ಎಸ್.ಎಂ ಕೃಷ್ಣ 
ರಾಜಕೀಯ

'ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ'

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಕಾಂಗ್ರೆಸ್‌ನಲ್ಲಿ ಅಗ್ರಗಣ್ಯ ನಾಯಕರಾಗಿದ್ದ ಹಿರಿಯ ನಾಯಕ ಕೃಷ್ಣ ಅವರ ಬಳಿ ಆಡಳಿತಾತ್ಮಕ ಸಲಹೆ ಕೇಳುವ ಮನಸ್ಸು ಬಿಜೆಪಿಗರಿಗೆ ಇಲ್ಲ. ಅವರ ಸಲಹೆ ಬಿಜೆಪಿಗೆ ಬೇಕಾಗಿಯೂ ಇಲ್ಲ. ಬಿಜೆಪಿಯ ಸಿದ್ಧಾಂತಗಳು ಕೃಷ್ಣರಿಗೆ ಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ? ಎಂದು ಕಾಂಗ್ರೆಸ್‌ ಮಾರ್ಮಿಕವಾಗಿ ಟ್ವೀಟ್ ಮಾಡಿದೆ.

ರಾಜಕೀಯದಿಂದ ನಿವೃತ್ತಯಾಗುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಎಸ್‌.ಎಂ.ಕೃಷ್ಣ ಅವರು ಬುಧವಾರ ಹೇಳಿದ್ದರು. ಹೊಸ ವರ್ಷದ ಸಂದೇಶ ನೀಡುವ ಸಂದರ್ಭದಲ್ಲಿ ರಾಜಕೀಯ ನಿವೃತ್ತಿಯ ವಿಷಯವನ್ನು ಅವರು ಪ್ರಸ್ತಾಪಿಸಿದ್ದಾರೆ. ‘ನನಗೀಗ 90 ವರ್ಷ ವಯಸ್ಸು ಆಗಿದ್ದು, ಇದರ ಅರಿವು ನನಗಿದೆ. 90 ವರ್ಷದ ನಾನು 50 ವರ್ಷದವನಂತೆ ನಟಿಸಲು ಸಾಧ್ಯವಿಲ್ಲ. ಆದ್ದರಿಂದ ಕ್ರಮೇಣ ಸಾರ್ವಜನಿಕ ಜೀವನದಿಂದ ಹಿಂದಕ್ಕೆ ಸರಿಯುತ್ತಿದ್ದೇನೆ’ ಎಂದು ಅವರು ತಿಳಿಸಿದ್ದರು.

ಬಿಜೆಪಿ ಹೈಕಮಾಂಡ್ ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲೇ ಅತಿ ಹೆಚ್ಚು ಸೀಟುಗಳನ್ನ ಗೆಲ್ಲಲು ಮುಂದಾಗಿದೆ. ಈ ಸಂದರ್ಭದಲ್ಲಿ ಎಸ್‌.ಎಂ.ಕೃಷ್ಣ ಅವರ ಈ ನಡೆ ನಿಜಕ್ಕೂ ಅಚ್ಚರಿ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ

ಊಹಾಪೋಹಕ್ಕೆ ಕೊನೆಗೂ ತೆರೆ: 'ಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆ': ಆರ್‌ ವಿ ದೇಶಪಾಂಡೆ ಹೇಳಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

SCROLL FOR NEXT