿದೆ.

‘ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರ ಟೂಲ್‌ಕಿಟ್‌ಗಳು ಸಹಜವಾಗಿ ಪ್ರಾದೇಶಿಕತೆ, ಭಾಷೆ, ಜಾತಿ, ಧರ್ಮಗಳನ್ನು ಅವಲಂಬಿಸಿದ್ದು, ಇಂಥದ್ದೇ ಯಾವುದಾದರೂ ಸುಳ್ಳು ಸುದ್ದಿಗಳನ್ನು ಹರಿಬಿಡುವುದನ್ನೇ ನಾವು ಎದುರು ನೋಡುತ್ತಿದ್ದೇವೆ. ಆದರೆ, ಅವೆಲ್ಲಕ್ಕೂ ನಮ್ಮ ಒಂದೇ ಉತ್ತರವಾಗಿ ನಾವು ಮಾತಾಡಲ್ಲ, ರಾಜ್ಯದ ಅಭಿವೃದ್ಧಿ ಮಾತಾಡುತ್ತದೆ’ ಎಂದು ಬಿಜೆಪಿ ಗುಡುಗಿದೆ.

‘ಸ್ಮಾರ್ಟ್‌ ಸಿಟಿ ಯೋಜನೆಯಡಿ ದಾವಣಗೆರೆ, ತುಮಕೂರಿನಲ್ಲಿ ಆಗಿರುವ ಅಭಿವೃದ್ಧಿಯನ್ನು ಕಾಂಗ್ರೆಸ್‌ ಕನಸ್ಸಲ್ಲೂ ಕಾಣುವುದಕ್ಕಾಗುವುದಿಲ್ಲ. ಹಾಗೇ ಚಿತ್ರದುರ್ಗದಲ್ಲಿ 1,96,093 ಮನೆಗಳಿಗೆ ಕುಡಿಯುವ ನೀರು ಪೂರೈಕೆ ಎಂಬುದೆಲ್ಲ ಏನೆಂದೂ ಜಾತಿಹುಳು ಜೆಡಿಎಸ್‌ನ ಜಡಮಂಡೆಗೆ ಅರ್ಥವೂ ಆಗುವುದಿಲ್ಲ’ ಎಂದು ಬಿಜೆಪಿ ಟೀಕಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT