ಬಿಜೆಪಿ ಟ್ವೀಟ್ 
ರಾಜಕೀಯ

ಪುಸ್ತಕದೊಳಗಿನ ಸತ್ಯದ ಈಟಿಗೆ ಹೆದರಿ ಓಡುತ್ತಿರುವಿರಾ, ಏನೋ ಹೇಳಬೇಕು ಎಂದು ಹೊರಟಿದ್ದಾರೆ, ಏಕೆ ಕಾಂಗ್ರೆಸ್ ಇಷ್ಟು ಗಲಿಬಿಲಿಗೊಂಡಿದೆ?

ತಮ್ಮ ಕನಸುಗಳ ಪುಸ್ತಕ ಹೊತ್ತು ತರುತ್ತಿರುವವರ ಬಗ್ಗೆ ಸಿದ್ದರಾಮಯ್ಯ ಸಂತೋಷಪಡಬೇಕು, ‘ಸಿದ್ದು ನಿಜ ಕನಸು’ ಪುಸ್ತಕದ ವಿರುದ್ಧ ಕಾಂಗ್ರೆಸ್‌ ವಲಯದಲ್ಲಿ ವ್ಯಕ್ತವಾಗಿರುವ ಆಕ್ರೋಶದ ಬಗ್ಗೆ ಬಿಜೆಪಿ ಗೇಲಿ ಮಾಡಿದೆ.

ಬೆಂಗಳೂರು: ತಮ್ಮ ಕನಸುಗಳ ಪುಸ್ತಕ ಹೊತ್ತು ತರುತ್ತಿರುವವರ ಬಗ್ಗೆ ಸಿದ್ದರಾಮಯ್ಯ ಸಂತೋಷಪಡಬೇಕು, ‘ಸಿದ್ದು ನಿಜ ಕನಸು’ ಪುಸ್ತಕದ ವಿರುದ್ಧ ಕಾಂಗ್ರೆಸ್‌ ವಲಯದಲ್ಲಿ ವ್ಯಕ್ತವಾಗಿರುವ ಆಕ್ರೋಶದ ಬಗ್ಗೆ ಬಿಜೆಪಿ ಗೇಲಿ ಮಾಡಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಸರಣಿ ಟ್ವೀಟ್‌ ಮಾಡಿದ್ದು, ಸಿದ್ದರಾಮಯ್ಯ ಅವರನ್ನು ಟೀಕಿಸಿದೆ. ‘ದೇಶದಲ್ಲಿ ಅಸಹಿಷ್ಣುತೆ ಎಲ್ಲೆ ಮೀರಿದೆ ಎಂದು ಎಂಟು ವರ್ಷಗಳ ಹಿಂದೆ ಬೊಬ್ಬಿರಿಯುತ್ತಿದ್ದ ಗುಂಪು ಇಂದು ಸ್ವತಃ ಎಲ್ಲದರ ಬಗೆಗೂ ಅಸಹಿಷ್ಣುವಾಗಿದೆ. ಸಿದ್ದರಾಮಯ್ಯ ಕನಸಿನ ಬಗ್ಗೆ ಸ್ಪಷ್ಟ ಚಿತ್ರಣ ಇರುವ ಯಾರೋ ಏನೋ ಹೇಳಬೇಕು ಎಂದು ಹೊರಟಿದ್ದಾರೆ. ಅದಕ್ಕೆ ಕಾಂಗ್ರೆಸ್‌ ಏಕೆ ಇಷ್ಟು ಗಲಿಬಿಲಿಗೊಂಡಿದೆ? ಎಂದು ಪ್ರಶ್ನೆ ಮಾಡಿದೆ.

ಸಂವಿಧಾನದ ಏಕೈಕ ರಕ್ಷಕನಂತೆ ಸದಾಕಾಲ ಪೋಸು ಕೊಡುವ ಸಿದ್ದರಾಮಯ್ಯ ಅವರಿಗೆ ತಮ್ಮ ನಿಜಬಣ್ಣ ಬಯಲಾಗುವ ಕಡೆ ಸಂವಿಧಾನವೂ ಬೇಡ, ಹಕ್ಕುಗಳೂ ಲೆಕ್ಕಕ್ಕಿಲ್ಲ. ನೀವು ಯಾರನ್ನು ಬೇಕಾದರೂ ಏಕವಚನದಲ್ಲಿ ಕರೆಯಬಹುದು ಆದರೆ ನಿಮ್ಮನ್ನು ಎಲ್ಲರೂ ಗೌರವಿಸಬೇಕು ಎಂಬ ಧಿಮಾಕಿನಲ್ಲಿ ಇರುವ ತಮಗೆ ಇಂಥ ಸಂದರ್ಭಗಳಲ್ಲಿ ಕಸಿವಿಸಿ ಸಹಜ.

ಈ ಹಿಂದೆ ಆಡಳಿತ ನಡೆಸಿದ್ದ ನಿಮ್ಮ ಆದರ್ಶ ಪುರುಷ ಟಿಪ್ಪು ಕೂಡ ತನ್ನ ಬಗ್ಗೆ ಸ್ವತಂತ್ರವಾಗಿ ಅಭಿಪ್ರಾಯ ವ್ಯಕ್ತಪಡಿಸುವವರನ್ನು ಬಂಧಿಸುತ್ತಿದ್ದ. ಕಾನೂನು, ಖಡ್ಗವನ್ನು ತನಗೆ ಬೇಕಾದಾಗ ಮಾತ್ರ ಹೊರತೆಗೆಯುತ್ತೇನೆ ಎಂದರೆ ಆಗುವುದಿಲ್ಲ. ಕಾಂಗ್ರೆಸ್‌ ಇದನ್ನು ಮನಗಾಣಬೇಕು’ ಎಂದು ಬಿಜೆಪಿ ಸಲಹೆ ನೀಡಿದೆ.

‘ತಮ್ಮ ಕನಸುಗಳ ಪುಸ್ತಕ ಹೊತ್ತು ತರುತ್ತಿರುವವರ ಬಗ್ಗೆ ಸಿದ್ದರಾಮಯ್ಯ ಸಂತೋಷಪಡಬೇಕು. ಇಂಥದ್ದನ್ನು ವಿರೋಧಿಸುವ ನೆಲೆಯಲ್ಲಾದರೂ ನಾಲ್ಕು ಕಾಂಗ್ರೆಸ್ಸಿಗರು ಒಟ್ಟಾಗುತ್ತಾರೆ. ಇಲ್ಲದಿದ್ದರೆ ಪರಸ್ಪರರ ವಿರುದ್ಧ ಕತ್ತಿ ಮಸೆಯುವುದೇ ಕಾಂಗ್ರೆಸ್‌ ನಾಯಕರ ಪಾಲಿನ ನಿತ್ಯ ಕಾಯಕ’ ಎಂದು ಅದು ಹೇಳಿದೆ.

‘ಸೋನಿಯಾ ಗಾಂಧಿ ಅವರ ಕುರಿತ "ದ ರೆಡ್‌ ಸಾರಿ" ಎಂಬ ಪುಸ್ತಕವನ್ನು ಹತ್ತಿಕ್ಕಲು ಕಾಂಗ್ರೆಸ್‌ ಪಕ್ಷ ಸ್ಪೇನ್‌ವರೆಗೆ ಹೋಗಿತ್ತು. ಸತ್ಯವನ್ನು ಜನತೆಯಿಂದ ಮುಚ್ಚಿಡಲು ಕಾಂಗ್ರೆಸ್ ಯಾವ ಹಂತಕ್ಕೂ ಹೋಗುತ್ತದೆ ಎಂಬುದು ಈಗ ಟಿಪ್ಪುವಿನಂತೆ ಆಡುತ್ತಿರುವ ಸಿದ್ದರಾಮಯ್ಯ ವಿಚಾರದಲ್ಲಿ ಸ್ಪಷ್ಟವಾಗಿದೆ.

ಆದರೆ ವಾಕ್‌ ಸ್ವಾತಂತ್ರ್ಯ ಹತ್ತಿಕ್ಕುವ ಎಲ್ಲಾ ಪ್ರಯತ್ನಗಳೂ ನಮ್ಮ ದೇಶದಲ್ಲಿ ತಾತ್ಕಾಲಿಕ ಎಂಬುದು ಪದೇಪದೇ ಸಾಬೀತಾಗಿದೆ. ಹಾಗೊಂದು ವೇಳೆ ನಿರಂತರ ಹಕ್ಕುಗಳ ದಮನ ಆಗಿದ್ದರೆ ಅದು ಕಾಂಗ್ರೆಸ್‌ ಆಡಳಿತದಲ್ಲಿ ಮಾತ್ರ. ಇದು ಪ್ರಜಾಪ್ರಭುತ್ವದ ನಿಜ ತತ್ತ್ವಗಳಿಗೆ ಬೆಲೆ ಇರುವ ಕಾಲ, ಸತ್ಯ ಹೊರಬರಲೇ ಬೇಕು. ತಯಾರಾಗಿರಿ’ ಎಂದು ಸಿದ್ದರಾಮಯ್ಯ ಅವರನ್ನು ಬಿಜೆಪಿ ಎಚ್ಚರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT