ಜೆ.ಸಿ ಮಾಧುಸ್ವಾಮಿ 
ರಾಜಕೀಯ

'ಸವೆಸಿದ ಹಾದಿಯ ಬಗ್ಗೆ ಹೆಮ್ಮಯಿದೆ: ಹಲಾಲುಟೋಪಿ ಕೆಲಸ ಮಾಡಿದವರಲ್ಲ, ಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ? '

ನೆಟ್ಟಗೆ ಆಡಳಿತ ನಡೆಸಲು ಬಾರದ ರಾಜ್ಯ ಬಿಜೆಪಿ ಸರ್ಕಾರದ ಕುಕೃತ್ಯಗಳಿಗೆ ಬೌದ್ಧಿಕ ಪೋಷಾಕು ತೊಡಿಸಿ, ಸಮರ್ಥನೆಗೆ ಇಳಿಯುವ ಮೊಂಡುವಾದಿ ಸಚಿವ  ಜೆಸಿ ಮಾಧುಸ್ವಾಮಿ ಅವರೆ, ದೇವೇಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ?

ಬೆಂಗಳೂರು: ನೆಟ್ಟಗೆ ಆಡಳಿತ ನಡೆಸಲು ಬಾರದ ರಾಜ್ಯ ಬಿಜೆಪಿ ಸರ್ಕಾರದ ಕುಕೃತ್ಯಗಳಿಗೆ ಬೌದ್ಧಿಕ ಪೋಷಾಕು ತೊಡಿಸಿ, ಸಮರ್ಥನೆಗೆ ಇಳಿಯುವ ಮೊಂಡುವಾದಿ ಸಚಿವ ಜೆಸಿ ಮಾಧುಸ್ವಾಮಿ ಅವರೆ, ದೇವೇಗೌಡರ ಬಗ್ಗೆ ಮಾತನಾಡದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲವೆ? ಅಥವಾ ಈ ರೀತಿ ಮಾತಿನ ಬೇಧಿಯಿಂದ ಪ್ರಚಾರ ಗಿಟ್ಟಿಸಿಕೊಳ್ಳುವ ಹುನ್ನಾರವೆ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಜೆಡಿಎಸ್, ಆಡಳಿತ ನಡೆಸುವ ಬದಲು ಸರ್ಕಾರವು ಏನೋ ಒಂದು ನಿಭಾವಣೆ ಮಾಡುತ್ತಾ, ಕಾಲತಳ್ಳುತ್ತಿದ್ದೆ ಎಂದು ಹೇಳಿದ ಭೂಪ ನೀವೇ ಅಲ್ಲವೆ? 40% ಕಮಿಷನ್ ಸರ್ಕಾರವೆಂದೆ ಕುಖ್ಯಾತವಾಗಿರುವ ನಿಮ್ಮ ಸರ್ಕಾರ ದೋಚುತ್ತಿರುವ ಸಾರ್ವಜನಿಕರ ಹಣದ ಬಗ್ಗೆ ಲೆಕ್ಕ‌ ಇದೆಯೆ?ಯಾವ ಮುಖ ಇಟ್ಟುಕೊಂಡು ದೇವೇಗೌಡರ ಕುಟುಂಬದ ಬಗ್ಗೆ ಜನತೆಯ ಮುಂದೆ ಹಸಿಸುಳ್ಳು ಹೇಳುತ್ತಿದ್ದೀರಿ?  ಎಂದು ತಿರುಗೇಟು ನೀಡಿದೆ.

ಮಾಧುಸ್ವಾಮಿ ಅವರೆ, ದೇವೇಗೌಡರು ಕೆಳಮಟ್ಟದಿಂದ ಬೆಳೆದು ದೇಶದ ಪ್ರಧಾನಿ ಸ್ಥಾನ ಅಲಂಕರಿಸಿದವರು. ರಾಜ್ಯದ ಜನತೆಯ ಸ್ವಾಭಿಮಾನ ಮತ್ತು ನೆಮ್ಮದಿ ಕಾಪಾಡಲು ಈ ಇಳಿವಯಸ್ಸಲ್ಲೂ ಅವರು ಕೆಲಸ ಮಾಡುತ್ತಿದ್ದಾರೆ. ಸವೆಸಿದ ಹಾದಿಯ ಬಗ್ಗೆ ದೇವೇಗೌಡರ ಕುಟುಂಬಕ್ಕೆ ಹೆಮ್ಮಯಿದೆ. ಹಲಾಲುಟೋಪಿ ಕೆಲಸ ಮಾಡುತ್ತಾ, ಮೇಲೆ ಬಂದವರಲ್ಲ ಅವರು ಎಂದು ಟಾಂಗ್ ಕೊಟ್ಟಿದೆ.

ಸೋಲು-ಗೆಲುವುಗಳಿಂದ ಯಾರೂ ಹೊರತಾಗಿಲ್ಲ. ಆದರೆ, ಅಧಿಕಾರವಿಲ್ಲದಿದ್ದರೂ ಕನ್ನಡಿಗರ ಏಳ್ಗೆಗೆ ಪ್ರಾಮಾಣಿಕವಾಗಿ ದುಡಿಯುವ ದೇವೇಗೌಡರ ಬಗ್ಗೆ ನಾಲಿಗೆ ಹರಿಬಿಟ್ಟರೆ, ಜನತೆ ನಿಮಗೆ ಚುನಾವಣೆಯಲ್ಲಿ ಉತ್ತರ ನೀಡುತ್ತಾರೆ. ನಿಮ್ಮ ದುರಹಂಕಾರದ ಕತೆ ರಾಜ್ಯದ ಜನತೆಗೆ ಗೊತ್ತೇ ಇದೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್