ಬಿಎಸ್.ಯಡಿಯೂರಪ್ಪ 
ರಾಜಕೀಯ

ಕೆ.ಎಸ್ ಈಶ್ವರಪ್ಪ ಸಚಿವ ಸ್ಥಾನದ ಬಗ್ಗೆ ಹೈ ಕಮಾಂಡ್ ನಿರ್ಧರಿಸುತ್ತದೆ: ಬಿ.ಎಸ್.ಯಡಿಯೂರಪ್ಪ

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಸಚಿವರಾಗಬೇಕು ಎಂಬುದು ನನ್ನ ಆಸೆ, ಆದರೆ, ಈ ಕುರಿತ ನಿರ್ಧಾರ ಪಕ್ಷದ ಹೈಕಮಾಂಡ್ ಬಿಟ್ಟದ್ದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಸಚಿವರಾಗಬೇಕು ಎಂಬುದು ನನ್ನ ಆಸೆ, ಆದರೆ, ಈ ಕುರಿತ ನಿರ್ಧಾರ ಪಕ್ಷದ ಹೈಕಮಾಂಡ್ ಬಿಟ್ಟದ್ದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಮಾತನಾಡಿದ ಯಡಿಯೂರಪ್ಪ ಅವರು, ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಕೇಂದ್ರ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ. ಆದರೆ ನಾನು ಈಶ್ವರಪ್ಪ ಅವರನ್ನು ರಾಜ್ಯ ಸಚಿವ ಸಂಪುಟದಲ್ಲಿ ನೋಡಬೇಕು ಎಂದು ಹೇಳಿದರು.

ಬಳಿಕ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಸಾಂವಿಧಾನಿಕ ಸ್ಥಾನಮಾನ ನೀಡುವಂತೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಗಡುವು ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದನ್ನು ಸ್ವಾಗತಿಸುವ ಬದಲು ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಹಿರಿಯ ನಾಯಕರಾದ ಖರ್ಗೆಯವರು ಈ ರೀತಿಯ ಹೇಳಿಕೆ ನೀಡುವುದು ಸಲ್ಲದು. ರಾಜ್ಯದಲ್ಲಿ ಹಲವು ವರ್ಷ ಆಡಳಿತ ನಡೆಸಿದರೂ ಈ ರೀತಿ ಮಾಡಿಲ್ಲ. ನಾವೇ ಮಾಡಿದ್ದೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದರು.

ಎಸ್‌ಸಿ/ಎಸ್‌ಟಿಗಳಿಗೆ ಮೀಸಲಾತಿ ಕೋಟಾವನ್ನು ಹೆಚ್ಚಿಸುವ ಬಿಜೆಪಿ ಸರ್ಕಾರದ ನಿರ್ಧಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸತ್ಯವನ್ನು ತಿರುಚುತ್ತಿದ್ದಾರೆ   ಕಾಂಗ್ರೆಸ್ ಯಾತ್ರೆಗಳಿಗೆ ಬೆಲೆ ಇಲ್ಲ. ಬಿಜೆಪಿ ಮಾಡುವ ಎಲ್ಲವನ್ನೂ ಟೀಕಿಸುವುದಷ್ಟೇ ಕಾಂಗ್ರೆಸ್‌ನ ಕೆಲಸ. ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಖರ್ಗೆ ಅವರು ಎಸ್‌ಸಿ/ಎಸ್‌ಟಿಗಳಿಗೆ ಮೀಸಲಾತಿ ಹೆಚ್ಚಿಸುವ ಸರ್ಕಾರದ ನಿರ್ಧಾರದ ಬಗ್ಗೆ ಸತ್ಯವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ. ಖರ್ಗೆಯವರಿಂದ ಇಂತಹ ಹೇಳಿಕೆಗಳನ್ನು ನಾನು ನಿರೀಕ್ಷಿಸಿರಲಿಲ್ಲ. ಅವರು ಸತ್ಯಗಳನ್ನು ಅರಿಯುವಂತೆ ಸಲಹೆ ನೀಡುತ್ತಿದ್ದೇನೆ. ನೀವು (ಕಾಂಗ್ರೆಸ್) ಮೀಸಲಾತಿ ಹೆಚ್ಚಿಸಿಲ್ಲ. ನಾವು ಅದನ್ನು ಮಾಡಿದಾಗ, ನೀವು ಅದನ್ನು ಸ್ವಾಗತಿಸಬೇಕಿತ್ತು. ಬದಲಿಗೆ, ಟೀಕೆಗೆ ಮಾಡುವುದು ಖರ್ಗೆ ಅವರ ಸ್ಥಾನಮಾನಕ್ಕೆ ಹೊಂದಿಕೆಯಾಗುವುದಿಲ್ಲ ಎಂದರು.

ಸ್ಯಾಂಟ್ರೋ ರವಿ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ವಿವರಗಳನ್ನು ಸಂಗ್ರಹಿಸಿದ್ದು, ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಾರನ್ನೂ ಬಿಡುವುದಿಲ್ಲ ಮತ್ತು ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಸುತ್ತಾಡುತ್ತಿರುವ ಕೆಲವು ಸಚಿವರ ಹೆಸರ ಕುರಿತ ಪ್ರಶ್ನೆಗೆ ಉತ್ತರಿಸಿ, ತನಿಖೆಯಿಂದ ಸತ್ಯಾಂಶ ಹೊರಬರಲಿದೆ. "ಆದರೆ, ಸರ್ಕಾರ ಖಂಡಿತವಾಗಿಯೂ ಸ್ಯಾಂಟ್ರೋ ರವಿ ವಿರುದ್ಧ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT