ಭವಾನಿ ರೇವಣ್ಣ 
ರಾಜಕೀಯ

ಹಾಸನ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಜೆಡಿಎಸ್ ಅಭ್ಯರ್ಥಿ: ಸ್ವಯಂ ಘೋಷಿಸಿಕೊಂಡ ಭವಾನಿ ರೇವಣ್ಣ

ತೀವ್ರ ಕುತೂಹಲ ಕೆರಳಿಸಿರುವ ಹಾಸನ  ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಗೊಂದಲ ಮುಂದುವರಿದಿರುವಾಗಲೇ, ನಾನೇ ಅಭ್ಯರ್ಥಿ ಎಂದು ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ ಹೇಳಿಕೊಂಡಿದ್ದಾರೆ.

ಹಾಸನ: ತೀವ್ರ ಕುತೂಹಲ ಕೆರಳಿಸಿರುವ ಹಾಸನ  ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಗೊಂದಲ ಮುಂದುವರಿದಿರುವಾಗಲೇ, ನಾನೇ ಅಭ್ಯರ್ಥಿ ಎಂದು ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ ಹೇಳಿಕೊಂಡಿದ್ದಾರೆ.

ಹಾಸನ ತಾಲೂಕಿನ ಸಾಲಗಾಮೆ ಹೋಬಳಿ ಕಕ್ಕೇಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಣ್ಣಪ್ಪ ಸ್ವಾಮಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ಜೆಡಿಎಸ್‌ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ಪಲ್ಪ ದಿನಗಳಲ್ಲೇ ನನ್ನ ಹೆಸರು ಘೋಷಣೆಯಾಗಲಿದೆ ಎಂದಿದ್

ತಾವೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್.​ಡಿ ರೇವಣ್ಣ ಅವರ ಪತ್ನಿ, ಭವಾನಿ ರೇವಣ್ಣ ಸ್ವಯಂ ಘೋಷಣೆ ಮಾಡಿಕೊಂಡಿದ್ದಾರೆ. ಅಲ್ಲದೇ ಶೀಘ್ರದಲ್ಲೇ ಪಟ್ಟಿಯಲ್ಲಿ ಹೆಸರು ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಹಾಸನದಿಂದ ರೇವಣ್ಣ ಸ್ಪರ್ಧೆ ಮಾಡುತ್ತಾರಾ? ಭವಾನಿ ರೇವಣ್ಣ ಅವರು ಅಭ್ಯರ್ಥಿ ಆಗುತ್ತಾರಾ ಎಂಬ ಚರ್ಚೆ ಹಲವು ದಿನಗಳಿಂದ ಜೋರಾಗಿದೆ. ಇದರೊಂದಿಗೆ ಶಾಸಕ ಪ್ರೀತಂ ಗೌಡ ಅವರ ಸವಾಲನ್ನು ಜೆಡಿಎಸ್ ಸ್ವೀಕಾರ ಮಾಡುತ್ತಾ ಎಂಬ ಕುತೂಹಲವೂ ಹಲವರನ್ನು ಕಾಡುತ್ತಿತ್ತು.

ಕಳೆದ ಬಾರಿ ಹಾಸನ ವಿಧಾನಸಭಾ ಕ್ಷೇತ್ರ ಬಿಜೆಪಿ ಕ್ಷೇತ್ರವಾಗಿ ಕೆಲವು ಕೆಲಸ, ಕಾರ್ಯಗಳು ಉಳಿದುಕೊಂಡಿವೆ. ಚುನಾವಣೆ ಇನ್ನೇನು ಹತ್ತಿರ ಬಂದಿದೆ. ಈ ಸಂದರ್ಭದಲ್ಲಿ ಜೆಡಿಎಸ್‌ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕೆಂದು ಎಲ್ಲರೂ ಕೂಡ ಮಾತನಾಡಿಕೊಂಡು ನಿರ್ಣಯ ತಗೊಂಡಿದ್ದಾರೆ. ಹಾಗಾಗಿ ಇನ್ನು ಸ್ವಲ್ಪ ದಿವಸದಲ್ಲೇ ನಮ್ಮ ಹೆಸರು ಕೂಡ ಹೇಳುತ್ತಾರೆ. ಮುಂದಿನ ಪಟ್ಟಿಯಲ್ಲಿ ನನ್ನ ಹೆಸರು ಪ್ರಕಟ ಆಗಲಿದೆ ಎಂದು ಹೇಳಿದ್ದಾರೆ.

ಕಳೆದ ಒಂದು ವರ್ಷದಿಂದ ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಭವಾನಿ ರೇವಣ್ಣ ಅವರೇ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿತ್ತು. ಅಲ್ಲದೇ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಅವರು ಕೂಡ ನಿರಂತರವಾಗಿ ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಈಗಾಗಲೇ ಜೆಡಿಎಸ್​ 2023ರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿದೆ.

ಜನರ ಪರಿಚಯ ಇದ್ದರೆ, ಊರಿನ ಪರಿಚಯ ಆಗುತ್ತದೆ. ಮುಂದಿನ ದಿನಗಳಲ್ಲಿ ಕೆಲಸ ಮಾಡಲು ನನಗೂ ಒಳ್ಳೆಯದು, ಅನುಕೂಲ ಆಗಲಿದೆ. ಅದಕ್ಕಾಗಿ ಕ್ಷೇತ್ರ ಪ್ರವಾಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಕೆಲಸ ಮಾಡಲು, ಭಗವಂತ ನನಗೆ ಆಶೀರ್ವಾದ ಮಾಡಲಿ ಎಂದು ಬೇಡುವೆ. ಮತ್ತೊಮ್ಮೆ ಈ ಊರಿಗೆ ಬರುವೆ, ನಿಮ್ಮನ್ನು ಮತ್ತೆ ಭೇಟಿ ಮಾಡುವೆ ಎಂದು ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT