ವೇದಿಕೆಯಲ್ಲಿ ನಿರೂಪಕಿಯನ್ನು ದಿಟ್ಟಿಸಿ ನೋಡಿದ ಮಾಜಿ ಸಿಎಂ ಸಿದ್ದರಾಮಯ್ಯ 
ರಾಜಕೀಯ

'ನಾ ನಾಯಕಿ' ಸಮಾವೇಶದಲ್ಲಿ ನಿರೂಪಕಿಯನ್ನು ದಿಟ್ಟಿಸಿ ನೋಡಿ ವೈರಲ್ ಆದ ಸಿದ್ದರಾಮಯ್ಯ ನೋಟ!

ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ಮಾತುಗಳು, ವರ್ತನೆಗಳು ಆಗಾಗ ಸೋಷಿಯಲ್ ಮೀಡಿಯಾಗಳಿಗೆ ಆಹಾರವಾಗುವುದುಂಟು. ಹಲವು ಬಾರಿ ಟ್ರೋಲ್ ಗೆ ಅವರು ತುತ್ತಾಗುತ್ತಾರೆ. 

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ಮಾತುಗಳು, ವರ್ತನೆಗಳು ಆಗಾಗ ಸೋಷಿಯಲ್ ಮೀಡಿಯಾಗಳಿಗೆ ಆಹಾರವಾಗುವುದುಂಟು. ಹಲವು ಬಾರಿ ಟ್ರೋಲ್ ಗೆ ಅವರು ತುತ್ತಾಗುತ್ತಾರೆ. 

ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ನ 'ನಾ ನಾಯಕಿ' ಸಮಾವೇಶ ಏರ್ಪಾಡಾಗಿತ್ತು. ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾರ್ಯಕ್ರಮದ ಕೇಂದ್ರಬಿಂದು. ಅರಮನೆ ಮೈದಾನ ಸುತ್ತಮುತ್ತ, ಕಾರ್ಯಕ್ರಮ ಸ್ಥಳದಲ್ಲಿ ಅಪಾರ ಸಂಖ್ಯೆಯಲ್ಲಿ ಕೈ ಅಭಿಮಾನಿಗಳು, ಕಾರ್ಯಕರ್ತರು ಜಮಾಯಿಸಿದ್ದರು.ಕೆಂಪೇಗೌಡ ಏರ್ ಪೋರ್ಟ್ ನಿಂದ  ಬೆಂಗಳೂರಿಗೆ ಬಂದಿಳಿದ ಪ್ರಿಯಾಂಕಾ ಅಭಿಮಾನಿಗಳತ್ತ, ಕೈ ಕಾರ್ಯಕರ್ತರ ನೋಡಿ ನಗು ಬೀರುತ್ತಾ ಕೈ ಕುಲುಕುತ್ತಾ ವೇದಿಕೆ ಕಡೆಗೆ ಸಾಗಿದರು.

ವೇದಿಕೆಯಲ್ಲಿ ನಾಯಕಿ ಸಮಾವೇಶದಲ್ಲಿ ಮಹಿಳೆಯರೇ ತುಂಬಿ ಹೋಗಿದ್ದರು. ನಿರೂಪಕಿ ತಮ್ಮ ಪಾಡಿಗೆ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದರು. ಪ್ರಿಯಾಂಕಾ ಗಾಂಧಿ ವೇದಿಕೆಗೆ ಎಂಟ್ರಿ ಕೊಟ್ಟು ಎಲ್ಲರನ್ನೂ ಔಪಚಾರಿಕವಾಗಿ ಮಾತನಾಡಿಸಿ ತಮ್ಮ ಸೀಟಿಗೆ ಹೋಗಿ ಕುಳಿತುಕೊಂಡರು.

ಕಾರ್ಯಕ್ರಮ ಆರಂಭವಾಯಿತು. ಪ್ರಾರಂಭದಲ್ಲಿ ಜ್ಯೋತಿ ಬೆಳಗಿಸಲು ಕಾಂಗ್ರೆಸ್ ನ ಹಿರಿಯ ಮತ್ತು ಪ್ರಮುಖ ನಾಯಕರನ್ನು ವೇದಿಕೆ ಮೇಲೆ ಕರೆಯಲಾಯಿತು. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ವೇದಿಕೆ ಹತ್ತಿ ದೀಪ ಬೆಳಗಿ ನಾಯಕಿ ಸಮಾವೇಶದಲ್ಲಿ ನಮಗೇನು ಕೆಲಸ ಎಂದು ಕೆಳಗೆ ಇಳಿದು ಹೋದರು. 

ವೇದಿಕೆಯಿಂದ ಕೆಳಗೆ ಇಳಿಯುವಾಗ ಸಿದ್ದರಾಮಯ್ಯನವರು ನಿರೂಪಕಿಯನ್ನು ನೋಡಿದ ರೀತಿಗೆ ಜನ ಬಿದ್ದುಬಿದ್ದು ನಗುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ನಿರೂಪಕಿಯನ್ನು ಮೇಲಿನಿಂದ ಕೆಳಗೊಮ್ಮೆ ದಿಟ್ಟಿಸಿ ನೋಡಿದ ರೀತಿ ಕ್ಯಾಮರಾ ಕಣ್ಣಿಗೆ ಸಿಕ್ಕಿಬಿದ್ದಿದ್ದು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ. ಯಾರಪ್ಪಾ ಇವಳು, ಓ ನೀನಾ ಎಂದು ಹೇಳುವ ರೀತಿ ಸಿದ್ದರಾಮಯ್ಯನವರು ಕೈಸನ್ನೆ ಮಾಡಿ ನಕ್ಕು ಕೆಳಗಿಳಿದು ಹೋಗುತ್ತಾರೆ.

ಯಾಕಾಗಿ ಸಿದ್ಧರಾಮಯ್ಯ ಈ ರೀತಿ ನೋಡಿದರು ಎಂದು ಅವರಿಗೇ ಗೊತ್ತು. ಕಾಂಗ್ರೆಸ್‌ ನಾಯಕಿಯೊಬ್ಬರ ಹೆಸರು ಹೇಳಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ನಿರೂಪಕಿ ಹೇಳುವ ಹೊತ್ತಿನಲ್ಲಿ ಸಿದ್ಧರಾಮಯ್ಯ ನಿರೂಪಕಿಯಿಂದ ಹಿಂಭಾಗದಿಂದ ಪಾಸ್‌ ಆಗುತ್ತಾರೆ. ಈ ವೇಳೆ ಆಕೆಯನ್ನೇ  ದಿಟ್ಟಿಸಿ ನೋಡುತ್ತಾರೆ. 

ಈ ಸೆಕೆಂಡ್ ಗಳ ವಿಡಿಯೊವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿ 'ಮೆನ್ ವಿಲ್‌ ಬಿ ಮೆನ್‌' ಎಂದು ಕೆಲವರು ಕಮೆಂಟ್ ಮಾಡುತ್ತಿದ್ದರೆ, ಇನ್ನು ಕೆಲವರು 'ದಿ ಬಾಯ್ಸ್‌' ಮೂಮೆಂಟ್‌ ಎಂದು ಪೋಸ್ಟ್‌ ಮಾಡಿದ್ದಾರೆ. ಸಿದ್ದರಾಮಯ್ಯನವರು ಆಚೆ ಹೋದ ನಂತರ ನಿರೂಪಕಿ ಕೂಡ ಯಾಕಪ್ಪಾ ನನ್ನನ್ನು ಅವರು ಆ ರೀತಿ ನೋಡಿದರು ಎನ್ನುವ ಅರ್ಥದಲ್ಲಿ ತಿರುಗಿ ನೋಡುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT