ಬಿ.ಕೆ ಹರಿಪ್ರಸಾದ್ ಮತ್ತು ಬಿ ಸಿ ಪಾಟೀಲ್ 
ರಾಜಕೀಯ

ವೇಶ್ಯೆಯರ ರೀತಿ ಶಾಸಕ ಸ್ಥಾನ ಮಾರಿಕೊಂಡು 17 ಮಂದಿ ಬಿಜೆಪಿಗೆ ಹೋದರು: ಹಾಗಾದರೇ ಹರಿಪ್ರಸಾದ್ ರನ್ನ ಪಿಂಪ್ ಎನ್ನಬಹುದೇ?

ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಕೆಲ ಶಾಸಕರು ವೇಶ್ಯೆಯರ ರೀತಿ ತಮ್ಮ ಶಾಸಕ ಸ್ಥಾನವನ್ನ ಮಾರಿಕೊಂಡಿದ್ದಾರೆ ಎಂದು ಹೇಳಿಕೆಯನ್ನ ನೀಡಿದ್ದಾರೆ.

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವಹೇಳನಕಾರಿ ಮಾತನ್ನ ಆಡಿ ಯಡವಟ್ಟು ಮಾಡ್ಕೊಂಡಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಕೆಲ ಶಾಸಕರು ವೇಶ್ಯೆಯರ ರೀತಿ ತಮ್ಮ ಶಾಸಕ ಸ್ಥಾನವನ್ನ ಮಾರಿಕೊಂಡಿದ್ದಾರೆ ಎಂದು ಹೇಳಿಕೆಯನ್ನ ನೀಡಿದ್ದಾರೆ.

ನಾವೆಲ್ಲರೂ ಸಮ್ಮಿಶ್ರ ಸರ್ಕಾರವನ್ನು ಮಾಡಿರೋದನ್ನು ನೋಡಿದ್ವಿ. ಆದರೆ ಕೆಲವು ಶಾಸಕರು ತಮ್ಮನ್ನು ಮಾರಾಟ. ತಮ್ಮ ಹೊಟ್ಟೆ ಪಾಡಿಗಾಗಿ ಮಹಿಳೆ ತನ್ನನ್ನು ಮಾರಿಕೊಂಡಾಗ ಅವಳಿಗೆ ಯಾವುದೆಲ್ಲ ಹೆಸರಲ್ಲಿ ಕರೆಯುತ್ತೀವಿ.. ವೇಶ್ಯೆ ಅಂತಾ ಹೇಳ್ತೀವಿ. ಆದರೆ ತಮ್ಮನೆಲ್ಲಾ ಮಾರಾಟ ಮಾಡಿರುವಂತಹ ಈ ಶಾಸಕರಿಗೆ ನೀವು ಏನ್ ಕರೀತಿರಾ ಎಂದು ನಾನು ನಿಮಗೆ ಬಿಟ್ಟಿರ್ತೀನಿ ಎಂದು ಹೇಳಿದ್ದಾರೆ.

ವೇಶ್ಯೆಯರ ರೀತಿ ಶಾಸಕ ಸ್ಥಾನ ಮಾರಿಕೊಂಡು 17 ಮಂದಿ ಬಿಜೆಪಿಗೆ ಹೋದರು ಎಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ. ಹರಿಪ್ರಸಾದ್ ಯಾವ ಚುನಾವಣೆ ಗೆದ್ದು ಬಂದಿದ್ದಾರೆ? ಹಿಂಬಾಗಿಲಿನಿಂದ ಬಂದು ಎಂ.ಎಲ್.ಸಿ ಆಗಿದ್ದಾರೆ. ಹಾಗಾದರೆ, ಹಿಂಬಾಗಿಲಿನಿಂದ ಬಂದ ಇವರನ್ನು ‘ಪಿಂಪ್’ ಎಂದು ಕರೆಯಬಹುದಾ’ ಎಂದು ಪ್ರಶ್ನಿಸಿದ್ದಾರೆ.

‘ಆದರೆ ನಾವು ಹಾಗೆ ಕರೆಯಲು ಆಗಲ್ಲ. ಇದು ಅವರ ಸಂಸ್ಕೃತಿ ತೋರಿಸುತ್ತದೆ. ಹಾಗೆ ಮಾತನಾಡಿದರೆ ಜನ ಬೆನ್ನತ್ತಿ ಹೊಡೆಯುತ್ತಾರೆ. ಕಾಂಗ್ರೆಸ್‌ನವರು ಮಾಡಿದ ದ್ರೋಹದಿಂದ ನಾವು ರಾಜೀನಾಮೆ ಕೊಟ್ಟು ಬಂದೆವು. ಮತ್ತೆ ಜನಾದೇಶ ಪಡೆದೇ ಶಾಸಕರಾಗಿದ್ದೇವೆ. ನಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ‘ ಎಂದು ಅವರು ಸಮರ್ಥಿಸಿಕೊಂಡರು.

ಹರಿಪ್ರಸಾದ ಯಾವ ಚುನಾವಣೆಯಲ್ಲಿ ಗೆದ್ದಿದ್ದಾನೆ? ನಾನು ಜನರಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದೇನೆ. ಹರಿಪ್ರಸಾದ ಎಲ್ಲಿ ಆಯ್ಕೆಯಾಗಿದ್ದಾರೆ ಎಂದು ಬಿ.ಸಿ.ಪಾಟೀಲ್ ಪ್ರಶ್ನಿಸಿದರು. ಬಿ.ಕೆ.ಹರಿಪ್ರಸಾದ ಜನರಿಂದ ನೇರವಾಗಿ ಆಯ್ಕೆಯಾದವರಲ್ಲ. ಅವರು ಹಿಂದಿನ ಬಾಗಿಲಿನಿಂದ ಬಂದು ಶಾಸಕರಾಗಿದ್ದಾರೆ. ಈ ರೀತಿ ಹಿಂಬಾಗಿಲಿನಿಂದ ಬರುವವರಿಗೆ ಏನಂತ ಕರೆಯಬೇಕು? ನಾನು ಆ ರೀತಿ ಪದಪ್ರಯೋಗ ಮಾಡುವುದಿಲ್ಲ ಎಂದು ಬಿ.ಸಿ.ಪಾಟೀಲ್ ತಿರುಗೇಟು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT