ಸಂಗ್ರಹ ಚಿತ್ರ 
ರಾಜಕೀಯ

'ದಳ'ಪತಿಗಳಿಗೆ ಶಾಕ್: ನೆಲಮಂಗಲದ 11 ನಾಯಕರು ಕಾಂಗ್ರೆಸ್ ಗೆ ಸೇರ್ಪಡೆ

ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ನೆಲಮಂಗಲದ ಜೆಡಿಎಸ್ ನಾಯಕರು ಪಕ್ಷದ ಮುಖಂಡರಿಗೆ ಶಾಕ್ ನೀಡಿದ್ದು, 11 ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ನೆಲಮಂಗಲದ ಜೆಡಿಎಸ್ ನಾಯಕರು ಪಕ್ಷದ ಮುಖಂಡರಿಗೆ ಶಾಕ್ ನೀಡಿದ್ದು, 11 ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನೆಲಮಂಗಲ ನಗರಸಭೆಯ ಅಧ್ಯಕ್ಷೆ ಲತಾ ಹೇಮಂತ್ ಕುಮಾರ್, ರಾಜಮ್ಮ ಪಿಳ್ಳಪ್ಪ, ಆನಂದ್, ಆಂಜಿನಪ್ಪ, ಅಂಜನಮೂರ್ತಿ( ಪಾಪಣಿ), ದಾಕ್ಷಾಯಿಣಿ ರವಿ ಕುಮಾರ್, ಪ್ರಸಾದ್, ಚೇತನ್, ಪುಷ್ಪಲತಾ ಮಾರೇಗೌಡ, ಭಾರತಿ ಬಾಯಿ ನಾರಾಯಣ್ ರಾವ್ ಸೇರಿದಂತೆ ಜೆಡಿಎಸ್ ನ 11 ಸದಸ್ಯರು ಶುಕ್ರವಾರ ಕಾಂಗ್ರೆಸ್ ಪಕ್ಷ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಗೃಹ ಕಚೇರಿಯಲ್ಲಿ ಎಲ್ಲರೂ ಕಾಂಗ್ರೆಸ್ ಸೇರಿದರು. ವಿಧಾನ ಪರಿಷತ್ ನ ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಮತ್ತು ಕೆಪಿಸಿಸಿ ಸದಸ್ಯ ‌ಎನ್. ಶ್ರೀನಿವಾಸ್ ಉಪಸ್ಥಿತರಿದ್ದರು.

ನೆಲಮಂಗಲ ನಗರಸಭೆಯಲ್ಲಿ ಜೆಡಿಎಸ್ 14 ಸದಸ್ಯರನ್ನು ಹೊಂದಿತ್ತು. 11 ಸದಸ್ಯರ ಪಕ್ಷಾಂತರದೊಂದಿಗೆ ಈಗ ಮೂವರಷ್ಟೇ ಜೆಡಿಎಸ್ ನಲ್ಲಿ ಉಳಿದುಕೊಂಡಿದ್ದಾರೆ. ಇದರೊಂದಿಗೆ ನೆಲಮಂಗಲ ನಗರಸಭೆಯಲ್ಲಿ ಜೆಡಿಎಸ್ ಅಧಿಕಾರ ಕಳೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT