ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ 
ರಾಜಕೀಯ

ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಿಂದ 1.5 ಲಕ್ಷ ಕೋಟಿ ರೂ. ಲೂಟಿ:  ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ

ಬಿಜೆಪಿ ಸರ್ಕಾರವಿರುವ ಕರ್ನಾಟಕದಲ್ಲಿ ಪರಿಸ್ಥಿತಿ ತೀವ್ರ ಹದಗೆಟ್ಟಿರುವುದಾಗಿ ಕೇಳಿದ್ದು, ಭ್ರಷ್ಟಾಚಾರ ಮೂಲಕ ರೂ. 1. 5 ಲಕ್ಷ ಕೋಟಿ ಲೂಟಿ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಬೆಂಗಳೂರು: ಬಿಜೆಪಿ ಸರ್ಕಾರವಿರುವ ಕರ್ನಾಟಕದಲ್ಲಿ ಪರಿಸ್ಥಿತಿ ತೀವ್ರ ಹದಗೆಟ್ಟಿರುವುದಾಗಿ ಕೇಳಿದ್ದು, ಭ್ರಷ್ಟಾಚಾರ ಮೂಲಕ ರೂ. 1. 5 ಲಕ್ಷ ಕೋಟಿ ಲೂಟಿ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಇಂತಹ ಸರ್ಕಾರದಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ, ಉದ್ಯೋಗ ದೊರಕುವ ಭರವಸೆ ಇದೆಯೇ ? ಇವರಿಂದ ಭವಿಷ್ಯ ಉತ್ತಮಗೊಳ್ಳುವ ಭರವಸೆ ಇದೆಯೇ ಎಂದು ಸಭೆಯಲ್ಲಿದ್ದ ಜನರನ್ನು ಪ್ರಶ್ನಿಸಿದರು.

ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 'ನಾ ನಾಯಕಿ' ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ನಡೆದಿರುವ ಹಗರಣ ನಾಚಿಕೆಗೇಡಿತನ ಸಂಗತಿ. ಬಿಜೆಪಿ ಸರ್ಕಾರ ಪೊಲೀಸ್ ಪಡೆಗಳನ್ನೂ ಮಾರಾಟಕ್ಕೆ ಇಟ್ಟಿರುವುದಕ್ಕೆ ಇದೇ ಸಾಕ್ಷಿ ಎಂದರು. 

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಮ್ಮ ಜೀವನ ಉತ್ತಮವಾಗಿದೆಯೇ? ನಿಮ್ಮ ಜೀವನದಲ್ಲಿ ಏನಾದರೂ ಬದಲಾವಣೆಯಾಗಿದೆಯೇ? ಎಂದು ಪ್ರಶ್ನಿಸಿದ ಅವರು, ಮತದಾನ ಮಾಡುವ ಮೊದಲು ನಿಮ್ಮನ್ನು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT