ಪ್ರಿಯಾಂಕಾ ಗಾಂಧಿ 
ರಾಜಕೀಯ

'ನಾ ನಾಯಕಿ' ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ: ಕಾಂಗ್ರೆಸ್ ಕಾರ್ಯಕ್ರಮಕ್ಕೆ ಸಿಎಂ ವ್ಯಂಗ್ಯ

ಕಾಂಗ್ರೆಸ್ ಹಮ್ಮಿಕೊಂಡಿರುವ  ‘ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದ್ದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿ: ಕಾಂಗ್ರೆಸ್ ಹಮ್ಮಿಕೊಂಡಿರುವ  ‘ನಾ ನಾಯಕಿ’ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾ ನಾಯಕಿ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದ್ದು ವಿಪರ್ಯಾಸ ಎಂದು ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಗಾಂಧಿ ಅವರ ನಾ‌ ನಾಯಕಿ ಕಾರ್ಯಕ್ರಮಕ್ಕೆ ನಮ್ಮ ವಿರೋಧವಿಲ್ಲ. ಆದರೆ, ನಾ ನಾಯಕಿ ಎಂದು ಸ್ವಯಂ ಆಗಿ ಹೇಳಿಕೊಳ್ಳುವ ಸ್ಥಿತಿ ಅವರಿಗೆ ಬಂದಿದೆ. ಅವರನ್ನು ನಾಯಕಿ ಮಾಡಲು ಕರ್ನಾಟಕದ ಮಹಿಳೆಯರು ಸಿದ್ಧರಿಲ್ಲ ಎಂದು ಹೇಳಿದರು.

ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ‌ ಕರೆ ಬಂದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಹೇಳಿದರು. ಕರೆಯ ಹಿಂದೆ ಯಾರಿದ್ದಾರೆ, ಹಿನ್ನೆಲೆ ಏನು ಹಾಗೂ ಯಾರು ಮಾರ್ಗದರ್ಶನ ನೀಡಿದ್ದಾರೆ ಎಂಬುದು ಮುಖ್ಯವಾಗಿದ್ದು, ಅದನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದರು.

ಯುವ ಜನೋತ್ಸವವನ್ನು, ಯುವ ವಿನಾಶೋತ್ಸವ' ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರದ್ದು ಯಥಾ ಬುದ್ಧಿ, ತಥಾ ಮಾತುಗಳು.‌ ಅವರಿಗೆ ವಿನಾಶದ ಕನಸುಗಳು, ಅದರಲ್ಲೂ ಕಾಂಗ್ರೆಸ್ ವಿನಾಶದ ಕನಸುಗಳು ಬೀಳುತ್ತಿವೆ. ಎಲ್ಲದರಲ್ಲೂ ಅವರು ವಿನಾಶವನ್ನೇ ನೋಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಒಳ್ಳೆಯ ಕೆಲಸವನ್ನು  ಮೆಚ್ಚುವುದು ಕಾಂಗ್ರೆಸ್ ನವರಿಗೆ ಗೊತ್ತಿಲ್ಲ. ಇತ್ತೀಚೆಗೆ ಅವರ ಭಾಷೆ, ನಡವಳಿಕೆ ಹಾಗೂ ಚಿಂತನೆ ಕೀಳುಮಟ್ಟದಿಂದ ಕೂಡಿವೆ. ದೇಶ ಹಾಗೂ ರಾಜ್ಯದ ಪ್ರಗತಿ ವಿಚಾರದಲ್ಲಿ ತೀರಾ ತಳಮಟ್ಟಕ್ಕಿಳಿಯುತ್ತಿರುವುದು, ಅವರ ಹತಾಶೆಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು‌ ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT