ಬಿ.ಕೆ ಹರಿಪ್ರಸಾದ್ ಮತ್ತು ಬಿ ಸಿ ಪಾಟೀಲ್ 
ರಾಜಕೀಯ

ವೇಶ್ಯೆಯರ ರೀತಿ ಶಾಸಕ ಸ್ಥಾನ ಮಾರಿಕೊಂಡು 17 ಮಂದಿ ಬಿಜೆಪಿಗೆ ಹೋದರು: ಹಾಗಾದರೇ ಹರಿಪ್ರಸಾದ್ ರನ್ನ ಪಿಂಪ್ ಎನ್ನಬಹುದೇ?

ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಕೆಲ ಶಾಸಕರು ವೇಶ್ಯೆಯರ ರೀತಿ ತಮ್ಮ ಶಾಸಕ ಸ್ಥಾನವನ್ನ ಮಾರಿಕೊಂಡಿದ್ದಾರೆ ಎಂದು ಹೇಳಿಕೆಯನ್ನ ನೀಡಿದ್ದಾರೆ.

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಅವಹೇಳನಕಾರಿ ಮಾತನ್ನ ಆಡಿ ಯಡವಟ್ಟು ಮಾಡ್ಕೊಂಡಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಕೆಲ ಶಾಸಕರು ವೇಶ್ಯೆಯರ ರೀತಿ ತಮ್ಮ ಶಾಸಕ ಸ್ಥಾನವನ್ನ ಮಾರಿಕೊಂಡಿದ್ದಾರೆ ಎಂದು ಹೇಳಿಕೆಯನ್ನ ನೀಡಿದ್ದಾರೆ.

ನಾವೆಲ್ಲರೂ ಸಮ್ಮಿಶ್ರ ಸರ್ಕಾರವನ್ನು ಮಾಡಿರೋದನ್ನು ನೋಡಿದ್ವಿ. ಆದರೆ ಕೆಲವು ಶಾಸಕರು ತಮ್ಮನ್ನು ಮಾರಾಟ. ತಮ್ಮ ಹೊಟ್ಟೆ ಪಾಡಿಗಾಗಿ ಮಹಿಳೆ ತನ್ನನ್ನು ಮಾರಿಕೊಂಡಾಗ ಅವಳಿಗೆ ಯಾವುದೆಲ್ಲ ಹೆಸರಲ್ಲಿ ಕರೆಯುತ್ತೀವಿ.. ವೇಶ್ಯೆ ಅಂತಾ ಹೇಳ್ತೀವಿ. ಆದರೆ ತಮ್ಮನೆಲ್ಲಾ ಮಾರಾಟ ಮಾಡಿರುವಂತಹ ಈ ಶಾಸಕರಿಗೆ ನೀವು ಏನ್ ಕರೀತಿರಾ ಎಂದು ನಾನು ನಿಮಗೆ ಬಿಟ್ಟಿರ್ತೀನಿ ಎಂದು ಹೇಳಿದ್ದಾರೆ.

ವೇಶ್ಯೆಯರ ರೀತಿ ಶಾಸಕ ಸ್ಥಾನ ಮಾರಿಕೊಂಡು 17 ಮಂದಿ ಬಿಜೆಪಿಗೆ ಹೋದರು ಎಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ. ಹರಿಪ್ರಸಾದ್ ಯಾವ ಚುನಾವಣೆ ಗೆದ್ದು ಬಂದಿದ್ದಾರೆ? ಹಿಂಬಾಗಿಲಿನಿಂದ ಬಂದು ಎಂ.ಎಲ್.ಸಿ ಆಗಿದ್ದಾರೆ. ಹಾಗಾದರೆ, ಹಿಂಬಾಗಿಲಿನಿಂದ ಬಂದ ಇವರನ್ನು ‘ಪಿಂಪ್’ ಎಂದು ಕರೆಯಬಹುದಾ’ ಎಂದು ಪ್ರಶ್ನಿಸಿದ್ದಾರೆ.

‘ಆದರೆ ನಾವು ಹಾಗೆ ಕರೆಯಲು ಆಗಲ್ಲ. ಇದು ಅವರ ಸಂಸ್ಕೃತಿ ತೋರಿಸುತ್ತದೆ. ಹಾಗೆ ಮಾತನಾಡಿದರೆ ಜನ ಬೆನ್ನತ್ತಿ ಹೊಡೆಯುತ್ತಾರೆ. ಕಾಂಗ್ರೆಸ್‌ನವರು ಮಾಡಿದ ದ್ರೋಹದಿಂದ ನಾವು ರಾಜೀನಾಮೆ ಕೊಟ್ಟು ಬಂದೆವು. ಮತ್ತೆ ಜನಾದೇಶ ಪಡೆದೇ ಶಾಸಕರಾಗಿದ್ದೇವೆ. ನಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದೇವೆ‘ ಎಂದು ಅವರು ಸಮರ್ಥಿಸಿಕೊಂಡರು.

ಹರಿಪ್ರಸಾದ ಯಾವ ಚುನಾವಣೆಯಲ್ಲಿ ಗೆದ್ದಿದ್ದಾನೆ? ನಾನು ಜನರಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದೇನೆ. ಹರಿಪ್ರಸಾದ ಎಲ್ಲಿ ಆಯ್ಕೆಯಾಗಿದ್ದಾರೆ ಎಂದು ಬಿ.ಸಿ.ಪಾಟೀಲ್ ಪ್ರಶ್ನಿಸಿದರು. ಬಿ.ಕೆ.ಹರಿಪ್ರಸಾದ ಜನರಿಂದ ನೇರವಾಗಿ ಆಯ್ಕೆಯಾದವರಲ್ಲ. ಅವರು ಹಿಂದಿನ ಬಾಗಿಲಿನಿಂದ ಬಂದು ಶಾಸಕರಾಗಿದ್ದಾರೆ. ಈ ರೀತಿ ಹಿಂಬಾಗಿಲಿನಿಂದ ಬರುವವರಿಗೆ ಏನಂತ ಕರೆಯಬೇಕು? ನಾನು ಆ ರೀತಿ ಪದಪ್ರಯೋಗ ಮಾಡುವುದಿಲ್ಲ ಎಂದು ಬಿ.ಸಿ.ಪಾಟೀಲ್ ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!