ವೈಎಸ್ ವಿ ದತ್ತಾ, ಶಾಸಕ ಹೆಚ್ ನಾಗೇಶ್ ಕಾಂಗ್ರೆಸ್ ಸೇರ್ಪಡೆ 
ರಾಜಕೀಯ

ಜೆಡಿಎಸ್ ಮಾಜಿ ಶಾಸಕ ವೈಎಸ್ ವಿ ದತ್ತಾ, ಪಕ್ಷೇತರ ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಮಾನಸ ಪುತ್ರ ಎಂದೇ ಹೆಸರಾಗಿದ್ದ ಕಡೂರಿನ ಮಾಜಿ ಶಾಸಕ ವೈ ಎಸ್​ವಿ ದತ್ತಾ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದತ್ತಾ ಅವರು  ಜೆಡಿಎಸ್ ಜೊತೆಗಿನ ಧೀರ್ಘಕಾಲದ ಸಂಬಂಧ ತೊರೆದು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.  

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಮಾನಸ ಪುತ್ರ ಎಂದೇ ಹೆಸರಾಗಿದ್ದ ಕಡೂರಿನ ಮಾಜಿ ಶಾಸಕ ವೈ ಎಸ್​ವಿ ದತ್ತಾ ಕೊನೆಗೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದತ್ತಾ ಅವರು  ಜೆಡಿಎಸ್ ಜೊತೆಗಿನ ಧೀರ್ಘಕಾಲದ ಸಂಬಂಧ ತೊರೆದು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.  

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಪಕ್ಷದ ಬಾವುಟ ನೀಡುವ ಮೂಲಕ ದತ್ತಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ  ಮುಳಬಾಗಿಲು ಪಕ್ಷೇತರ ಶಾಸಕ ಹೆಚ್.ನಾಗೇಶ್ ಕೂಡಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ನಂತರ ಮಾತನಾಡಿದ ಡಿಕೆ ಶಿವಕುಮಾರ್,  ಮಕರ ಸಂಕ್ರಮಣದ ಪವಿತ್ರ ದಿನದಂದು ಇಬ್ಬರು ನಾಯಕರಾದ ವೈಎಸ್‌ವಿ ದತ್ತಾ, ಮಾಜಿ ಸಚಿವರು ಹಾಲಿ ಶಾಸಕರು ಆದ ಎಚ್. ನಾಗೇಶ್ ಅವರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಇದು ಆರಂಭ ಅಷ್ಟೇ ಇನ್ನು ಮುಂದೆ ವಾರಕ್ಕೊಮ್ಮೆ ಪಕ್ಷ ಸೇರ್ಪಡೆ ಕಾರ್ಯಕ್ರಮ ಇರಲಿದೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನ ತತ್ವ, ಸಿದ್ಧಾಂತಗಳನ್ನು ಒಪ್ಪಿ ವೈಎಸ್‌ವಿ ದತ್ತಾ ಹಾಗೂ ಹೆಚ್ ನಾಗೇಶ್ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರನ್ನು ಅಭಿನಂದಿಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT