ಶಿವಲಿಂಗೇಗೌಡ ಮತ್ತು ಪ್ರಜ್ವಲ್ ರೇವಣ್ಣ 
ರಾಜಕೀಯ

ಜೆಡಿಎಸ್‌ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತ: ಅರಸೀಕೆರೆ 'ಅರಸ' ಆಗ್ತಾರಾ ಪ್ರಜ್ವಲ್ ರೇವಣ್ಣ?

ಅರಸೀಕೆರೆ  ಜೆಡಿಎಸ್‌ ಶಾಸಕ ಶಿವಲಿಂಗೇಗೌಡ  ಕಾಂಗ್ರೆಸ್  ಸೇರ್ಪಡೆ ಬಹುತೇಕ ಖಚಿತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದ್ದಾರೆ.

ಚಾಮರಾಜನಗರ: ಅರಸೀಕೆರೆ  ಜೆಡಿಎಸ್‌ ಶಾಸಕ ಶಿವಲಿಂಗೇಗೌಡ  ಕಾಂಗ್ರೆಸ್  ಸೇರ್ಪಡೆ ಬಹುತೇಕ ಖಚಿತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಶೀಘ್ರದಲ್ಲೇ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಾರೆ. ಈಗಾಗಲೇ ಅವರೊಂದಿಗೆ ಮಾತುಕತೆ ನಡೆದಿದೆ. ಅವರು ಸಹ ಜೆಡಿಎಸ್ ತೊರೆಯಲು ಸಿದ್ಧರಿದ್ದಾರೆ ಅಂತ ಧ್ರುವನಾರಾಯಣ್ ಹೇಳಿದ್ದಾರೆ.

ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎಂಬುದನ್ನು ಕಳೆದ ಭಾರಿಯೇ ಜನರು ಅರ್ಥ ಮಾಡಿಕೊಂಡಿದ್ದರು.  ಈ ಭಾರಿಯೂ ಅರ್ಥ ಮಾಡಿಕೊಂಡಿದ್ದಾರೆ. ಇದು ರಾಜ್ಯದ ಜನರಿಗೂ ಗೊತ್ತಿದೆ. ಸ್ಥಳೀಯವಾಗಿ ವಿರೋಧ ಹೇಳಿಕೆ ಮಾತ್ರ ಕೊಟ್ಟಿರಬಹುದು ಎಂದು ಆರೋಪಿಸಿದರು.

ಮಾಜಿ ಸಚಿವ ಎ.ಮಂಜು ಕೆಪಿಸಿಸಿಗೆ ಅರ್ಜಿ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು‌ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆದಿದೆ. ಶಾಸಕ‌ ಕೆ.ಎಂ.ಶಿವಲಿಂಗೇಗೌಡರು ಕಾಂಗ್ರೆಸ್ ಪಕ್ಷಕ್ಕೆ ಬರುವ ನಿರೀಕ್ಷೆಯಿದೆ. ಅರಕಲಗೂಡು ಶಾಸಕರ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಹೇಳಿದ್ದಾರೆ.

ಶಿವಲಿಂಗೇಗೌಡರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳಲು ಅಂತಿಮ ಹಂತದ ಕಸರತ್ತು ನಡೆಸುತ್ತಿರುವ ಶಾಸಕ ಎಚ್‌.ಡಿ. ರೇವಣ್ಣ, ಕ್ಷೇತ್ರದ ಕಾರ್ಯಕರ್ತರಿಂದಲೇ ಶಿವಲಿಂಗೇಗೌಡರಿಗೆ ಮನವಿ ಮಾಡಿಸಿದ್ದಾರೆ. ಅದಾಗ್ಯೂ ಶಿವಲಿಂಗೇಗೌಡರು ಪಕ್ಷ ತ್ಯಜಿಸುವ ನಿರ್ಧಾರ ಪ್ರಕಟಿಸಿದರೆ, ತಕ್ಕ ಪಾಠ ಕಲಿಸುವ ಯೋಜನೆಯನ್ನೂ ರೂಪಿಸಿದ್ದಾರೆ.

ಶಿವಲಿಂಗೇಗೌಡರು ಕಾಂಗ್ರೆಸ್‌ ಸೇರ್ಪಡೆಯಾದರೆ, ಸಂಸದ ಪ್ರಜ್ವಲ್‌ ರೇವಣ್ಣ ಅರಸೀಕೆರೆಯ ಜೆಡಿಎಸ್‌ ಅಭ್ಯರ್ಥಿಯಾಗುವುದು ನಿಶ್ಚಿತ ಎನ್ನಲಾಗುತ್ತಿದೆ. ಈಗಾಗಲೇ ಅರಸೀಕೆರೆಯ ಕ್ಷೇತ್ರದ ಮುಖಂಡರು, ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಪ್ರಜ್ವಲ್‌ ರೇವಣ್ಣ ಅವರನ್ನೇ ಕಣಕ್ಕೆ ಇಳಿಸುವಂತೆ ಜೆಡಿಎಸ್ ಕಾರ್ಯಕರ್ತರು ಸಲಹೆಯನ್ನೂ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT